ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ : ಅರೋಗ್ಯವಂತ ಮಗು ದೇಶದ ಸಂಪತ್ತು – ತನ್ಮಯಿ ಪ್ರವೀಣ್

ಜನವಾಹಿನಿ NEWS ಸೋಮವಾರಪೇಟೆ : ಇನ್ನರ್ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಬಾಣಂತಿಯರಿಗೆ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಇನ್ನರ್ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಅರೋಗ್ಯವಂತ ಮಗು ಜನನಕ್ಕೆ ತಮ್ಮ […]
ಶನಿವಾರಸಂತೆ : ಮಾಧ್ಯಮ ಸಂವಾದದಲ್ಲಿ ಅನಾವರಣಗೊಂಡ ಸಮಸ್ಯೆಗಳ ಸರಮಾಲೆ

ಜನವಾಹಿನಿ NEWS ಶನಿವಾರಸಂತೆ : ಶನಿವಾರಸಂತೆ ಪ್ರೆಸ್ ಕ್ಲಬ್ ಭಾಗಿತ್ವದಲ್ಲಿ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಗೆ ಸೇರಿದ ವಿವಿಧ ಗ್ರಾ.ಪಂ.ಗಳಿಗೆ ಸಂಬಂದಿಸಿದ ಕುಂದು ಕೊರತೆ, ಜಟಿಲವಾದ ಸಮಸ್ಯೆಗಳ ಕುರಿತು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಸೋಮವಾರ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಶನಿವಾರಸಂತೆ, ದುಂಡಳ್ಳಿ, ಹಂಡ್ಲಿ, ಕೊಡ್ಲಿಪೇಟೆ ಬೆಸೂರು ಮತ್ತು ಆಲೂರುಸಿದ್ದಾಪುರ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಪಾಲ್ಗೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷರು ತಮ್ಮ ಗ್ರಾ.ಪಂ.ಯ ಅಭಿವೃದ್ದಿಯ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆಯೂ ಹೇಳಿಕೊಂಡರೆ ಪತ್ರಕರ್ತರು […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]
ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ – ಶೋಭಾಯಾತ್ರೆಗೆ ಮೆರುಗು ನೀಡಿದ ಗೊಂಬೆ ಕುಣಿತ ಭಜನೆ

ಜನವಾಹಿನಿ NEWS ವಿರಾಜಪೇಟೆ : ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದೇವಸ್ಥಾನವು 43 ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆಯಿತು. ಶ್ರೀ ಗಣೇಶ ಚತುರ್ಥಿ ಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಒಟ್ಟು ಏಳು ದಿವಸಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು. ವಿಸರ್ಜನೋತ್ಸವದಂದು ಮದ್ಯಾಹ್ನ […]
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 100 ನೇ ವಾರ್ಷಿಕ ಮಹಾಸಭೆ

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2024-25 ನೇ ಸಾಲಿನ 100ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಕೇಂದ್ರ ಕಚೇರಿಯ “ಉನ್ನತಿ ಭವನ”ದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರ ಘನ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಲಾಭದಲ್ಲಿ ಮುಂದುವರೆಯುತ್ತಿರುವ ಬ್ಯಾಂಕ್: ಮಾರ್ಚ್ 31 ರ ಅಂತ್ಯಕ್ಕೆ ಬ್ಯಾಂಕು ರೂ.16.70 ಕೋಟಿ ಲಾಭ ಗಳಿಸಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ ಮಡಿಕೇರಿ, ಇದು […]
ವಿರಾಜಪೇಟೆ ಪಟ್ಟಣದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ನಗರದಲ್ಲಿ ಈಗಾಗಲೆ ಪ್ರತಿಷ್ಟಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ದತ್ತವಾದ ಅಧಿಕಾರದಂತೆ ಸೆಪ್ಟೆಂಬರ್, 06 ರ ಮಧ್ಯಾಹ್ನ ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ […]
ಎಸ್.ಎನ್.ಡಿ.ಪಿ ಯೋಗಂ ನಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಆಚರಣೆಗೆ ಸಿದ್ಧತೆ

ಜನವಾಹಿನಿ NEWS ಸಿದ್ದಾಪುರ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ). ಕೊಡಗು ಯೂನಿಯನ್, ಜಯಂತಿ ಆಚರಣಾ ಸಮಿತಿ, ಹಾಗೂ ಎಸ್.ಎನ್.ಡಿ.ಪಿ. ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದಲ್ಲಿ 171ನೇ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಎಸ್ಎನ್ಡಿಪಿ ಕೊಡಗು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ ಎಸ್ ಎನ್ ಡಿ ಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದಲೂ ಶ್ರೀ ನಾರಾಯಣ ಗುರು ಜಯಂತಿಯನ್ನ ಅದ್ದೂರಿಯಾಗಿ ಆಚರಿಸಿಕೊಂಡು […]
ಸೋಮವಾರಪೇಟೆ186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

ಜನವಾಹಿನಿ NEWS ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ಇಂದು 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಾಲೊಮನ್ ಡೇವಿಡ್ ಮಾತನಾಡಿ ಪ್ರತಿ ವರ್ಷದಂತೆ ಇ ಬಾರಿಯು ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನ […]
ರಾಷ್ಟ್ರ ಮಟ್ಟದ ಎನ್ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್ಸಿಸಿ ಕೆಡೆಟ್ಗಳು ಶಿಸ್ತಿನ ತರಬೇತಿ, […]
ಕರಿಕೆ ಗ್ರಾಮದಲ್ಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ : ನೂರಾರು ಜನರು ಭಾಗಿ – 50 ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆ

ಜನವಾಹಿನಿ NEWS ಮಡಿಕೇರಿ : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ನೂರಾರು ಜನರು ಪಾಲ್ಗೊಂಡು 50 ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾದವು. ಕರಿಕೆ ಗ್ರಾಮದ ವಿಎಸ್ಎಸ್ಎನ್ ಸಭಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅಲ್ಲಿನ ಸ್ಥಳೀಯರು ಸಾಲಾಗಿ ನಿಂತು ಭೂಮಿ ದುರಸ್ತಿ, ಆರ್ಟಿಸಿ ಸರಿಪಡಿಸುವುದು, ರಸ್ತೆ ನಿರ್ಮಾಣ ಮಾಡುವುದು, ಬಸ್ ಸೌಕರ್ಯ […]