ಜನವಾಹಿನಿ NEWS ಸಿದ್ದಾಪುರ: ಸಿದ್ದಾಪುರ ಸಮೀಪದ ಪಳ್ಳಕೆರೆ ತೋಟದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಬೃಹತ್ ಒಂಟಿ ಸಲವೊಂದು ಪ್ರತ್ಯಕ್ಷವಾಗುವ ಮೂಲಕ ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.
ಬೆಳಗ್ಗೆ 7.30 ರ ಸುಮಾರಿಗೆ ಕಾಡಾನೆಯೊಂದು ರಸ್ತೆ ಮಧ್ಯೆ ಸಾಗುತ್ತಿರುವ ದೃಶ್ಯ ಕಂಡುಬಂದಿದ್ದು, ಸ್ಥಳೀಯರು ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದೆ.
ಪಳ್ಳಕೆರೆ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಕಾಡಾನೆಗ ಹಾವಳಿ ಹೆಚ್ಚಾಗಿದ್ದು ಕೂಡಲೇ ಕಾಡಾನೆಗಳನ್ನು ಅರಣ್ಯಕ್ಕಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.







