ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ : ಎ.ಎಸ್.ಪೊನ್ನಣ್ಣ
ಮಡಿಕೇರಿ : ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು ಕ್ರೀಡಾ ಅಸೋಷಿಯೇಷನ್ ಇವರ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಗುರುವಾರ ನಡೆದ “ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡಗಿನ ಜನರು ಹಿಂದಿನಿಂದಲೂ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿ ಜೊತೆಗೆ ಕಲೆ, ಸಂಸ್ಕøತಿ, ಭಾಷೆ ಉಳಿಸಿ ಬೆಳೆಸಿಕೊಂಡು ಬಂದಿದ್ದು, ಅದನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಆಟ್ಪಾಟ್ ಜೊತೆಗೆ ಸಂಸ್ಕøತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಜವಾಬ್ದಾರಿಯಿದ್ದು, ಈ ಬಗ್ಗೆ ಗಮನಹರಿಸುವಂತೆ ಎ.ಎಸ್.ಪೊನ್ನಣ್ಣ ಅವರು ಸಲಹೆ ನೀಡಿದರು.
‘ಕೊಡವ ಭಾಷಿಕ ಜನರ ಸಾಹಿತ್ಯ, ಸಂಸ್ಕøತಿ, ಕಲೆಗಳು ಇಡೀ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಗೌರವಿಸುತ್ತಾರೆ ಎಂಬುದನ್ನು ಯಾರೂ ಸಹ ಮರೆಯಬಾರದು. ಕೊಡಗಿನ ಸಂಸ್ಕøತಿ ಬಗ್ಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಸಹ ಮೆಚ್ಚುಗೆ ಇದ್ದು, ಅಷ್ಟರ ಮಟ್ಟಿಗೆ ಶ್ರೀಮಂತಿಕೆ ಹೊಂದಿದೆ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲಾ ಕೊಡವ ಭಾಷಿಕರ ಕರ್ತವ್ಯವಾಗಿದೆ ಎಂದರು.’
ಕೊಡವ ಭಾಷಿಕ ಸಂಸ್ಕøತಿಯು ವಿಭಿನ್ನತೆ ಹೊಂದಿದ್ದು, ಎಲ್ಲೆಡೆ ಗಮನಸೆಳೆಯುತ್ತದೆ. ಅದನ್ನು ಅರ್ಥ ಮಾಡಿಕೊಂಡು ಮತ್ತಷ್ಟು ಕೊಡವ ಸಂಸ್ಕøತಿ, ಪರಂಪರೆ ಮತ್ತು ಕಲೆಗಳನ್ನು ಔನ್ನತ್ಯಕ್ಕೆ ಕೊಂಡೊಯ್ಯಬೇಕು. ಆ ನಿಟ್ಟಿನಲ್ಲಿ ಅಕಾಡೆಮಿಯ ಎಲ್ಲರೂ ಶ್ರಮಿಸಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ರಾಷ್ಟ್ರದಲ್ಲಿ 140 ಕೋಟಿ ಜನಸಂಖ್ಯೆ ಹೆಚ್ಚಿದೆ. ಆದರೆ ಕೊಡವ ಭಾಷಿಕ ಜನಾಂಗದವರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದರೂ ಸಹ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಮತ್ತು ಮಾಡುತ್ತಿರುವುದನ್ನು ಮರೆಯುವಂತಿಲ್ಲ ಎಂದು ಶಾಸಕರು ತಿಳಿಸಿದರು.
ಬಹು ವರ್ಷಗಳ ನಂತರ ಭಾರತ ಮುಖ್ಯ ಹಾಕಿ ತಂಡಕ್ಕೆ ಜಿಲ್ಲೆಯ ಚಂದೂರ ಬಿ.ಪೂವಣ್ಣ ಆಯ್ಕೆಯಾಗಿರುವುದು ವಿಶೇಷವಾಗಿದೆ ಎಂದು ಇದೇ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರ ಅಕಾಡೆಮಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದು, ಅಕಾಡೆಮಿಯ ಎಲ್ಲರೂ ಒಟ್ಟುಗೂಡಿ ತಂಡವಾಗಿ ಉತ್ತಮ ಕಾರ್ಯಕ್ರಮ ಆಯೋಜಿಸಿಕೊಂಡು ಹೋಗಬೇಕು ಎಂದು ಶಾಸಕರು ಸಲಹೆ ಮಾಡಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ ಕೊಡವ ಭಾಷಿಕ 21 ಮೂಲ ಜನಾಂಗದವರು ಕೃಷಿ ಭೂಮಿಯನ್ನು ಪೂಜಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಕೊಡವ ಭಾಷಿಕರಿಗೆ ಭೂಮಿ, ತೋಟ, ಬಾಣೆಯು ಪಾರಂಪರಿಕವಾಗಿ ಬಂದಿದ್ದು, ಇದನ್ನು ಉಳಿಸಿಕೊಂಡು ಬರಬೇಕು. ಕಾವೇರಿ ಸಂಕ್ರಮಣ, ಭೂಮಿತಾಯಿ ಪೂಜಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಿಂದಿನ ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಕೊಡವ ಭಾಷಿಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಷಿಯೇಷನ್ ಅಧ್ಯಕ್ಷರಾದ ಬಾಚಮ್ಮಂಡ ಲವ ಚಿಣ್ಣಪ್ಪ, ನಾಪೋಕ್ಲು ಕಾಫಿ ಪ್ಲಾಂಟರ್ ಬಿದ್ದಾಟಂಡ ಜೀವನ ತಿಮ್ಮಯ್ಯ, ಬಿದ್ದಾಟಂಡ ಕುಟುಂಬದ ಅಧ್ಯಕ್ಷರಾದ ಕಾರ್ಯಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ, ಕೃಷಿಕರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಲಿಯಂಡ ಸಂಪನ್ ಸೋಮಣ್ಣ, ಕುಡಿಯರ ಮುತ್ತಪ್ಪ, ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಕುಡಿಯರ ಕಾವೇರಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ ಮತ್ತು ನಾಪಂಡ ಸಿ. ಗಣೇಶ್, ಪೊನ್ನಿರ ಯು.ಗಗನ್, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ ಇತರರು ಇದ್ದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಏರ್ಪಡಿಸಲಾಗಿದ್ದ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸುತ್ತಮುತ್ತಲಿನ ಸುಮಾರು 13 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ನಾಟಿ ಓಟ, ಭತ್ತ ಪೈರು ಕೀಳುವ ಮತ್ತಿತರ ಸ್ಪರ್ಧೆಗಳಲ್ಲಿ ಲವಲವಿಕೆಯಿಂದ ಪಾಲ್ಗೊಂಡಿದ್ದು ಗಮನ ಸೆಳೆಯಿತು.
ಹಿರಿಯರು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಗಮನ ಸೆಳೆದರು.
ಸದಸ್ಯರಾದ ನಾಪಂಡ ಸಿ.ಗಣೇಶ್ ಸ್ವಾಗತಿಸಿದರು. ಚೆಪ್ಪುಡಿರ ಎಸ್.ಉತ್ತಪ್ಪ ಪ್ರಾರ್ಥಿಸಿದರು. ಮಾಳೇಟಿರ ಶ್ರೀನಿವಾಸ್ ನಿರೂಪಿಸಿದರು, ಪೊನ್ನಿರ ಯು.ಗಗನ್ ವಂದಿಸಿದರು.








