Breaking News :

ಚೆನ್ನಂಗಿ ಶಾಲೆಯಲ್ಲಿ ಮಕ್ಕಳೇ ಆಯೋಜಿಸಿದ ಕಾರ್ಯಕ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಗಣ್ಯರ ಮೆಚ್ಚುಗೆ

  ಜನವಾಹಿನಿ News ಮಡಿಕೇರಿ : ಶಾಲೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮಗಳನ್ನು ನೋಡುತ್ತಾ ಕೇಳುತ್ತಾ ಕುಳಿತುಕೊಳ್ಳುವ ವಿದ್ಯಾರ್ಥಿಗಳು ತಾವೆ ಕಾರ್ಯಕ್ರಮ ಆಯೋಜಿಸಿ ವೇದಿಕೆ ಮೇಲೆ ಕುಳಿತು ನಿರೂಪಣೆ, ಸ್ವಾಗತ, ಭಾಷಣ ಮಾಡುವ ಮೂಲಕ ಹಾಡಿನೊಂದಿಗೆ ನೃತ್ಯ ಮಾಡಿ ನಾವು ಯಾರಿಗೂ ಕಮ್ಮಿ ಇಲ್ಲಾ ಎಂಬಂತೆ ಕಾರ್ಯಕ್ರಮಕ್ಕೆ ಬಂದ ಗಣ್ಯರು ಹಾಗೂ ಪೋಷಕರ ಗಮನ ಸೆಳೆದರು. ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚನ್ನಯ್ಯ ನಕೊಟೆ ಕ್ಲಸ್ಟರ್ ಮಟ್ಟದ ಪೋಷಕರು -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ […]

ಹಿಟ್ ಅಂಡ್ ರನ್ : ಗೋಣಿಕೊಪ್ಪ – ಕೈಕೇರಿ ಬಳಿ ಅಪರಿಚಿತ ವ್ಯಕ್ತಿ ಸಾವು

ಜನವಾಹಿನಿ News ಗೋಣಿಕೊಪ್ಪ : ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಪಡಿಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳು ಉಂಟಾಗಿ ಮೃತಪಟ್ಟಿದ್ದಾರೆ ಎಂದು ಗೋಣಿಕೊಪ್ಪಲು ಆಸ್ಪತ್ರೆಯ ವೈದ್ಯಧಿಕಾರಿಗಳು ದೃಢಪಡಿಸಿದ್ದಾರೆ. ಅಂದಾಜು 55 ವರ್ಷಪ್ರಾಯದ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದ್ದು ಇವರ ಪರಿಚಯ ಇರುವವರು, ಹಾಗೂ ಕುಟುಂಬಸ್ಥರು ಗೋಣಿಕೊಪ್ಪಲು ಪೊಲೀಸ್ ಠಾಣೆ ಅಥವಾ […]

ಏ.2 ರಿಂದ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆ

  ಜನವಾಹಿನಿ News ಮಡಿಕೇರಿ : ಮುಲ್ಲೇಂಗಡ ಒಕ್ಕದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆಯನ್ನು ೨೦೨೬ರ ಏ.೨,೩,೪ ರಂದು ಕಂಡಂಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ತಾಲೂಕು ಕಂಡಂಗಾಲ ಗ್ರಾಮದಲ್ಲಿ ಮುಲ್ಲೇಂಗಡ ಒಕ್ಕ ಐನ್ ಮನೆ ಹೊಂದಿದೆ. ಕೊಡವ ಸಮುದಾಯಬಾಂಧವರಿಗೆ ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಇತ್ಯಾದಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಉತ್ತೇಜಿಸು ನಿಟ್ಟಿನಲ್ಲಿ […]

ಮಹಿಳೆಯ ಮೊಬೈಲ್ ಕದ್ದು ಪರಾರಿಯಾಗಿದ್ದ ಆರೋಪಿಗಳು ಅಂದರ್

  ಜನವಾಹಿನಿ News ಸಿದ್ದಾಪುರ : ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟ್ಟದಹಳ್ಳ ಪಂಜರಿ ಎರವರ ಸಿದ್ದಯ್ಯ (20) ಮತ್ತು ಪಂಜರಿ ಎರವರ ಮಾದಪ್ಪ (26) ಬಂಧಿತ ಆರೋಪಿಗಳಾಗಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶೈನಿ ಡಿ. ಎಂಬುವವರು ನ. 15 ರಂದು ಸಂಜೆ ಅಂದಾಜು 5 ಗಂಟೆ ಸಮಯದಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್ ಸಮೀಪದ […]

ಕಾಫಿ ತೋಟಗಳ ನಡುವೆ ಶರ ವೇಗದಲ್ಲಿ ಪೈಪೋಟಿ ನೀಡಿದ ರ್‍ಯಾಲಿ ಪಟುಗಳು – ಕಾರುಗಳ  ಪೈಪೋಟಿಗೆ ಪ್ರೇಕ್ಷಕರು ಫುಲ್ ಫಿದಾ 

