Breaking News :

ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

  ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ‌ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ‌ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ‌ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.‌ಎಂ.ಸಿ. ಸುಧಾಕರ ಭಾಗವಹಿಸುವರು.‌ ಸಂಸದ‌ ಕ್ಯಾ. ಬ್ರಿಜೇಶ್ ಚೌಟ […]

ಕಲೆ ಸಾಹಿತ್ಯಗಳು ನಾಡಿನ ಶ್ರೀಮಂತಿಕೆಯ ಪ್ರತೀಕ-ಗೋಪಾಲಕೃಷ್ಣ ಭಟ್

  ಜನವಾಹಿನಿ News ಪುತ್ತೂರು : ಸಂಗೀತ ನೃತ್ಯ ಸಾಹಿತ್ಯ ಮುಂತಾದ ಶಾಸ್ತ್ರೀಯ ಕಲೆಗಳು ನಾಡಿನ ಶ್ರೀಮಂತಿಕೆಯ ಪ್ರತೀಕ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ನಮ್ಮ ಉತ್ಕೃಷ್ಟತೆಯ ಅಂಶಗಳನ್ನು ಸಮಾಜಕ್ಕೆ ತೋರಿಸಿಕೊಟ್ಟಂತಾಗುತ್ತದೆ ಎಂದು ದ್ವಾರಕಾ ಕಾರ್ಪೋರೇಷನ್ ಮುಖ್ಯಸ್ಥ ಗೋಪಾಲಕೃಷ್ಣ ಭಟ್ ಹೇಳಿದರು. ಪುತ್ತೂರು ಸಮೀಪದ ಮುರದ ಶಿವಸದನ ಹಿರಿಯ ನಾಗರಿಕರ ವಸತಿ ನಿಲಯದಲ್ಲಿ ಜರುಗಿದ ಸಂಗೀತ ಕಲಾವಿದ ಆಗಮ ಪೆರ್ಲ ಅವರ ಸಂಗೀತ ಕಚೇರಿಯನ್ನು ಉದ್ಘಾಟಿಸಿ ಅವರು ಮಾತಾಡಿದರು. ಕಲಾವಿದ ಆಗಮ ಪೆರ್ಲ ಓರ್ವ ಪ್ರತಿಭಾವಂತ […]

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ನೋಟೀಸ್..!

  ಜನವಾಹಿನಿ News ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮೂರನೇ ಬಾರಿಗೆ ಹೊರ ಜಿಲ್ಲೆ ಗೆ ಗಡಿಪಾರು ಮಾಡಲಾಗಿದೆ. ಅವರನ್ನು ಮಾ.16 ರಿಂದ ಸೆ.19ರ ತನಕ 6 ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ನೋಟೀಸ್ ಜಾರಿಗೊಳಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಗಡೀಪಾರು ಆದೇಶ ಜಾರಿಗೊಳಿಸಿದ್ದಾರೆ. ಕೆಲ ಸಮಯದ ಹಿಂದೆ ಎರಡನೇ ಬಾರಿ ದ.ಕ ಜಿಲ್ಲೆಯಿಂದ ತಿಮರೋಡಿ ಅವರನ್ಮು ಎಸಿ ಅವರು ಗಡೀಪಾರು ಮಾಡಿದ್ದರು. […]

ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

  ಜನವಾಹಿನಿ News ಮಡಿಕೇರಿ : ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ […]

2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ : ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ  ಸೇರಿದಂತೆ ಮೂವರಿಗೆ ಪ್ರಶಸ್ತಿ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ […]

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ : ಭಾಷೆ ಉಳಿಯಬೇಕಾದರೆ ಸಾಹಿತ್ಯ ಬೆಳೆಯಬೇಕು : ಡಾ.ಕೆ. ವಿ .ಚಿದಾನಂದ

  ಜನವಾಹಿನಿ News ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಫೆ. 24ರಂದು ಕಾಲೇಜಿನ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಮಾತನಾಡುತ್ತಾ, ಭಾಷೆಗಳು ಉಳಿಯಬೇಕಾದರೆ ಅದನ್ನು ಹೆಚ್ಚೆಚ್ಚು ಬಳಸಬೇಕು, ಮುಂದಿನ ತಲೆಮಾರಿಗೆ ಪಸರಿಸುವ ಕೆಲಸ ಆಗಬೇಕು. ಆಧುನೀಕರಣದಿಂದ ಭಾಷೆ ನಾಶ […]

ಆಟೋಗೆ ಹಿಂದಿನಿಂದ ಕಾರು ಡಿಕ್ಕಿ : ಆಟೋ ಚಾಲಕನ ಮೇಲೆ ಹರಿದ ಲಾರಿ – ಚಾಲಕ ಸ್ಥಳದಲ್ಲೇ ಸಾವು

ಜನವಾಹಿನಿ News ಮಡಿಕೇರಿ: ಕಾರೊಂದು ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ರಸ್ತೆ ಮೇಲೆ ಬಿದ್ದಿದ್ದು, ಈ ವೇಳೆ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗೇಟಿನ ಬಳಿ ಸಂಭವಿಸಿದೆ. ಸುಂದರ ಚಿಟ್ಟಿಕಾನ ಎಂಬುವವರೇ ಮೃತ ದುರ್ದೈವಿ. ಅವರಿಗೆ 62 ವರ್ಷ ವಯಸ್ಸಾಗಿತ್ತು. ದಿ.ಬಿಸಿಲುಮನೆ ರಾಮಣ್ಣ ಗೌಡರ ಪುತ್ರರಾದ ಸುಂದರರವರು ಕೊಡಗು ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ […]

ಕಂಬಳದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಪೃಥ್ವಿರಾಜ್

ಜನವಾಹಿನಿ News ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಕೋಣ ಓಡಿಸುವ ವೇಗದಲ್ಲಿ ಹೊಸ ದಾಖಲೆ ನಿರ್ಮಾಣ ಗೊಂಡಿದೆ ಎಂದು ಕಂಬಳದ ಆಯೋಜಕರು ತಿಳಿಸಿದ್ದಾರೆ. ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ ಅವರ ಕುಟ್ಟಿ – ಕಾಲೆ ಕೋಣಗಳ ಜೋಡಿ ನೇಗಿಲು ಕಿರಿಯ ವಿಭಾಗ ಸ್ಪರ್ಧೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಕೋಣಗಳನ್ನು ಪಡು ಸಾಂತೂರಿನ 22 ವರ್ಷ ಪ್ರಾಯದ ಪೃಥ್ವಿರಾಜ್ ಪೂಜಾರಿ ಎಂಬ ಯುವಕ […]

ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ : ನಾಲ್ಕಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

    ಜನವಾಹಿನಿ News ಬಂಟ್ವಾಳ : ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಸಂತೋಷ್ ಎಂಬವರ ಮಾಲಕತ್ವದ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಟೈಲರ್ ಶಾಪ್,ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಘಟನಾ ಸ್ಥಳದ ಸುತ್ತಮುತ್ತ ಹಲವಾರು […]

ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚದ ಬೇಡಿಕೆ : ಪಂಚಾಯತಿ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

  ಜನವಾಹಿನಿ NEWS ಕರಾವಳಿ: ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ, ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ‘ನಮ್ಮ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ ಒಂದು ಎಕರೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ […]