ಜನವಾಹಿನಿ NEWS ಕುಶಾಲನಗರ : ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುನೀತ್ ಕೆರೆಹಳ್ಳಿ ಆಗಮನದ ಹಿನ್ನೆಲೆ ಕುಶಾಲನಗರಕ್ಕೆ ಹೆಚ್ಚಿನ ಸಂಖ್ಯೆಯ ಹಿಂದುಪರ ಕಾರ್ಯಕರ್ತರು ಆಗಮಿಸಿದ್ದು, ಭಾಷಣಕ್ಕೆ ಅವಕಾಶ ಕಲ್ಪಿಸುವಂತೆ ಕಾರ್ಯಕರ್ತರ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಕಾರ್ಯಕರ್ತರು ಪುನಿತ್ ರನ್ನು ವಶಕ್ಕೆ ಪಡೆಯಲು ಬಿಡದೆ ರಕ್ಷಣಾ ಕವಚ ರಚಿಸಿದ್ದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ಥ ಗೊಂಡ ಪ್ರಸಂಗ ನಡೆದಿದೆ.







