ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಶರಣ್ಯ ಪತ್ತೆ…! ಯುವತಿಯನ್ನು ಪತ್ತೆ ಹಚ್ಚಿದ ಕುಡಿಯ ಸಮುದಾಯದ ಯುವಕರು

ಕುಡಿಯ ಸಮುದಾಯದ ಯುವಕರ ಕಾರ್ಯಾಚರಣೆ ಯಶಸ್ವಿ ಜನವಾಹಿನಿ News ಮಡಿಕೇರಿ : ಕೊಡಗಿನ ಅತಿ ಎತ್ತರದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಜಿ.ಎಸ್.ಶರಣ್ಯ(36) ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಕಕ್ಕಬ್ಬೆ ಯವಕಪಾಡಿ ಗ್ರಾಮದ ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಶರಣ್ಯ ಅವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಡಿಯಂಡಮೋಳ್ ಬೆಟ್ಟದ ಟ್ರೆಕ್ಕಿಂಗ್ ಪಾಯಿಂಟ್ ನಿಂದ 3.5 ಕಿ.ಮೀ ದೂರದ ಮಲೆ ತಿರಿಕೆ ಎಂಬ ಅರಣ್ಯದೊಳಗೆ ಸುರಕ್ಷಿತವಾಗಿದ್ದ ಶರಣ್ಯ ಅವರನ್ನು ಕುಡಿಯ ಸಮುದಾಯದ […]
ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಶ್ರೀ ತಲಕಾವೇರಿ ದೇವಾಲಯದಲ್ಲಿ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಏಪ್ರಿಲ್, 10 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಏಪ್ರಿಲ್, 10 ರಂದು ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಪುಣ್ಯಾಹ, ಅಗಸ್ತ್ಯೇಶ್ವರ ಸಾನಿಧ್ಯದಲ್ಲಿ ಕಳಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಕಾವೇರಿ ಅಮ್ಮನವರಿಗೆ ಸಂಪ್ರೋಕ್ಷಣೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ […]
ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ

ಜನವಾಹಿನಿ News ಬೆಂಗಳೂರು : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕು ಆಡಳಿತ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆಗಳು ಸ್ಥಳೀಯ ದಲಿತ,ಕನ್ನಡ ಪರ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದೆ.ಸ್ಪರ್ಧೆಯು ಏಪ್ರೀಲ್ 12 ರಂದು ಬೆಳಿಗ್ಗೆ 9 ಗಂಟೆಗೆ ಕುಷ್ಟಗಿ ಪಟ್ಟಣದ ಕ್ರೈಸ್ಟ್ ದಿ ಕಿಂಗ್ ಶಾಲೆಯಲ್ಲಿ ನಡೆಯಲಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ,ವಿದ್ಯಾರ್ಹತೆಯ […]
ಚೆಟ್ಟಳ್ಳಿಯಲ್ಲಿ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದಿಂದ ಅಂತರ ಕೊಡವ ಪೊ್ಮ್ಮಕ್ಕಡ ಥ್ರೋಬಾಲ್ ಪಂದ್ಯಾಟ : ಮಹಿಳೆಯರಿಗಾಗಿನ ಕ್ರೀಡಾಪಂದ್ಯಾವಳಿಗಳು ಭಾಂಧವ್ಯ ವೖದ್ದಿಗೆ ಸಹಕಾರಿ – ವೀಣಾ ಅಚ್ಚಯ್ಯ.

ಜನವಾಹಿನಿ News ಮಡಿಕೇರಿ : ಕೊಡಗೂ ಸೇರಿದಂತೆ ವಿವಿಧೆಡೆ ಪೊಮ್ಮಕ್ಕಡ ಕೂಟಗಳ ನಡುವೆ ಭಾಂದವ್ಯ ವೃದ್ಧಿ ಹಾಗೂ ಕ್ರೀಡಾಮನೋಭಾವ ಮೂಡಿಸುವ ಉದ್ದೇಶದೊಂದಿಗೆ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟ ಅಂತರ ಕೊಡವ ಪೊಮ್ಮಕ್ಕಡ ಥ್ರೋಬಾಲ್ ಪಂದ್ಯಾವಳಿಯನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂರು ವಿಧಾನಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದ್ದಾರೆ. ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಚೆಟ್ಟಳ್ಳಿ ಕೊಡವ ಸಮಾಜದ ಅಧೀನದಲ್ಲಿರುವ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವಷ೯ದ […]
ಮದ್ಯ ಮಾರಾಟ ನಿಷೇಧ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ […]
ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ. ಕೋಟಿ-ಶಾಸಕರ ಭರವಸೆ

