ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು

ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ : ಮೀಸಲು ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು ಜನವಾಹಿನಿ NEWS ಸಿದ್ದಾಪುರ : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ಚೆನ್ನಂಗಿ, ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಬಾಡಗ ಬಾಣಂಗಾಲ ಗ್ರಾಮದ ಬಾಣಂಗಾಲ ಎಸ್ಟೇಟ್ ಮತ್ತು ನ್ಯೂ ಮಾರ್ಗೋಳ್ಳಿ ಎಸ್ಟೇಟಿನಲ್ಲಿ ಬೀಡುಬಿಟ್ಟಿದ ಮರಿಯಾನೆ ಸೇರಿದಂತೆ ಸುಮಾರು ಎಂಟು ಕಾಡಾನೆಗಳನ್ನು ಕಾರ್ಯಾಚರಣೆ ನಡೆಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಮರಳಿ […]
ಲಯನ್ಸ್ ಸಂಸ್ಥೆಯಿಂದ ಚೆನ್ನಂಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಲಯನ್ಸ್ ಸಂಸ್ಥೆಯಿಂದ ಚೆನ್ನಂಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ : ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬನ್ನಿ: ಗಣ್ಯರ ಕರೆ ಜನವಾಹಿನಿ NEWS ಸಿದ್ದಾಪುರ : ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಪಾಲಿಬೆಟ್ಟ ಲಯನ್ಸ್ ಕ್ಲಬ್ ವತಿಯಿಂದ ಚೆನ್ನಂಗಿ ಸರ್ಕಾರಿ ಶಾಲೆಯ 50ಕ್ಕೊ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ ಎಸ್ ಸುಬ್ರಮಣಿ ಮಾತನಾಡಿ ಲಯನ್ಸ್ […]
ಪೊನ್ನಣ್ಣರಿಂದ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ವಿರಾಜಪೇಟೆ : ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 2025-26 ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಯನ್ನು ಶಾಸಕ ಪೊನ್ನಣ್ಣ ವಿತರಿಸಿದರು.
ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ : ವಿಡಿಯೋ ವೈರಲ್ – ಎಲ್ಲೆಡೆ ಬಾರಿ ಪ್ರಶಂಸೆ ವ್ಯಕ್ತ

ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ : ವಿಡಿಯೋ ವೈರಲ್ – ಎಲ್ಲೆಡೆ ಬಾರಿ ಪ್ರಶಂಸೆ ವ್ಯಕ್ತ ಜನವಾಹಿನಿ NEWS ಮಡಿಕೇರಿ : ನಗರದ ಪ್ರಮುಖ ಪ್ರವಾಸಿ ತಾಣವಾದ ಅಬ್ಬಿ ಜಲಪಾತಕ್ಕೆ ತೆರಳುವ ರಸ್ತೆಯು ಭಗವತಿ ನಗರದ ಸಮೀಪ ಗುಂಡಿಮಯವಾಗಿದ್ದನ್ನು ಮನಗಂಡ ಕರ್ತವ್ಯದಲ್ಲಿರುವ ಮಡಿಕೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರು ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ […]
ಶಾಸಕ ಪೊನ್ನಣ್ಣರವರಿಂದ ಪರಿಹಾರ ಚೆಕ್ ವಿತರಣೆ

ಜನವಾಹಿನಿ NEWS ವಿರಾಜಪೇಟೆ : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಕೋಟುಪರಂಬು ಪಂಚಾಯಿತಿಯ ಕುಂಜಲಗೇರಿ ಗ್ರಾಮದ ರೈತರುಗಳಾದ ಚಿಯಂಡೀರ ಸುರೇಶ್ ಹಾಗೂ ಸುಬ್ರಮಣಿ ಎಂಬುವವರ ಹಸುಗಳು ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದು, ರೈತರ ಕುಟುಂಬಕ್ಕೆ ₹ 1.62ಲಕ್ಷ ಪರಿಹಾರದ ಚೆಕ್ ಅನ್ನು ಶಾಸಕ ಪೊನ್ನಣ್ಣ ಇಂದು ವಿತರಿಸಿದರು.
ಶಾಸಕ ಪೊನ್ನಣ್ಣನವರಿಂದ KSRTC 8 ಹೊಸ ಬಸ್ ಮಾರ್ಗ ಹಾಗೂ ಬಸ್ ಗಳ ಉದ್ಘಾಟನೆ

