Breaking News :

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿದ್ದಾಪುರದಲ್ಲಿ ಪೊಲೀಸ್ ಪಥ ಸಂಚಲನ 

  ಜನವಾಹಿನಿ News ಸಿದ್ದಾಪುರ : ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕರಲ್ಲಿ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ಜಿಲ್ಲೆಯ ಸಿದ್ದಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್‌ ಇಲಾಖೆಯ ವತಿಯಿಂದ ಪಥ ಸಂಚಲನವನ್ನು ನಡೆಸಲಾಯಿತು. ಸಂತ ಅನ್ನಮ್ಮ ಶಾಲೆಯಿಂದ – ಮೈಸೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ – ಮಾರ್ಕೆಟ್ ರಸ್ತೆ ಬಸ್ಸು ನಿಲ್ದಾಣ ಮುಖಾಂತರ ಪೊಲೀಸ್ ಠಾಣೆ ವರೆಗೆ ಪಥ ಸಂಚಲನ ನಡೆಸಿದ ಪೊಲೀಸರು, ನಾಗರಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ ಎಂಬ […]

ಮಡಿಕೇರಿಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    ಜನವಾಹಿನಿ News ಮಡಿಕೇರಿ : ವ್ಯಕ್ತಿಯೋರ್ವ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಬದಿ ಬಡಾವಣೆ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಉಪನ್ಯಾಸಕಿ ಕವಿತಾ ರವರ ಪತಿ ಮಡಿಕೇರಿಯ ಆಮೆಮನೆ ದೇವಿಪ್ರಸಾದ್ (43) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಘಟನಾ ಸ್ಥಳಕ್ಕೆ ನಗರ ಠಾಣೆಯ ಠಾಣಾಧಿಕಾರಿ ಅನ್ನಪೂರ್ಣ, ಡಿವೈಎಸ್‌ ಪಿ.ಸೂರಜ್‌ , ಸರ್ಕಲ್ ಇನ್ಸ್‌ಪೆಕ್ಟರ್ ರಾಜು ಭೇಟಿ ನೀಡಿ ಪರಿಶೀಲನೆ […]

ನೋಂದಾಯಿತ ಅರ್ಹ ಕಟ್ಟಡ ಕಾರ್ಮಿಕರಿಗೆ ವಿವಿಧ ವೃತ್ತಿಗಳ ಸೇಫ್ಟಿ ಕಿಟ್‍ಗಳ ವಿತರಣೆ

  ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯ ಕಟ್ಡಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯ ನೋಂದಾಯಿತ ಅರ್ಹ ಕಟ್ಟಡ ಕಾರ್ಮಿಕರಿಗೆ ಆರು ವೃತ್ತಿಗಳ ಸೇಫ್ಟಿ ಕಿಟ್‍ಗಳಾದ ಮೇಷನ್, ಎಲೆಕ್ಟ್ರೀಷಿಯನ್, ಪ್ಲಂಬರ್, ಪೈಂಟರ್, ವೆಲ್ಡರ್ ಮತ್ತು ಕಾರ್ಪೆಂಟರ್ ವೃತ್ತಿಗಳ ಕಾರ್ಮಿಕರಿಗೆ ವಿತರಿಸುವ ಸಲುವಾಗಿ ಕಿಟ್‍ಗಳನ್ನು ಸರಬರಾಜು ಮಾಡಲಾಗಿದೆ. ಈ ಕಿಟ್‍ಗಳನ್ನು ನೋಂದಾಯಿತ ಅರ್ಹ ಕಟ್ಟಡ ಕಾರ್ಮಿಕರು ಜಿಲ್ಲೆಯ ಐದು ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ವೃತ್ತದ ಕಚೇರಿಯಲ್ಲಿ ಕಾರ್ಮಿಕರ ಗುರುತಿನ […]

