ಕಾಡಾನೆ ದಾಳಿ ಮನೆಯಲ್ಲಿದ್ದ ವಸ್ತುಗಳು ನಾಶ : ಪರಿಹಾರ ಒದಗಿಸಲು ಆಗ್ರಹ

ಕಾಡಾನೆ ದಾಳಿ ಮನೆಯಲ್ಲಿದ್ದ ವಸ್ತುಗಳು ನಾಶ : ಪರಿಹಾರ ಒದಗಿಸಲು ಆಗ್ರಹ ಸಿದ್ದಾಪುರ : ಕಾಡಾನೆಯೊಂದು ಮಧ್ಯರಾತ್ರಿ ವೇಳೆ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದ ಕಾಡಾನೆ ಹಾವಳಿಯಿಂದ ಚನ್ನಂಗಿ ಚಕ್ಕ ರೇಷ್ಮೆ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ. ಕಾವೇರಿ ಎಂಬವರ ಮನೆ ಮೇಲೆ ದಾಳಿ ಮಾಡಿದ ಕಾಡಾನೆ ಬಾಗಿಲು ಮುರಿದು ಒಳನುಗ್ಗಿ ಅಕ್ಕಿ ಸೇರಿದಂತೆ ಅಹಾರ ಪದಾರ್ಥಗಳನ್ನು ತಿಂದು ಡ್ರಮ್ […]
ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ : ಪ್ರತಿಯೊಬ್ಬರು ಹಿರಿಯರ ಮಾರ್ಗದರ್ನದಲ್ಲಿ ಸಾಗುವಂತಾಗಬೇಕು : ಮಂತರ್ ಗೌಡ ಕಿವಿ ಮಾತು

ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ : ಪ್ರತಿಯೊಬ್ಬರು ಹಿರಿಯರ ಮಾರ್ಗದರ್ನದಲ್ಲಿ ಸಾಗುವಂತಾಗಬೇಕು : ಮಂತರ್ ಗೌಡ ಕಿವಿ ಮಾತು ಮಡಿಕೇರಿ : ಹಿರಿಯರ ಮಾರ್ಗದರ್ಶನಲ್ಲಿ ನಾವು ಸಾಗುವಂತಾಗಬೇಕು ಎಂದು ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕಿವಿಮಾತು ಹೇಳಿದರು. ಮಡಿಕೇರಿ ಕೊಡವ ಸಮಾಜ, ಕೊಡವ ಸಮಾಜ ಪೊಮ್ಮಕ್ಕಡ ಕೂಟ ಮತ್ತು ಮಡಿಕೇರಿ ಕೊಡವ ಕೇರಿಯ ಸಂಯುಕ್ತಾಶ್ರಯದಲ್ಲಿ ನಗರದ ಕೊಡವ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ […]
ಛತ್ತೀಸ್ಗಡದಲ್ಲಿ ಕ್ರಿಶ್ಚಿಯನ್ ಕನ್ಯಾ ಸ್ತ್ರೀಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ನೆಲ್ಯಹುದಿಕೇರಿಯಲ್ಲಿ ಪ್ರತಿಭಟನೆ

ಸಿದ್ದಾಪುರ : ನೆಲ್ಯಹುದಿಕೇರಿ ಪ್ರಗತಿಪರ ಸಂಘಟನೆಯ ವತಿಯಿಂದ ಛತ್ತೀಸ್ಗಡದಲ್ಲಿ ಕ್ರಿಶ್ಚಿಯನ್ ಕನ್ಯಾ ಸ್ತ್ರೀಗಳ ಮೇಲೆ ನಡೆದ ದೌರ್ಜನ್ಯ ವನ್ನು ಖಂಡಿಸಿ ಮತ್ತು ಇವರ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆಯನ್ನು (F.I.R) ಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಛತ್ತಿಸ್ಗಢ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಮುಖಂಡರಾದ ಪಿ .ಅರ್. ಭರತ್ ಹಾಗೂ ಕೆಪಿಸಿಸಿ ಸದಸ್ಯರಾದ ಜೋಸೆಫ್ ಶ್ಯಾಮ್ ಛತ್ತಿಸ್ಗಢ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಮುಖರಾದ ಉದಯಕುಮಾರ್, ಮೋನಪ್ಪ, ಜೋಸ್, ಸೌಕತ್, ಜೋಯಿ, […]
ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ

ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ ಸಿದ್ದಾಪುರ: ನೆನ್ನೆ ಗುಹ್ಯ ವ್ಯಾಪ್ತಿಯ ಕೋಟನ್ ಎಸ್ಟೇಟ್ ಬಳಿ ಹುಲಿ ಹೆಜ್ಜೆ ಗುರುತು ಪತ್ತೆಯಾಗುವ ಮೂಲಕ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಇಂದು ಸಮೀಪದ ವಾರ್ನಾಂಡಿ ಎಸ್ಟೇಟ್ ಕಡೆಗೆ ಹೋಗಿರುವ ಗುರು ಪತ್ತೆಯಾಗಿದ್ದು ಜನ ಜಾಗೃತೆ ವಹಿಸುವಂತೆ ತೋಟದ ವ್ಯವಸ್ಥಾಪಕ ದಾಸನ್ ಮಾಹಿತಿ ನೀಡಿದ್ದು, ಆತಂಕ ಗೊಂಡಿರುವ ಸ್ಥಳೀಯರು ಇಲಾಖೆಯಿಂದ ಹುಲಿ ಚಲನವಲನ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಕ್ಯಾಮರ […]
ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು ಮಡಿಕೇರಿ : ಪೊನ್ನಂಪೇಟೆ ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ತಾವಳಗೆರೆ ಗ್ರಾಮದ ಆಂಡಮಾಡಾ ಅರುಣ ರವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದ ಚಾರಿಗೆ ವಾಹನವೊಂದು ಡಿಕ್ಕಿ ಪಡಿಸಿ ಹೋಗಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿ,ಅಂದಾಜು […]
ನೆಲ್ಯಹುದಿಕೇರಿಯಲ್ಲಿ ಡಿ ವೈ ಎಫ್ ಐ ಜಿಲ್ಲಾ ಸಮಾವೇಶ : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸದ ಸರ್ಕಾರಗಳ ವಿರುದ್ಧ ಆಕ್ರೋಶ

ನೆಲ್ಯಹುದಿಕೇರಿಯಲ್ಲಿ ಡಿ ವೈ ಎಫ್ ಐ ಜಿಲ್ಲಾ ಸಮಾವೇಶ : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸದ ಸರ್ಕಾರಗಳ ವಿರುದ್ಧ ಆಕ್ರೋಶ ಮಡಿಕೇರಿ :- ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ ಕಳೆದರೂ ಇಂದಿಗೂ ನಿರುದ್ಯೋಗ ಸಮಸ್ಯೆಯಿಂದ ಯುವ ಸಮೂಹ ಅತಂತ್ರ ಸ್ಥಿತಿಯಲ್ಲಿ ದಿನಕಳೆಯಬೇಕಾದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದ್ದು ಉದ್ಯೋಗ ಸೃಷ್ಟಿಸಬೇಕಾದ ಸರ್ಕಾರಗಳು ಮೌನವಾಗಿರುವ ಹಿನ್ನೆಲೆ ಯುವ ಸಮೂಹವನ್ನು ನಂಬಿರುವ ಕುಟುಂಬಗಳು ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ಭಾರತ ಪ್ರಜಾ ಸತ್ತಾತ್ಮಕ ಯುವಜನ ಫೆಡರೇಶನ್ ( ಡಿ ವೈ […]
ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]
ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್ ಮಡಿಕೇರಿ : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ […]
ಛತ್ತೀಸ್ಗಢ ರಾಜ್ಯದಲ್ಲಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ : ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್ಗಢ ರಾಜ್ಯದಲ್ಲಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಬಿಜೆಪಿ ಸರ್ಕಾರ ಮತ್ತು ಕೋಮುವಾದಿ ಸಂಘಟನೆ ಸೇರಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿ ೯ ದಿನಗಳ ಕಾಲ ಜೈಲಿನಲ್ಲಿಟ್ಟಿದ್ದರು. ಇಂತಹ ಘಟನೆಗಳು ಮರುಕಳಿಸಬಾರದು ಎಂದ ಅವರು, ಕನ್ಯಾಸ್ತ್ರೀಯರನ್ನು ತಕ್ಷಣ […]
ಹುಲಿ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರು ಎಚ್ಚರವಹಿಸಲು ಅರಣ್ಯ ಇಲಾಖೆ ಸೂಚನೆ

ಸಿದ್ದಾಪುರ : ಸಮೀಪದ ಗುಹ್ಯ ವ್ಯಾಪ್ತಿಗೆ ಸೇರಿದ ಸುತ್ತ ಮುತ್ತಲಿನಲ್ಲಿ ಇದೀಗ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳೀಯರು, ವಾಹನ ಸವಾರರು, ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಅರಣ್ಯ ಸೂಚನೆ ನೀಡಿದೆ.