ಜನವಾಹಿನಿ News ಮಡಿಕೇರಿ : ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಒಟ್ಟು ರೂ ೧ ಕೋಟಿ ಅನುದಾನವನ್ನು ಸರಕಾರದಿಂದ ಒದಗಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭರವಸೆಯಿತ್ತಿದ್ದಾರೆ. ಮಡಿಕೇರಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಗೂ ಸದಸ್ಯರುಗಳಾದ […]
ವಿಶ್ವ ಗ್ರಾಹಕರ ದಿನಾಚರಣೆ ; ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ: ನಿತಿನ್ ಚಕ್ಕಿ

ಜನವಾಹಿನಿ News ಮಡಿಕೇರಿ : ಗುಣಮಟ್ಟದ ಉತ್ಪನ್ನ ಹಾಗೂ ಸೇವೆ ಪ್ರತಿ ಗ್ರಾಹಕರ ಮೂಲಭೂತ ಹಕ್ಕು.. ಗ್ರಾಹಕನೇ ರಾಜ, ಆದರೆ ಹಕ್ಕುಗಳ ಬಗ್ಗೆ ತಿಳುವಳಿಕೆ ಇದ್ದಾಗ ಮಾತ್ರ… ಖರೀದಿಸುವ ಮೊದಲು ಯೋಚಿಸಿ, ಗುಣಮಟ್ಟವನ್ನು ಪರೀಕ್ಷಿಸಿ… ಗ್ರಾಹಕರ ಹಕ್ಕುಗಳ ಅರಿವೇ ಮೋಸದಿಂದ ರಕ್ಷಣೆ… ಈ ಸಂದೇಶವು ಬುಧವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಸಂದರ್ಭದಲ್ಲಿ ಕೇಳಿ ಬಂದವು. ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, […]
ನಾಳೆ ಭಗಂಡೇಶ್ವರ ದೇವಾಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಜನವಾಹಿನಿ News ಮಡಿಕೇರಿ : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ (ಏ.ರಂದು) ನಾಳೆ ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.
ಕರಡಿಗೋಡು ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಉತ್ಸವ ಸಂಪನ್ನ : ಹರಕೆ ತೀರಿಸಿ ಪ್ರಾರ್ಥನೆ ಸಲ್ಲಿಸಿದ ನೂರಾರು ಭಕ್ತರು

ಜನವಾಹಿನಿ News ಸಿದ್ದಾಪುರ : ಕರಡಿಗೋಡು ಗ್ರಾಮದಲ್ಲಿ ನೆಲೆಗೊಂಡಿರುವ ಗ್ರಾಮಸ್ಥರ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವರ ವಾರ್ಷಿಕೋತ್ಸವ ಕೊನೆ ದಿನವಾದ ಮಂಗಳವಾರ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಕೊನೆ ದಿನ ಮಂಗಳವಾರದಂದು ರುದ್ರಪಾರಾಯಣ, ದೇವತಾ ಪ್ರಾರ್ಥನೆ, ಗಂಗಾ ಪೂಜೆ, ಗಂಗಾ ಸ್ನಾನ ನಡೆಯಿತು. ಬಳಿಕ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕೊಂಡ ಸೇವೆ ನಡೆಯಿತು. ಇಲ್ಲಿನ ಬಸವೇಶ್ವರನಲ್ಲಿ ಪ್ರಾರ್ಥನೆ ಮಾಡಿಕೊಂಡರೆ ತಮ್ಮ ಇಷ್ಟಾರ್ಥಗಳು ಈಡೇರುತ್ತೆ ಎಂಬ ನಂಬಿಕೆ ಭಕ್ತರದು, ಹೀಗೆ ಹರಕೆ […]
ತನಲ್ ಕೂರ್ಗ್ ಆಶ್ರಮದಲ್ಲಿ ಎಫ್ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ

ಜನವಾಹಿನಿ News ಮಡಿಕೇರಿ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ ವತಿಯಿಂದ ಮಂಗಳವಾರ ತನಲ್ ಕೂರ್ಗ್ ಆಶ್ರಮ, ವಿಕಾಸ ಆಶ್ರಮ ಮತ್ತು ಶಕ್ತಿ ವೃದ್ಧಾಶ್ರಮದಲ್ಲಿ ಜನರಲ್ ತಿಮ್ಮಯ್ಯ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೃದ್ಧಾಶ್ರಮದಲ್ಲಿನ ಆಶ್ರಯದಾತರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ತನಲ್ ಕೂರ್ಗ್ ವೃದ್ಧಾಶ್ರಮಕ್ಕೆ ಶಾಸಕರು ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೌಂಡೇಶನ್ನ ಗೌರವ ಅಧ್ಯಕ್ಷರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ಹೂ ಗುಚ್ಛ […]