Breaking News :

ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]

ಮೇಕೇರಿ ಶಕ್ತಿ ನಗರದ ನಿವಾಸಿಗಳಿಗೆ ಶಾಸಕ ಪೊನ್ನಣ್ಣ ನೆರವು

ಮಡಿಕೇರಿ : ಕಳೆದ ಕೆಲದಿನಗಳಿಂದ ಸುರಿದ ಭಾರಿ ಮಳೆಗೆ ಬರೆ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ನಾಪೋಕ್ಲು ಬ್ಲಾಕ್ ಮೇಕೇರಿ ಗ್ರಾಮದ ಶಕ್ತಿನಗರ ಕಾಲೋನಿ ನಿವಾಸಿಗಳಿಗೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ತಮ್ಮ ಸ್ವಂತ ವೆಚ್ಚದಲ್ಲಿ ಟಾರ್ಪಲ್ ಗಳನ್ನು ವಿತರಿಸಿ ಸಹಾಯ ಹಸ್ತ ಚಾಚಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್ ಮುಖಾಂತರ ಸಂತ್ರಸ್ತರಿಗೆ ಟಾರ್ಪಲ್ ವಿತರಿಸಿದ್ದಾರೆ. ಈ […]

ಫಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಿ : ಅಚ್ಚಪಂಡ ಬೋಪಣ್ಣ.

ಫಲಾನುಭವಿಗಳಿಗೆ ಯೋಜನೆಯನ್ನು ತಲುಪಿಸಿ: ಅಚ್ಚಪಂಡ ಬೋಪಣ್ಣ. ವಿರಾಜಪೇಟೆ : ಸರಕಾರದ ಯೋಜನೆಗಳಾದ ಬಸವ ವಸತಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಯೋಜನೆ ಗ್ರಾಮೀಣ ಭಾಗದ ಹೆಚ್ಚುವರಿ ಯೋಜನೆಯಡಿ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು ಇನ್ನು ಅರ್ಜಿ ಸಲ್ಲಿಸಿರುವ ಉಳಿದ ಫಲಾನುಭವಿಗಳಿಗೆ ಮುಂದಿನ ಸಾಲಿಗೆ ಮೊದಲು ಆದ್ಯತೆ ನೀಡಲಾಗುವುದು ಎಂದು ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಚ್ಚಪಂಡ ಎಂ.ಬೋಪಣ್ಣ ಹೇಳಿದರು. ವಿರಾಜಪೇಟೆ ಬಳಿಯ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದ ಸಭಾಂಗಣದಲ್ಲಿ ನಡೆದ ”ಹೆಚ್ಚುವರಿ ಯೋಜನೆಯಡಿ […]

ಮಡಿಕೇರಿಯಲ್ಲಿ ಬಿರುಕು ಬಿಟ್ಟ ಭಾರಿ ತಡೆಗೋಡೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮಡಿಕೇರಿಯಲ್ಲಿ ಬಿರುಕು ಬಿಟ್ಟ ಭಾರಿ ತಡೆಗೋಡೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ ಮಡಿಕೇರಿ : ಮಡಿಕೇರಿ-ಮಂಗಳೂರು ರಸ್ತೆಗೆ ನಿರ್ಮಿಸಲಾಗಿದ್ದ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. 2018ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದ ಸಂದರ್ಭ ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂ ಕುಸಿತ ಉಂಟಾದ ಹಿನ್ನೆಲೆ ರಸ್ತೆ ಬದಿಗೆ ಬೃಹತ್ ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗಿತ್ತು. ಇದೀಗ ತಡೆಗೋಡೆಯಲ್ಲಿ ಬೃಹತ್ ಗಾತ್ರದ ಬಿರುಕು ಕಾಣಿಸಿಕೊಂಡಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ […]

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಸತಿ ಶಾಲೆ ನಿರ್ಮಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಇಲಾಖೆ […]

ಕೊಡಗು : ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕಾರು ಅಪಘಾತ ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಅಪಘಾತಕ್ಕೀಡಾದ ಕಾರು ಹಾನಿಯಾಗಿದೆ.  

ಕೊಡ್ಲಿಪೇಟೆ ನಂದಿಪುರ ವ್ಯಾಪ್ತಿಯ ಸರಕಾರಿ ಜಾಗ ಭೂಗಳ್ಳರ ಪಾಲಾಗದಂತೆ ಎಚ್ಚರ ವಹಿಸಿ : ದಸಂಸ ಆಗ್ರಹ