ಜನವಾಹಿನಿ NEWS ವಿರಾಜಪೇಟೆ : ನಗರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಮಾರ್ಗಗಳನ್ನು ಹಾಗೂ 8 ಹೊಸ ಬಸ್ ಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ನೆರವೇರಿಸಿದರು. ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು ಹಾಗೂ ಏರಿಕೆಯಾಗಿರುವ ಪ್ರಯಾಣಿಕರ ಸಂಖ್ಯೆಗನುಗುಣವಾಗಿ ನೂತನ ಬಸ್ ಮಾರ್ಗಗಳನ್ನು ಹಾಗೂ […]
ಬೆಟೋಳಿಯ ನಾಗೇಂದ್ರರಾವ್ ನಿಧನ

ವಿರಾಜಪೇಟೆ : ಬೆಟೋಳಿ ಗ್ರಾಮದ ನಿವಾಸಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಶಾಂತಿ ಭೂಷಣ್ ರವರ ತಂದೆ ಬಿ. ಎಸ್ ನಾಗೇಂದ್ರರಾವ್ ತೀವ್ರ ಅನಾರೋಗ್ಯದಿಂದ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮೃತರ ಸ್ವಗ್ರಹದಲ್ಲಿ ಮಧ್ಯಾಹ್ನ 12 ಘಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.
ಸ್ನೇಹಿತರ ಒಕ್ಕೂಟ ವಿರಾಜಪೇಟೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಸ್ನೇಹಿತರ ಒಕ್ಕೂಟ ವಿರಾಜಪೇಟೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಮಡಿಕೇರಿ : ವಿರಾಜಪೇಟೆ ನಗರದ ಮಲ್ಮ ಕಾಂಪ್ಲೆಕ್ಸ್ ಆವರಣದಲ್ಲಿ ಸ್ನೇಹಿತರ ಒಕ್ಕೂಟ ವಿರಾಜಪೇಟೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಯೋಧರಾದ ಪ್ರಕಾಶ್ ಅಪ್ಪಯ್ಯ, ಖ್ಯಾತ ವಕೀಲರಾದ ವಿಶ್ವನಾಥ್, ಡಾಕ್ಟರ್ ಬೊಪಣ್ಣ, ಕೋಲತಂಡ ಬೊಪ್ಪಯ್ಯ, ಎಂ ಸಿ ಕಾವೇರಮ್ಮ, ಸುದರ್ಶನ್ ರೈ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಅತಿಥಿ ಗಣ್ಯರಾಗಿ ಪುರಸಭೆ ಹಿರಿಯ ಸದಸ್ಯರಾದ ಮತೀನ್ ಎಸ್ ಹೆಚ್, ಮೊಹಮ್ಮದ್ ರಾಫಿ, ಕುರ್ಗ್ […]
ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವ

ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವ ಮಡಿಕೇರಿ : ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ 79ನೇ ಸ್ವತಂತ್ರೋತ್ಸವದ ಧ್ವಜಾರೋಹಣವನ್ನು ನಗರಸಭಾ ಸದಸ್ಯರಾದ ಶ್ರೀ ಮುಸ್ತಫಾರವರು ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿನ ಪದಾಧಿಕಾರಿಗಳು ರಾಮಾ ಸೇವಾ ಸಮಿತಿ ಪದಾಧಿಕಾರಿಗಳು ಜ್ಯೋತಿ ಯುವಕ ಸಂಘದ ಸದಸ್ಯರು ಹಾಗೂ ನಗರದ ನಿವಾಸಿಗಳು ಪಾಲ್ಗೊಂಡಿದ್ದರು.
ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರೋತ್ಸವ

ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರೋತ್ಸವ ಮಡಿಕೇರಿ : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದ ಹತ್ತಿರ ನಗರಸಭಾ ಸದಸ್ಯರಾದ ಮುಸ್ತಫಾನವರು 79ನೇ ಸ್ವತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಅಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ಮತ್ತು ಮಧ್ಯಾಹ್ನದ ಉಪಹಾರವನ್ನು ನೀಡಿದರು.