ಚಾಲನೆ ಸಂದರ್ಭ ಪಲ್ಟಿಯಾದ ಎರಡು ಕಾರು – 2ನೇ ದಿನ ತಾಂತ್ರಿಕ ದೋಷದಿಂದ ಹೊರಗುಳಿದ 10ಕ್ಕೆೊ ಹೆಚ್ಚು ಕಾರುಗಳು ಜನವಾಹಿನಿ News ಮಡಿಕೇರಿ :  ಬ್ಲೂ ಬ್ಯಾಂಡ್  ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಶಿಪ್ ನೇತೃತ್ವದಲ್ಲಿ  ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಾಹಕಾರದೊಂದಿಗೆ ರೋಬಸ್ಟಾ 2025 ರ್‍ಯಾಲಿಯು ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ  ಸಂಚರಿಸಿ  ಗುರಿ ಮುಟ್ಟಲು ಅರಸಹಾಸ ಪಟ್ಟಲು.  ನಿಗದಿತ ಸಮಯ ಮುಟ್ಟಲು ತಾ ಮುಂದು ನಾ ಮುಂದು ಎಂಬಂತೆ   ಕಾರುಗಳು ಸರವೇಗದಲ್ಲಿ […]

ಇಯರ್ ಎಂಡ್ ಕ್ರಿಕೆಟ್ ಕಪ್ : ಪ್ರತಿಭೆಗಳನ್ನು ಗುರುತಿಸಲು, ಉತ್ತಮ ಬಾಂಧವ್ಯ ಬೆಳೆಯಲು ಕ್ರೀಡೆ ಸಹಕಾರಿ : ವಕೀಲ ಪ್ರಶಾಂತ್

  ಜನವಾಹಿನಿ News ಮಡಿಕೇರಿ : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬಾಂಧವ್ಯ ಬೆಳೆಯುತ್ತೆ, ಜತೆಗೆ ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಸಹಕಾರಿ ಆಗುದರ ಜತೆಗೆ ಪ್ರತಿಭೆಗಳನ್ನು ಗುರುತಿಸಲು ಕೂಡ ಅನುಕೂಲವಾಗುತ್ತೆ ಎಂದು ಅಮ್ಮತ್ತಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಕೀಲ ಪ್ರಶಾಂತ್ ಅಭಿಪ್ರಾಯಪಟ್ಟರು. ಟೀಂ ರೆಟ್ರೋ ವತಿಯಿಂದ ಇಂಜಿಲಗೆರೆ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ, ಇಯರ್ ಎಂಡ್ ಕ್ರಿಕೆಟ್ ಕಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಿಬ್ಬನ್ ಕಟ್ ಮಾಡಿದ ಬಳಿಕ ಬ್ಯಾಟಿಂಗ್ ಮಾಡುವ […]

ಕ್ರೀಡೆಗೆ ಸರಕಾರ ಕೋಟ್ಯಾಂತರ ಅನುದಾನ ನೀಡಿದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು : ಶಾಸಕ ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಭಾಗವಹಿಸಿದ್ದರು. ಕ್ರಿಕೆಟ್ ಆಟಗಾರರಿಗೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ […]

ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಜನವಾಹಿನಿ News ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ. 114 ವರ್ಷ ವಯಸ್ಸಾಗಿದ್ದ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ತಿಮ್ಮಕ್ಕ ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು […]

ಸಮರ್ಪಕ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ವರ್ತಕರ ಸಂಘದಿಂದ ಮನವಿ ಸಲ್ಲಿಕೆ

  ಜನವಾಹಿನಿ News ವಿರಾಜಪೇಟೆ : ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸರಬರಾಜು ಸಮರ್ಪಕವಾಗಿ ಪೂರೈಕೆಯಾಗದೆ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪರಿಹಾರವನ್ನು ಕೋರಿ, ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ, ವಿರಾಜಪೇಟೆ ವರ್ತಕರ ಸಂಘದ ವತಿಯಿಂದ ಚೆಸ್ಕಾಂ ಮನವಿ ಪತ್ರ ಸಲ್ಲಿಸಲಾಯಿತು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ ಇತ್ತೀಚೆಗೆ ವಿರಾಜಪೇಟೆಯಲ್ಲಿ ವಿದ್ಯುತ್ ಸಂಪರ್ಕ ಸೂಕ್ತವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಪ್ರತಿಯೊಬ್ಬರೂ ಕೂಡ ನಾನಾ ರೀತಿಯಲ್ಲಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಮನೆಯಲ್ಲಿ ಯಾವುದೇ ವಿದ್ಯುತ್ ಚಾಲಿತ ಯಂತ್ರಗಳನ್ನು ಕೂಡ […]

ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ – ವಿವಿಧ ಕಡೆ ಶೋಧ ಕಾರ್ಯ 

  ಜನವಾಹಿನಿ News ಮಡಿಕೇರಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಎಲ್ಲಾ ನಗರಗಳಲ್ಲಿ ತಪಾಸಣೆ, ಗಸ್ತು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆ ಕೊಡಗಿನ ಜನನಿಬಿಡ ಪ್ರದೇಶಗಳಲ್ಲಿ, ಸರ್ಕಾರಿ ಬಸ್ಸು ನಿಲ್ದಾಣ, ರಾಜಾಸೀಟು ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದು, ವಿಶೇಷ ನಿಗಾ ವಹಿಸಲಾಗಿದೆ. ಮಡಿಕೇರಿ ಬಸ್ಸು ನಿಲ್ದಾಣದಲ್ಲಿದ್ದ […]