ಶಕ್ತಿ ಗೋಪಾಲಕೃಷ್ಣ ಹೆಸರಿನ ರಸ್ತೆ ನಾಮಫಲಕ ಉದ್ಘಾಟನೆ

  ಜನವಾಹಿನಿ News ಮಡಿಕೇರಿ : ನಗರದ ಪತ್ರಿಕಾ ಭವನದಿಂದ ಜಿಲ್ಲಾ ಕೈಗಾರಿಕಾ ಕಚೇರಿ ವರೆಗಿನ ರಸ್ತೆಗೆ ಶಕ್ತಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾದ ಗೋಪಾಲಕೃಷ್ಣ ಅವರ ಹೆಸರನ್ನು ಬುಧವಾರ ಇಡಲಾಯಿತು. ಈ ಸಂಬಂಧ ಗೋಪಾಲಕೃಷ್ಣ ಅವರ ಹೆಸರಿನ ನಾಮಫಲಕವನ್ನು ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಶಕ್ತಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾದ ಗೋಪಾಲಕೃಷ್ಣ ಅವರು ಕೊಡಗು ಪತ್ರಿಕೋದ್ಯಮದ ಭೀಷ್ಮರಾಗಿದ್ದಾರೆ. ಶಕ್ತಿ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಇಂದಿಗೂ ಸಹ ಕೊಡಗು ಜಿಲ್ಲೆಯಲ್ಲಿ […]

ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ

  ಜನವಾಹಿನಿ News ಮಡಿಕೇರಿ : ತಾಲ್ಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಗಾಂಧಿಭವನದಲ್ಲಿ ಬುಧವಾರ ನಡೆದ ವಿಶೇಷ ಕಾರ್ಯಾಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ, ಶಾಲಾ-ಕಾಲೇಜು, ಅಂಗನವಾಡಿ, ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರನ್ನು ಎಂದಿನಂತೆ ಸಮರ್ಪಕವಾಗಿ ಪೂರೈಸಬೇಕು […]

ಕೊಡಗಿನಲ್ಲಿ ಏಪ್ರಿಲ್‌ 8 ರಿಂದ ಮೂರು ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ : ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯದುವೀರ್ ಒಡೆಯರ್ ಮನವಿ

  ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸ ತರುವಂತಹ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ […]

ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಗೆ ಧಕ್ಕೆ ತರಲು ಪ್ರಯತ್ನಿಸುವವರ ಗಡಿಪಾರಿಗೆ ಆಗ್ರಹ

  ಜನವಾಹಿನಿ News ಮಡಿಕೇರಿ : ಶಾಂತಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುತ್ತಿರುವವರನ್ನು ಕೊಡಗಿನಿಂದ ಗಡಿಪಾರು ಮಾಡಬೇಕೆಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮನು ಮುತ್ತಪ್ಪ ಒತ್ತಾಯಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನಲ್ಲಿ ಕ್ಷುಲಕ ಕಾರಣಕ್ಕೆ ಹಲ್ಲೆ ಪ್ರಕರಣಗಳು ಸಾಮಾನ್ಯವಾಗಿದ್ದು, ಭಯದ ವಾತಾವರಣ ಸೃಷ್ಠಿಯಾಗಿದೆ. ಇತ್ತೀಚೆಗೆ ಹಿಂದೂ ಸಂಗಮ ಕಾರ್ಯಕ್ರಮದ ತಯಾರಿಗಾಗಿ ತಮ್ಮ ಸ್ವಂತ ವಾಹನದಲ್ಲಿ ಬಂದ ಕಾರ್ಯಕರ್ತ ಗೌತಮ್ ನಾಪೋಕ್ಲುವಿನ ಸೂಪರ್ ಮಾರ್ಕೆಟ್ನಿಂದ ಸಾಮಗ್ರಿ ಖರೀದಿಸಿ ಹೊರಬಂದಾಗ ಆಲ್ಟೋ ಕಾರಿನಲ್ಲಿ ಬಂದ ಯುವಕರು, ವಾಹನದಲ್ಲಿ ಭಗವಾಧ್ವಜ ಕಟ್ಟುವಷ್ಟು ಧೈರ್ಯವಿದೆಯಾ […]

