Breaking News :

ಪುರಸಭಾ ಸದಸ್ಯನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ; ಧರ್ಮಸ್ಥಳಕ್ಕೆ ಬಂದು ನಿನ್ನೆಯಷ್ಠೇ ವಾಪಾಸ್ಸಾಗಿದ್ದವನನ್ನು ಹೊಂಚು ಹಾಕಿ ಹತ್ಯೆ

ಪುರಸಭೆ ಸದಸ್ಯನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾದನಪುರದಲ್ಲಿ ನಡೆದಿದೆ. ಬಾದನಪುರ ಕಾರ್ಪೊರೇಟರ್ ರವಿ ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಗಳೂರು ಆನೇಕಲ್ ತಾಲೂಕಿನ ಪುರಸಭೆಯ ಸದಸ್ಯ ರವಿ ನಿನ್ನೆಯಷ್ಟೇ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ತೆರಳಿ ಮನೆಗೆ ವಾಪಸ್ ಆಗಿದ್ದರು. ಬಳಿಕ ರಾತ್ರಿ 8:45ಕ್ಕೆ ಮನೆ ಹೊರಗೆ ಹೋಗಿದ್ದ ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಾದನಪುರ ಮೂಲದ ಹರೀಶ್ ಹಾಗೂ ವಿನಯ್ ಮತ್ತು ಕರ್ಪೂರ ಗ್ರಾಮದ ಜೆಕೆ ಈ […]

ಮಂಗಳೂರು ಜೈಲಿನ ಮೇಲೆ 150ಕ್ಕೂ ಅಧಿಕ ಪೊಲೀಸರು ದಾಳಿ

ಮಂಗಳೂರು: ಬೆಳ್ಳಂ ಬೆಳಗ್ಗೆ ಮಂಗಳೂರು ಪೊಲೀಸರು  ಜೈಲಿನ ಮೇಲೆ ದಾಳಿ ಮಾಡಿದ್ದು, ಈ ವೇಳೆ ಗಾಂಜಾ, ಡ್ರಗ್ಸ್ , ಮೊಬೈಲ್​ ಫೋನ್​ಗಳು, ಡಿವೈಸ್​ಗಳು ಪತ್ತೆಯಾಗಿವೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್​ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. […]

ಒಲಿಂಪಿಕ್ಸ್ ​ ಕ್ರೀಡಾಕೂಟದಲ್ಲಿ ಭಾರತದ ಪರ ಶಾಸಕಿ ಸ್ಪರ್ಧೆ: ಜನಪ್ರತಿನಿಧಿಯಾಗಿದ್ದು, ಪದಕ ಗೆಲ್ಲುವ ನಿರೀಕ್ಷೆಯಲ್ಲಿರುವ ಇವರು ಯಾರು ಗೊತ್ತಾ?

ಪ್ಯಾರಿಸ್​ ಒಲಿಂಪಿಕ್ಸ್ ​ ಕ್ರೀಡಾಕೂಟದಲ್ಲಿ  ಈ ಬಾರಿ ಭಾರತದಿಂದ 117 ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರಲ್ಲಿ ಓರ್ವ  ಶಾಸಕಿ ಕೂಡ ಇರುವುದು ವಿಶೇಷವಾಗಿದೆ. ಶ್ರೇಯಸಿ ಸಿಂಗ್ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕಿಯಾಗಿದ್ದಾರೆ. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿಯಾಗಿದ್ದಾರೆ. ಇವರು ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿದ್ದರು. ಮೊದಲು ಒಲಿಂಪಿಕ್ಸ್‌ ಆಯ್ಕೆಯ ಪಟ್ಟಿಯಲ್ಲಿ ಶ್ರೇಯಸಿ ಅವರ ಹೆಸರಿರಲಿಲ್ಲ. ಟೋಕಿಯೊ ಒಲಿಂಪಿಯನ್‌ ಮನು ಭಾಕರ್‌ ಮಹಿಳೆಯರ […]

ಸೌದಿಯಿಂದ ಬಂದು ಸ್ವಂತ ಅಣ್ಣನ ಮಗನನ್ನೇ ಕೊಲೆ‌ ಮಾಡಿದ ಚಿಕ್ಕಪ್ಪ

ಚಿಕ್ಕಬಳ್ಳಾಪುರ: ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊಲೆ ಮಾಡಲೆಂದು ಊರಿಗೆ ಬಂದು ತನ್ನ ಸ್ವಂತ ಅಣ್ಣನ ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರದಲ್ಲಿ ನಡೆದಿದೆ. ನಜೀರ್‌ ಅಹ್ಮದ್‌ ಕೊಲೆಯಾಗಿರುವ ವ್ಯಕ್ತಿಯಾಗಿದ್ದಾರೆ. ಈತನನ್ನು ಚಿಕ್ಕಪ್ಪ ಬಶೀರ್‌ ಅಹ್ಮದ್‌(66) ಕೊಲೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಬಶೀರ್ ಅಹ್ಮದ್  ಇತ್ತೀಚೆಗೆ ಊರಿಗೆ ಬಂದಿದ್ದ. ಯಾವುದೋ ಕಾರಣಕ್ಕೆ ಜಗಳವಾಗಿದ್ದು, ಪಿಸ್ತೂಲ್‌ ತೆಗೆದು ಸ್ವಂತ ಅಣ್ಣನ ಮಗ ನಜೀರ್‌ ಅಹ್ಮದ್‌ನನ್ನು ಕೊಲೆ ಮಾಡಿದ್ದಾರೆ. ಇತ್ತ, ಗಲಾಟೆ […]

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಮೃತ್ಯು

ಸುರತ್ಕಲ್; ಭಾರೀ ಗಾಳಿ-ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ಸಮೀಪವಿರುವ ಜೋಕಟ್ಟೆಯಲ್ಲಿ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಭಾರೀ ಗಾಳಿ ಮಳೆಗೆ ಬೆಳಿಗ್ಗೆ ಅವಘಡ ನಡೆದಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯನ್ನು ನುಂಗಲು ಮುಂದಾದ ಹೆಬ್ಬಾವು; ಶಾಕಿಂಗ್ ಘಟನೆ ವರದಿ

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಬರೋಬ್ಬರಿ 13 ಅಡಿ ಉದ್ದದ ಬೃಹತ್ ಹೆಬ್ಬಾವು ದಾಳಿ ಮಾಡಿದ್ದು, ಆತನನ್ನು ನುಂಗಲು ಮುಂದಾಗಿದೆ. ಈ ಘಟನೆ ಮಧ್ಯಪ್ರದೇಶ ರಾಜ್ಯದ ಜಬ್ಬಲಪುರ ಬಳಿಯ ಗ್ರಾಮದಲ್ಲಿ ನಡೆದಿದೆ. ಎಂದಿನಂತೆ ಸೋಮವಾರ ಬೆಳಗ್ಗೆ ಮಲವಿಸರ್ಜನೆಗೆಂದು ಕಾಡಿಗೆ ತೆರಳಿದ್ದ ವೇಳೆ ಹೆಬ್ಬಾವು ದಾಳಿ ಮಾಡಿದೆ. ಬಹಿರ್ದೆಸೆಗೆ ತೆರಳಿ ವ್ಯಕ್ತಿ ಮರದ ಕೆಳಗೆ ಕುಳಿತಿದ್ದು, ಮರದ ಮೇಲಿಂದಲೇ ಆತನ ಮೇಲೆ ಹೆಬ್ಬಾವು ದಾಳಿ ಮಾಡಿದೆ. ಬಹಿರ್ದೆಸೆಗೆ ಕುಳಿತವನು ಮೇಲೇಳಲೂ ಸಾಧ್ಯವಾಗದಂತೆ ಆತನ ಕಾಲುಗಳನ್ನು ಸುತ್ತಿಕೊಂಡಿದೆ. ಕೂಡಲೇ ಆತ […]

ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಮೂವರು ಆತ್ಮಹತ್ಯೆ

ಕಾಸರಗೋಡು: ಪ್ರತ್ಯೇಕ ಘಟನೆಗಳಲ್ಲಿ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜೇಶ್ವರ ಹೊಸಬೆಟ್ಟು ಸಸಿಹಿತ್ಲುವಿನ ಗೌತಮ್ ರಾಜ್ (23) , ಕುಂಜತ್ತೂರು ಮರಿಯಾಶ್ರಮ ಚರ್ಚ್ ಕಾಂಪೌಡ್ ನ ಬ್ರಾಯನ್ ಪಿಂಟೊ (20) ಮತ್ತು ಮೊರತ್ತಣೆ ಕಜೆಕೋಡಿಯ ಬಿ.ರಾಜೇಶ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜೇಶ್ವರ ಹೊಸ ಬೆಟ್ಟು ನಲ್ಲಿ ಗೌತಮ್ ರಾಜ್ ಚಿಕ್ಕಮ್ಮನ ಮನೆಯಲ್ಲಿ  ವಾಸವಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಇನ್ನು ಮಂಜೇಶ್ವರ ಮೊರತ್ತಣೆಯ ರಾಜೇಶ್ […]

