ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಭಾಗವಹಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ […]
ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ – ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ – ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ

ಜನವಾಹಿನಿ News ಮಡಿಕೇರಿ : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. […]
ಮಡಿಕೇರಿ : ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಜನವಾಹಿನಿ News ಮಡಿಕೇರಿ : ನಗರದ ಹೊರವಲಯದ ಇಬ್ಬಿವಳವಾಡಿ ಗ್ರಾಮದಲ್ಲಿ ಹುಲಿಯ ಚಲನವಲನ ಕಂಡು ಬಂದಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಮಡಿಕೇರಿ ನಗರದಿಂದ ಕೇವಲ ಎರಡು ಕೀ.ಮೀ.ದೂರದಲ್ಲಿರುವ ಇಬ್ಬಿವಳವಾಡಿ ಗ್ರಾಮದ ಪೊನ್ನಚೆಟ್ಟರ ಸಂದೀಪ್ ಎಂಬವರ ತೋಟದಲ್ಲಿ ಹುಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ಭಾಗದ ಏಳೆಂಟು ಕಿ.ಮೀ ವ್ಯಾಪ್ತಿಯಲ್ಲಿ ಹುಲಿಯನ್ನು ಹೋಲುವ ಪ್ರಾಣಿಯ […]
ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್ – ಮೀಡಿಯಾ ಚಾಲೆಂಜರ್ಸ್ ಚಾಂಪಿಯನ್ಸ್

ಜನವಾಹಿನಿ News ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾನುವಾರ ಪತ್ರಕರ್ತರಿಗೆ ಆಯೋಜಿಸಿದ್ದ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-೪ ನಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯಾಟದಲ್ಲಿ ಟಾಸ್ ಸೋತ ಮೀಡಿಯಾ ಚಾಲೆಂಜರ್ಸ್ ತಂಡ ನಿಗದಿತ ೬ ಓವರ್ನಲ್ಲಿ ೨ ವಿಕೆಟ್ ನಷ್ಟಕ್ಕೆ ೮೧ ರನ್ ಕಲೆಹಾಕಿತು. ತಂಡದ ಪರ ವಿನೋದ್ ೩೯, ಹೇಮಂತ್ ೩೧ ರನ್ ಕಲೆ ಹಾಕಿದರು. […]
ಮಾ.26 ರಂದು ವಿದ್ಯುತ್ ವ್ಯತ್ಯಯ

ಜನವಾಹಿನಿ News ಮಡಿಕೇರಿ : 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್, […]
ಮಾ.25 ರಿಂದ ಉದ್ಯೋಗ ಮೇಳ

ಜನವಾಹಿನಿ News ಮಡಿಕೇರಿ : ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ರೀಡ್ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ […]
ದೇವರ ದಾಸಿಮಯ್ಯ ಜಯಂತಿ : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ

ಜನವಾಹಿನಿ News ಮಡಿಕೇರಿ : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ […]
ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರ ಏಕಾಏಕಿ ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಮಾಡಿದನ್ನು ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಇಂದಿರಾ ಗಾಂಧಿ ( ಚೌಕಿ) ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ನೂರಾರು ಕಾರ್ಯಕರ್ತರು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ,ಬಿಜೆಪಿ ಆಡಳಿತ,ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ವಿರುದ್ದ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ […]
ಕೊಡಗಿನಲ್ಲಿ ಶಾಂತಿ ಕದಡಲು ಯತ್ನಿಸುವವರನ್ನು ಗಡಿಪಾರು ಮಾಡಬೇಕು : ಜಿಲ್ಲಾ ಬಿಜೆಪಿ ಆಗ್ರಹ

ಜನವಾಹಿನಿ News ಮಡಿಕೇರಿ : ಇತ್ತೀಚೆಗೆ ನಾಪೋಕ್ಲಿನಲ್ಲಿ ಹಿಂದೂ ಸಂಗಮ ಪ್ರಚಾರದ ವೇಳೆ ನಡೆದ ಹಲ್ಲೆ ಪ್ರಕರಣದ ಆರೋಪಿತರಿಗೆ ಷರತ್ತುಬದ್ಧವಾಗಿ ನೀಡಲಾಗಿರುವ ಜಾಮೀನನ್ನು ರದ್ದುಪಡಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಒತ್ತಾಯಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನಲ್ಲಿ ಈಚೆಗೆ ಶಾಂತಿ ಕದಡುವ ಉದ್ದೇಶದಿಂದ ಹಿಂದೂ ಸಮಾಜೋತ್ಸವದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿತ್ತು. ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಅವರು ಮತ್ತೆ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶಾಂತಿ ಕದಡುವ […]
ಜಾಮೀನಿನಲ್ಲಿ ಹೊರಬಂದ ವ್ಯಕ್ತಿಯಿಂದ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ : ಪೊಲೀಸ್ ಇಲಾಖೆಯಿಂದ ಕ್ರಮ

ಜನವಾಹಿನಿ News ಮಡಿಕೇರಿ : ಇತ್ತೀಚೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರ ಬಂದ ನಾಪೋಕ್ಲು ವ್ಯಾಪ್ತಿಯ ವ್ಯಕ್ತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿ ಬಂದಿದ್ದ ಹಿನ್ನೆಲೆ ಪರಿಶೀಲನೆ ನಡೆಸಿದ್ದು, ರೀಲ್ಸ್ ವೀಡಿಯೋ ಮತ್ತು ಆಡಿಯೋ ಮೂಲಕ ಪ್ರಚೋಧನಕಾರಿ ಹೇಳಿಕೆ ಪ್ರಸಾರ ಮಾಡಿರುವುದು ಇಲಾಖೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಸಮಾಜದಲ್ಲಿ ಅಶಾಂತಿ, ಸಾರ್ವಜನಿಕ ಸೌಹಾರ್ಧತೆಗೆ ಧಕ್ಕೆ ತರಲು ಪ್ರಯತ್ನ ಮಾಡಲಾಗಿದೆ ಎಂದು ಪರಿಗಣಿಸಿ ಪ್ರತ್ಯೇಕ ಪ್ರಕರಣ ದಾಖಲು, ಜಾಮೀನು […]