ಕೊಡ್ಲಿಪೇಟೆ ನಂದಿಪುರ ವ್ಯಾಪ್ತಿಯ ಸರಕಾರಿ ಜಾಗ ಭೂಗಳ್ಳರ ಪಾಲಾಗದಂತೆ ಎಚ್ಚರ ವಹಿಸಲು ದಸಂಸ ಆಗ್ರಹ ಮಡಿಕೇರಿ : ಕೊಡ್ಲಿಪೇಟೆ ಹೋಬಳಿ ನಂದಿಪುರ ಗ್ರಾಮದ ಸರ್ವೆ ನಂ.೮೮/೧ರ ೪ ಎಕರೆ ೬೬ ಸೆಂಟು ಪೈಸಾರಿ ಭೂಮಿಯನ್ನು ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಸ್ವಾಧೀನಕ್ಕೆ ಪಡೆಯಲು ಸೋಮವಾರಪೇಟೆ ನ್ಯಾಯಾಲಯದ ಆದೇಶವಿದ್ದು, ಸರ್ಕಾರಿ ಜಾಗವನ್ನು ಸರ್ಕಾರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಭೂಗಳ್ಳರ ಪಾಲಾಗದಂತೆ ಎಚ್ಚರ ವಹಿಸಬೇಕೆಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಸಂಚಾಲಕ […]

ಮಳೆಗಾಲದಲ್ಲೂ ತಪ್ಪದ ಕುಡಿಯುವ ನೀರಿನ ಸಮಸ್ಯೆ : ಗ್ರಾಮ ಪಂಚಾಯಿತಿ ವಿರುದ್ಧ ಜನಾಕ್ರೋಶ

ಮಳೆಗಾಲದಲ್ಲೂ ತಪ್ಪದ ಕುಡಿಯುವ ನೀರಿನ ಸಮಸ್ಯೆ : ಗ್ರಾಮ ಪಂಚಾಯಿತಿ ವಿರುದ್ಧ ಜನಾಕ್ರೋಶ ಸಿದ್ದಾಪುರ : ಇಲ್ಲಿನ ಗುಹ್ಯ ಗ್ರಾಮದ ಕೂಡುಗದ್ದೆ ವ್ಯಾಪ್ತಿಯ ನಿವಾಸಿಗಳಿಗೆ ಮಳೆಗಾಲದಲ್ಲೂ ಕುಡಿಯುವ ನೀರಿಗೆ ಪರದಾಡುವಂತ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಾರ್ಮಿಕ ಮನೆಗಳಿರುವ ಈ ವ್ಯಾಪ್ತಿಗೆ ಸರಿಯಾಗಿ ಕುಡಿಯುವ ನೀರು ಪೂರೈಕೆ ಆಗದಿದ್ದು, ಕೂಲಿ ಕಾರ್ಮಿಕರು ಪ್ರತಿನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯಿತಿಯಿಂದ ಕೇಂದ್ರ ಸರ್ಕಾರದ ಪ್ರತಿಷ್ಠಿತ ಯೋಜನೆಗಳಲ್ಲೊಂದಾದ ಮನೆ ಮನೆಗೆ ಗಂಗೆ ಯೋಜನೆಯಡಿ ಮನೆ ಮನೆಗೆ ನಲ್ಲಿ ಹಾಕಲಾಗಿದೆ. ಆದರೆ […]

ಬೇತ್ರಿ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ 

ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ  ವಿರಾಜಪೇಟೆ : ವಿರಾಜಪೇಟೆ ವ್ಯಾಪ್ತಿಯ ಬೇತ್ರಿ ಹೊಳೆಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿದೆ. ನದಿ ದಡದ ಬಿದಿರು ಮರಗಳ ನಡುವೆ ಸಿಕ್ಕಿಕೊಂಡಿದ್ದು, ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ನಿವಾಸಿಗಳು ವಿರಾಜಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಇತ್ತೀಚೆಗೆ ನಾಪತ್ತೆಯಾಗಿರುವ,ಅಥವಾ ಮನೆಯಿಂದ ಕಾಣೆಯಾಗಿದವರ ಮಾಹಿತಿ ಇದ್ದರೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಿದ್ದಾರೆ.

ಮಳೆ ಅವಾಂತರ: ಮನೆಮೇಲೆ ಬಿದ್ದ ಭಾರಿ ಗಾತ್ರದ ಮರ ನಜ್ಜುಗುಜ್ಜಾದ ಕಾರು

ಮಳೆ ಅವಾಂತರ: ಮನೆಮೇಲೆ ಬಿದ್ದ ಭಾರಿ ಗಾತ್ರದ ಮರ ನಜ್ಜುಗುಜ್ಜಾದ ಕಾರು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಸಾಕಷ್ಟು ಅವಾಂತರ ಸಂಭವಿಸಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಮನೆ ಹಾಗೂ ಕಾರಿಗೆ ಹಾನಿಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ಹೊರ ವಲಯದ ದೇವಸ್ತೂರು ಎಂಬಲ್ಲಿ ನಡೆದಿದೆ. ದೇವಸ್ತೂರು ಗ್ರಾಮದ ಕುಕ್ಕೇರ ಚಿಮ್ಮ ಎಂಬುವವರ ಮನೆ ಮೇಲೆ ಒಣಗಿದ ಗೋಳಿ ಮರ ಬಿದ್ದ ಪರಿಣಾಮ ಮನೆಯ ಮುಂಭಾಗ ನಿಲ್ಲಿಸಿದ ಕಾರು […]