ಗುಂಪೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನ ಗೆರಟಿಗನಬೆಲೆ ಗ್ರಾಮ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ.
ತಾಲ್ಲೂಕಿನ ಗೆರಟಿಗನಬೆಲೆ ಗ್ರಾಮದಲ್ಲಿ ಹತ್ತಾರು ಮಂದಿ ಸೇರಿ ಓರ್ವ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕನನ್ನ ಮಹಿಳೆ ಬಿಡಿಸಲು ಮುಂದಾದರೂ ಗುಂಪೊಂದು ಬಿಡದೆ ಹಲ್ಲೆ ನಡೆಸಿದೆ.
ಹಣಕಾಸಿನ ವಿಚಾರಕ್ಕೆ ನಡೆದಿರುವ ಗಲಾಟೆ ಇದಾಗಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.