ಅಂಕೋಲಾ ಗುಡ್ಡೆ ಕುಸಿತ ಸ್ಥಳದಲ್ಲಿ ಪೊಕಲೇನ್ ಯಂತ್ರದ ಮೂಲಕ ಕಾರ್ಯಾಚರಣೆ; ಏನಿದು ಯಂತ್ರ?

ಉತ್ತರ ಕನ್ನಡ,: ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಾಪತ್ತೆಯಾದವರ ಮೃತದೇಹ ಪತ್ತೆಗೆ ಹುಡುಕಾಟ ಮುಂದುವರಿದಿದೆ. ಗಂಗಾವಳಿ ನದಿಯಲ್ಲಿ ಪೊಕಲೇನ್ (poclain) ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಈ ಪೊಕಲೇನ್ ವೆಹಿಕಲ್, ನದಿಯ ಆಳದಲ್ಲಿರುವ ಮಣ್ಣನ್ನು ತೆರವು ಮಾಡುವ ಯಾಂತ್ರವಾಗಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ಕರ್ನಾಟಕದ ಇಬ್ಬರು ಮತ್ತು ಕೇರಳದ ಓರ್ವರ‌ ಮೃತದೇಹ ಪತ್ತೆ ಮಾಡಬೇಕಿದೆ. 60 ಅಡಿ ಉದ್ದವಾದ […]

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಗುದನಾಳದಿಂದ 16 ಇಂಚಿನ ಸೋರೆಕಾಯಿ ತೆಗೆದ ವೈದ್ಯರು!

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವನ ಗುದನಾಳದಿಂದ ಶಸ್ತ್ರಚಿಕಿತ್ಸೆ ನಡೆಸಿ 16 ಇಂಚಿನ ಸೋರೆಕಾಯಿ ವೈದ್ಯರು ಹೊರತೆಗೆದ ವಿಚಿತ್ರ ಘಟನೆ ಮಧ್ಯಪ್ರದೇಶದ ಛತ್ತರ್ ಪುರದಲ್ಲಿ ನಡೆದಿದೆ.  60 ವರ್ಷದ ವ್ಯಕ್ತಿಯೊಬ್ಬರು ಹೊಟ್ಟೆ ನೋವು ಮತ್ತು ಖಾಸಗಿ ಅಂಗಗಳಲ್ಲಿ ನೋವಿನಿಂದ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರು ಎಕ್ಸರೇ ತೆಗೆದು ನೋಡಿದಾಗ ವ್ಯಕ್ತಿಯ ಗುದದ್ವಾರದಲ್ಲಿ 16 ಇಂಚಿನ ಸೋರೆಕಾಯಿ ಇರುವುದು ಕಂಡುಬಂದಿದೆ. ಇದನ್ನು ನೋಡಿದ ವೈದ್ಯರು ಬೆಚ್ಚಿಬಿದ್ದು, ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ (TOI) ಪ್ರಕಾರ, 60 ವರ್ಷದ ರೈತ […]

ಬಜೆಟ್ ನಲ್ಲಿ ನಿರ್ಲಕ್ಷ್ಯ; ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕರ್ನಾಟಕ‌ ಸೇರಿ ನಾಲ್ಕು ರಾಜ್ಯಗಳ ಸಿಎಂಗಳು

ಕೇಂದ್ರ ಬಜೆಟ್‌ನಲ್ಲಿ ತಮ್ಮ ರಾಜ್ಯಗಳನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ  ನೀತಿ ಆಯೋಗದ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕದ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದಾರೆ. ನೀತಿ ಆಯೋಗದ ಸಭೆಗೆ ಹಾಜರಾಗುವುದು ಅರ್ಥಹೀನ, ಕನ್ನಡಿಗರ ಕಾಳಜಿಯನ್ನು ಮರೆಯಲಾಗಿದೆ. ಕರ್ನಾಟಕದ […]