ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಕುರಿತು ಸಿಎಂ ಗಮನ ಸೆಳೆದ ಶಾಸಕ ಪೊನ್ನಣ್ಣ

ಜನವಾಹಿನಿ NEWS ಮಡಿಕೇರಿ : ಸದನದಲ್ಲಿ ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಇದರ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯಾಗುವಂತೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಬಳಿಕ , ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ವಿಷಯಗಳ ಕುರಿತಾಗಿ ಸವಿವರವಾದ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು.
ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್ಟ್ಯೂಟ್(ಎಫ್ಸಿಐ), ಮೈಸೂರು ಇನ್ಸ್ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (ಐಎಚ್ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮಗಳ ವಿವರ –ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ […]
ಭರತನಾಟ್ಯ ಜೂನಿಯರ್ ಪರೀಕ್ಷೆ : ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಶೇ.೧೦೦ ರಷ್ಟು ಫಲಿತಾಂಶ

ಜನವಾಹಿನಿ NEWS ಸಿದ್ದಾಪುರ : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶೇ ೧೦೦ ರಷ್ಟು ಫಲಿತಾಂಶವನ್ನು ನೀಡಿದ್ದಾರೆ. ನೃತ್ಯ ಕಲಾ ಶಾಲೆಯ ಸಿದ್ದಾಪುರದ ವಿದ್ಯಾರ್ಥಿಗಳಾದ ಹೆಚ್.ಆರ್. ರ್ಷಿತ, ಕೆ.ಆರ್. ಅದಿತ್ರಿ, ವಿ.ಜೆ. ಸಿಂಚನ, ಹೆಚ್.ಎಲ್. ಧೃತಿಕ ಮತ್ತು ಕೆ.ಎಸ್. ಜೀಶ್ನ ಇವರುಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ನೃತ್ಯ ಕಲಾ ಶಾಲೆಯ ನೃತ್ಯ ಗುರು […]
ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ವಿಫುಲ ಅವಕಾಶ – ಜಿಲ್ಲೆಯಲ್ಲಿ 15.20 ಕೋಟಿ ರೂ. ಸಾಲ ಮಂಜೂರು; ವೆಂಕಟ್ ರಾಜಾ

ಜನವಾಹಿನಿ NEWS ಮಡಿಕೇರಿ : ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್ಎಂಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ […]
ನಾಳೆ ಭಾಗಮಂಡಲದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ, ಇವರ ಸಂಯುಕ್ತ ಆಶ್ರಯದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವು (ಆಗಸ್ಟ್, 23 ರಂದು) ನಾಳೆ ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು […]
ಆ.26 ರಂದು ಸ್ವರ್ಣಗೌರಿ ಮಹೋತ್ಸವ ಪ್ರಯುಕ್ತ ಬಾಗಿನ ಅರ್ಪಣೆ

ಜನವಾಹಿನಿ NEWS ಮಡಿಕೇರಿ : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ದೊಡ್ಡಮಳ್ತೆ ಗ್ರಾಮ, ಇವರ ಸಹಯೋಗದೊಂದಿಗೆ ಶ್ರೀ ಸ್ವರ್ಣಗೌರಿ ಮಹೋತ್ಸವನ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮವು ಆಗಸ್ಟ್, 26 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಯಲ್ಲಿ ನಡೆಯಲಿದೆ. ಮೈಸೂರು ಕೊಡಗು ಲೋಕಾಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ […]
ಜಮ್ಮಾಮಲೆ, ಸಿ & ಡಿ, ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರೊಂದಿಗೆ ಸಭೆ

ಜನವಾಹಿನಿ NEWS ಮಡಿಕೇರಿ : ಜಮ್ಮಾಮಲೆ, ಸಿ & ಡಿ, ಜಮೀನು ಹಾಗೂ ವನ್ಯ ಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವರೊಂದಿಗೆ ಸಭೆ ನಡೆಯಿತು. ಮಾನ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಬಿ ಖಂಡ್ರೆರವರ ಕಛೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ . ಎಸ್ ಬೋಸರಾಜು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಎ. ಎಸ್ ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರುಗಳ ನೇತೃತ್ವದಲ್ಲಿ […]
ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ.ಯು.ಪೂವಣ್ಣ ಆಯ್ಕೆ

ಜನವಾಹಿನಿ NEWS ಮಡಿಕೇರಿ : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ. ಯು.ಪೂವಣ್ಣ ರವರನ್ನು ಎಲ್ಲಾ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿ ಮೂರು ವರ್ಷದ ಅವದಿಗೆ ಅಧ್ಯಕ್ಷರಾಗಿರುತ್ತಾರೆ. ಸಮಿತಿಯ ಸದಸ್ಯರುಗಳಾದ ಕುಶ ಭಟ್, ಕೆ. ಸಿ. ರಮೇಶ್, ಸಿ ಡಿ.ಉಷಾ, ಕೆ. ಸಿ. ನೈಲ್, ಪಿ. ಎಂ. ನರೇಂದ್ರ, ಎ. ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್. ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ, ಪಿ. ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಸಭೆಯಲ್ಲಿ ಹಾಜರಿದ್ದರು.
ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ : ತಪ್ಪು ಮಾಹಿತಿ ಹಂಚುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಜನವಾಹಿನಿ NEWS ಮಡಿಕೇರಿ : ಹಿಂದುಗಳ ಧಾರ್ಮಿಕ ಶ್ರದ್ಧಾಕೇಂದ್ರ ಧರ್ಮಸ್ಥಳದ ಮೇಲೆ ಆಗುತ್ತಿರುವ ಅಪಪ್ರಚಾರದ ವಿರುದ್ಧ ಹಾಗೂ ಇದನ್ನು ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪತ್ರಿಭಟನಾ ನಿರತರು ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸ್ಪೀಕರ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ […]
ಮೂರ್ನಾಡುವಿನಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಅಪಪ್ರಚಾರ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಮೂರ್ನಾಡುವಿನಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಅಪಪ್ರಚಾರ ಖಂಡಿಸಿ ಪ್ರತಿಭಟನಾ ಮೆರವಣಿಗೆ ಜನವಾಹಿನಿ NEWS ಮಡಿಕೇರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧದ ಅಪಪ್ರಚಾರ ಖಂಡಿಸಿ ಮತ್ತು ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮೂರ್ನಾಡು ಪಟ್ಟಣದಲ್ಲಿ ಧರ್ಮಸ್ಥಳ ಭಕ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಧರ್ಮಸ್ಥಳ ಭಕ್ತ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಮೆರವಣಿಗೆಯು ಕಾಲೇಜು ಮೈದಾನದಲ್ಲಿ ಪ್ರಾರಂಭಗೊಂಡು ಗಾಂಧಿ ನಗರದ ಮೂಲಕ ಪಟ್ಟಣದ ಮುಖ್ಯ ರಸ್ತೆಯಲ್ಲಿ […]