ಮಾ.5 ರಂದು ಸಿದ್ದಾಪುರದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ

  ಜನವಾಹಿನಿ News ಸಿದ್ದಾಪುರ : ಕೊಡಗು ಜಿಲ್ಲಾ, ತಾಲ್ಲೂಕು, ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಿದ್ದಾಪುರ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಮೊಣ್ಣಂಡ ಕೆ. ಚಂಗಪ್ಪ ವಿರಾಜಪೇಟೆ ಹಾಗೂ ಚೆರಿಯಮನೆ ದಿ. ಕೃಷ್ಣಪ್ಪ ಮರಗೋಡು ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ಮಾ.5 ರಂದು. ನಡೆಯಲಿದೆ. ಸಿದ್ದಾಪುರ ಪ್ರೌಢಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಿದ್ದಾಪುರ ಪ್ರೌಢಶಾಲೆ ಸಮಿತಿ ಅಧ್ಯಕ್ಷ ಪಿ.ಸಿ. ಕುಶಾಲಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಮ್ಮತ್ತಿ ಹೋಬಳಿ ಘಟಕದ ಅಧ್ಯಕ್ಷ ಟಿ.ಹೆಚ್.ಮಂಜುನಾಥ್ ವಹಿಸಲಿದ್ದಾರೆ. […]

ಕಾಡುಕೋಣಗಳ ಹಿಂಡು ಪ್ರತ್ಯಕ್ಷ ; ಕಾರ್ಮಿಕರಲ್ಲಿ ಹೆಚ್ಚಿದ ಆತಂಕ

  ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಕರಡಿಗೋಡು ವ್ಯಾಪ್ತಿಯ ಕಾಫಿತೋಟದಲ್ಲಿ 10ಕ್ಕೂ ಅಧಿಕ ಕಾಡುಕೋಣಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳೀಯರು ಕಂಗಾಲಾಗಿದ್ದಾರೆ. ಕಾಫಿತೋಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಡುಕೋಣಗಳು ಸಂಚರಿಸುತ್ತಿರುವ ದೃಶ್ಯ ಕಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಕಾಡಾನೆಗಳ ಹಾವಳಿ ಇನ್ನೂ ಕಡಿಮೆಯಾಗದಿರುವಾಗಲೇ ಕಾಡುಕೋಣಗಳ ದಾಳಿ ಭೀತಿ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಈ ವ್ಯಾಪ್ತಿಯಲ್ಲಿ ಗೂಡ್ಸ್ ವಾಹನಕ್ಕೆ ಕಾಡುಕೋಣವೊಂದು ಡಿಕ್ಕಿ ಹೊಡೆದು ಕಾಲು ಮುರಿತಕ್ಕೊಳಗಾಗಿದ್ದ ಪ್ರಸಂಗ ನಡೆದಿತ್ತು. ಇದೀಗ ಹೆಚ್ಚಿನ ಸಂಖ್ಯೆಯಲ್ಲಿ ಕಾಡುಕೋಣಗಳು ಪ್ರತ್ಯಕ್ಷಗೊಳ್ಳುವ […]

ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ ಮಾಜಿ ಸಿಆರ್‌ಪಿಎಫ್ ಯೋಧ ಸಾವು

  ಜನವಾಹಿನಿ News ಸೋಮವಾರಪೇಟೆ : ಸೋಮವಾರಪೇಟೆ ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ ಮಾಜಿ ಸಿಆರ್‌ಪಿಎಫ್ ಯೋಧ ಹೆಚ್.ಎ. ವೆಂಕಟೇಶ್ (64) ಸಾವನ್ನಪ್ಪಿದ್ದಾರೆ. ಮನೆಯಲ್ಲಿ ತೋಟ ಯಂತ್ರಗಳಿಗೆಂದು ಸಂಗ್ರಹಿಸಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬೆಂಕಿ ವೇಗವಾಗಿ ವ್ಯಾಪಿಸಿವೆ. ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲು ಕಳೆದುಕೊಂಡಿದ್ದ ವೆಂಕಟೇಶ್ ಅವರು ತಕ್ಷಣ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿಯಿಂದ ಮನೆಯ ಒಂದು ಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು […]