Breaking News :

ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]

ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ 

  ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. 

    ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]

ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ

    ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆಯಲು ದೇಶವು ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ೭೯ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯು ನಮ್ಮನ್ನು ಹೇಗೆ […]

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ 

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)‌ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]