Breaking News :

ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ

ಮಡಿಕೇರಿ : ನಗರಸಭೆ ವಿಶೇಷ ಸಾಮಾನ್ಯ ಸಭೆ – ರಾಜಾಸೀಟ್ ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣ ವಿರೋಧಿಸಲು ನಿರ್ಧಾರ ಮಡಿಕೇರಿ: ರಾಜಾಸೀಟ್ ಉದ್ಯಾನದಲ್ಲಿ ಗ್ಲಾಸ್ ಪ್ರೈವಾಕ್ ನಿರ್ಮಾಣವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ನಗರಸಭೆಯ ಗಮನಕ್ಕೆ ತರದ ಹಿನ್ನೆಲೆ ಕಾಮಗಾರಿಯನ್ನು ವಿರೋಧಿಸಲು ನಗರಸಭೆ ಅಧ್ಯಕ್ಷೆ ಪಿ.ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಆರಂಭದಲ್ಲೇ ನಗರಸಭಾ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಸಭೆಯನ್ನು ವಿರೋಧಿಸಿ ಪೌರಾಯುಕ್ತರು, ಅಧ್ಯಕ್ಷರು, ಉಪಾಧ್ಯಕ್ಷರ ಮುಂಭಾಗ ತೆರಳಿ ಆಕ್ರೋಶ ವ್ಯಕ್ತಪಡಿಸಿದರು. […]

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ ಮಡಿಕೇರಿ : ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಪಾರ ಕ್ರೀಡಾ ಪ್ರೇಮಿಗಳನ್ನು ಹಾಗೂ ಸ್ನೇಹಿತರ ಬಳಗವನ್ನು ಅಗಲಿದ್ದಾರೆ. ಗ್ವಾಲಿಯರ್ ನಲ್ಲಿ B.P.Ed ಹಾಗೂ M.P.Ed ಪಡೆದು NIS ಪದವಿ ಪಡೆದಿರುವ ಇವರು ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ತರಬೇತುದಾರ, ದಶಕಗಳಿಂದ ಬೆಂಗಳೂರಿನ SAI ತರಬೇತಿದಾರನಾಗಿ ಸೇವೆಸಲ್ಲಿಸಿದ್ದಾರೆ. ಕೊಡಗು ಹಾಗೂ ಕರ್ನಾಟಕದಿಂದ ಹಲವು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಆಟಗಾರರನ್ನು ತಯಾರು […]

ಮಡಿಕೇರಿಯಲ್ಲಿ ನಡೆದ 4 ಲೈನ್ ಕ್ರಿಕೆಟ್‌ ಪಂದ್ಯಾವಳಿ ಟೀಮ್ ಫ್ಲ್ಯಾಶ್ ಚಾಂಪಿಯನ್ಸ್

ಮಡಿಕೇರಿಯಲ್ಲಿ ನಡೆದ 4 ಲೈನ್ ಕ್ರಿಕೆಟ್‌ ಪಂದ್ಯಾವಳಿ ಟೀಮ್ ಫ್ಲ್ಯಾಶ್ ಚಾಂಪಿಯನ್ಸ್ ಮಡಿಕೇರಿ : ನಗರದ ರಾಣಿಪೇಟೆಯ ಮುನೇಶ್ವರ ಯುವಕ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ 2ನೇ ವರ್ಷದ 4 ಲೈನ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಮ್ ಫ್ಲ್ಯಾಶ್ ತಂಡ ಚಾಂಪಿಯನ್ಸ್ ಪಟ್ಟವನ್ನು ತನ್ನದಾಗಿಸಿಕೊಂಡರೆ. ಟೀಂ ಡಿ.ಕೆ.ಬಾಯ್ಸ್ ಬಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಸಂತು ಮ್ಯಾಕ್ಸ್ ವೆಲ್ ಬೆಸ್ಟ್ ಬ್ಯಾಟ್ಸ್‌ಮನ್, ಮ್ಯಾನ್ ಆಫ್ ದಿ ಮ್ಯಾಚ್, ರಕ್ಷಿತ್ ಬೆಸ್ಟ್ ಬೌಲ‌ರ್ ಹಾಗೂ ಪುನೀತ್ ಮ್ಯಾನ್ ಆಫ್ […]

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ 

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)‌ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ 

ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿರಲು ಕ್ರೀಡಾಕೂಟ ಪೂರಕ ಸಾಧನ : ಮಂತರ್ ಗೌಡ ಸುಂಟಿಕೊಪ್ಪ : ಯಾವುದೇ ಒಂದು ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಿ ಹೊರಹೊಮ್ಮಲು ಕ್ರೀಡಾಕೂಟ ಪೂರಕ ಸಾಧನವೆಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಗದ್ದೆಹಳ್ಳದ ವೈಎಂ.ಕರುಂಬಾಯ್ಯ ನವರ ಗದ್ದೆಯಲ್ಲಿ ಪ್ರಪಥಮ ಬಾರಿಗೆ ಅಯೋಜಿತವಾಗಿದ್ದ ಗದ್ದೆಹಳ್ಳಲಿ ಗದ್ದೆಆಟ ಮಳೆಗಾಲದ ಹಬ್ಬ 2025 ರ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭತ್ತದ ಬೇಸಾಯ […]

ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

  ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಸಿದ್ದಾಪುರ : ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ದಾಪುರ ಪ್ರಗತಿಪರ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಛತ್ತೀಸಗಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. […]

ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ 

ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ ಮಡಿಕೇರಿ : ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025 ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಮಾತನಾಡಿ 2023, 2024 ಮತ್ತು 2025 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು […]

ಅಂಗನವಾಡಿ ಕಾರ್ಯಕರ್ತೆ ಬಿ.ಕೆ.ಸುಶೀಲ ರವರಿಗೆ ಬೀಳ್ಕೊಡುಗೆ 

ಅಂಗನವಾಡಿ ಕಾರ್ಯಕರ್ತೆ ಬಿ.ಕೆ.ಸುಶೀಲ ಅವರಿಗೆ ಬೀಳ್ಕೊಡುಗೆ ಮಡಿಕೇರಿ : ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾರ್ಯ ನಿರ್ವಹಿಸಿ ನಿವೃತ್ತರಾದ ಕಾರ್ಯಕರ್ತೆ ಬಿ.ಕೆ. ಸುಶೀಲ ಅವರನ್ನು ಮರಗೋಡು ವೃತ್ತದ ಕಾರ್ಯಕರ್ತರು ಹಾಗೂ ಸಹಾಯಕಿಯರು ಸನ್ಮಾನಿಸಿ ಬೀಳ್ಕೊಟ್ಟರು.

ಕಾವಾಡಿಯಲ್ಲಿ ಕಥೆ ಹೇಳುವ ಸ್ಪರ್ಧೆ : ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ – ಬಾಚರಣಿಯಂಡ .ಪಿ.ಅಪ್ಪಣ್ಣ.

  ವಿರಾಜಪೇಟೆ ತಾಲೂಕು ಪತ್ರಕತ೯ರ ಸಂಘ , ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನಿಂದ ಕಥಾ ಸಮಯ   ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ – ಬಾಚರಣಿಯಂಡ ಪಿ. ಅಪ್ಪಣ್ಣ ಮಡಿಕೇರಿ : ಜಾನಪದ ಕಥೆಗಳು ಪ್ರಕೖತ್ತಿಯಲ್ಲಿನ ನೈಜ ಪುಷ್ಪಗಳಂತೆ ಸದಾ ಪರಿಮಳ ಬೀರುತ್ತಾ ಕಥಾ ಲೋಕದಲ್ಲಿ ಕಂಗೊಳಿಸುತ್ತದೆ. ಹೀಗಾಗಿ ಜಾನಪದ ಕಥೆಗಳು ಜನರ ಕಥೆಗಳಾಗಿ ಅತ್ಯಂತ ಮಹತ್ವ ಪಡೆಯುತ್ತದೆ. ಜಾನಪದೀಯ ಮೂಲದ ಕಥೆಗಳನ್ನು ಎಂದಿಗೂ ಮರೆಯಬಾರದು ಎಂದು ತ್ರಿಭಾಷಾ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಕಥೆಗಾರರಿಗೆ ಕರೆ […]

ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ

ಪೊನ್ನಂಪೇಟೆ ಸಮೀಪ ರಸ್ತೆ ಮಧ್ಯೆ ಮಗುಚಿ ಬಿದ್ದ ಲಾರಿ : ಕುಟ್ಟ ಪೊನ್ನಂಪೇಟೆ ಸಂಪರ್ಕ ಕಡಿತ ಮಡಿಕೇರಿ : ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿವೊಂದು ರಸ್ತೆ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಲಾರಿ ಮಗುಚಿಬಿದ್ದ ಪರಿಣಾಮ ಕುಟ್ಟ ಪೊನ್ನಂಪೇಟೆ ನಡುವಿನ ರಸ್ತೆ ಸಂಪರ್ಕ ಕಡಿತವಾಗಿತ್ತು. ಲಾರಿಯಲ್ಲಿ ತುಂಬಲಾದ ಸರಕು ಹಾಗೂ ಇರುವವರ ಬಗ್ಗೆ ಮತ್ತು ಅವರ ಯೋಗ ಕ್ಷೇಮದ ಬಗ್ಗೆ ಯಾವುದೇ ಮಾಹಿತಿ ತಡರಾತ್ರಿವರೆಗೆ […]