Breaking News :

ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ : ಸಿಬ್ಬಂದಿ ಗಂಭೀರ 

  ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ : ಸಿಬ್ಬಂದಿ ಗಂಭೀರ  ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಅರಣ್ಯ ವಲಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕರಡಿಯೊಂದು ದಾಳಿ ನಡೆಸಿ, ಅರಣ್ಯ ಇಲಾಖೆಯ ಪಿಸಿಪಿ ಸಿಬ್ಬಂದಿಯನ್ನು ಗಂಭೀರವಾಗಿ ಗಾಯಗೊಳಿಸಿದೆ. ಅರಣ್ಯ ವೀಕ್ಷಕ ಮಾದ (35) ಎಂಬುವರು ಕರಡಿ ದಾಳಿಗೆ ತುತ್ತಾಗಿದ್ದು, ತಲೆ ಮತ್ತು ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಎಚ್.ಡಿ.ಕೋಟೆ ತಾಲೂಕಿನ ಸೋಗಹಳ್ಳಿ ಸಮೀಪದ ಎಂ.ಜಿ.ಹಳ್ಳಿ ಹಾಡಿಯ ನಿವಾಸಿ ಮಾದ ಅವರು ಎಂದಿನಂತೆ ಕರ್ತವ್ಯಕ್ಕೆ […]

ಕೊಡಗು ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕೊಡಗು: ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಕೊಡಗು :  ಜು.11 ರಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ  37 ವರ್ಷದ ರಘು ಮೃತದೇಹ ಇಂದು ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನೀರಿನ ಹೊಂಡದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಕಾಡುವಿನಲ್ಲಿ ತನ್ನ ತಾಯಿಯೊಂದಿಗೆ ವಾಸವಾಗಿದ್ದ ಮೃತ ರಘು ಪತ್ನಿ ರಾಜೇಶ್ವರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.