ಪವಿತ್ರ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಮಂಗಳವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶಾಸಕರಾದ ಡಾ.ಮಂತರ್ ಗೌಡ ಅವರು ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ […]
ಆ.27 ರಂದು ಕೋಟೆ ಗಣಪತಿ ದೇವಾಲಯದಲ್ಲಿ ಮಹಾಪೂಜೆ

ಜನವಾಹಿನಿ NEWS ಮಡಿಕೇರಿ : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆಗಸ್ಟ್, 27 ರಂದು ಬೆಳಗ್ಗೆ 7 ಗಂಟೆಯಿಂದ ಭಕ್ತಾಧಿಗಳಿಗೆ ಗಣಪತಿ ಪೂಜೆ ಹಾಗೂ ಬೆಳಗ್ಗೆ 10 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 7.30 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು […]
ಯುವನಿಧಿ ಭಿತ್ತಿ ಪತ್ರ ಬಿಡುಗಡೆ

ಜನವಾಹಿನಿ NEWS ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತ್ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ. ಬಿ ಅವರು ಮಾತಾನಾಡಿ 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ […]
ಸಿಸ್ಕೊ ಸಂಸ್ಥೆಯಿಂದ ಹೆಗ್ಗಳ ಶಾಲೆಗೆ ಕೊಡುಗೆ

ಜನವಾಹಿನಿ NEWS ವಿರಾಜಪೇಟೆ : ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಜಾಗೃತಿ ಹಾಗೂ ಸಿಸ್ಕೊ ಸಂಸ್ಥೆಯ ಸ್ವಯಂ ಸೇವಕರು ಆಗಮಿಸಿ ವಿದ್ಯಾರ್ಥಿಗಳಿಗೆ ಆಟದ ವಸ್ತುಗಳು, ಡ್ರಾಯಿಂಗ್ ಚಾರ್ಟ್, ಲೇಖನಿ, ಶಾಲೆಗೆ ಪೈಂಟಿಂಗ್, ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಿದರು. ಮಾತ್ರವಲ್ಲದೆ ಮಕ್ಕಳಿಗೆ ಮದ್ಯಾಹ್ನ ದ ಉಪಹಾರದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಿದರು. ಒಟ್ಟು ಇಪ್ಪತ್ತು ಸ್ವಯಂ ಸೇವಕರನ್ನು ಒಳಗೊಂಡ ತಂಡದಲ್ಲಿ ಸಿಸ್ಕೊ ಸಂಸ್ಥೆಯ ಮಚ್ಚಾರಂಡ ಅಯ್ಯಪ್ಪ, ಜಾಗೃತಿ ಟ್ರಸ್ಟ್ ನ ಅಧಿಕಾರಿ ಕಣ್ಣನ್, […]
ಧರ್ಮಸ್ಥಳ ಪ್ರಕರಣ : ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ : ತಹಶೀಲ್ದಾರ್ ಗೆ ಮನವಿ : SIT ಅಂತರ್ ರಾಜ್ಯಗಳಲ್ಲಿಯು ತನಿಖೆ ನಡೆಸಲಿ ಸಂಸದ ಯದುವೀರ್ ಒತ್ತಾಯ

ಜನವಾಹಿನಿ NEWS ವಿರಾಜಪೇಟೆ : ಹಿಂದೂಗಳ ಶ್ರದ್ದಾ ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಪಟ್ಟಭದ್ರ ಹಿತಾಶಕ್ತಿಗಳು ಅಪಮಾನ ಮಾಡುವ ರೀತಿಯಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಕೊಂಡು ಬಂದಿದೆ. ಪ್ರಸ್ತುತ ಸರ್ಕಾರವು ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ ಎಂದು ತಾಲೂಕು ಭಾರತೀಯ ಜನತಾ ಪಕ್ಷವು ಧರ್ಮಸ್ಥಳ ಪ್ರಕರಣದ ವಿರುದ್ದ ಪ್ರತಿಭಟನೆ ನಡೆಸಿತು. ಭಾರತೀಯ ಜನತಾ ಪಕ್ಷ ವಿರಾಜಪೇಟೆ ಮಂಡಲದ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಧರ್ಮದ ಉಳಿವಿಗಾಗಿ ಧರ್ಮಯುದ್ದ ಎಂಬ ಘೋಷವಾಖ್ಯದಡಿಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಖಂಡಿಸಿ ಬೃಹತ್ ಪ್ರತಿಭಟನೆ […]
ಆ.27 ರಂದು ಮೂರ್ನಾಡಿನ ವಿವಿಧೆಡೆ ಗಣೇಶ ಉತ್ಸವ ಮೂರ್ತಿಗಳ ಪ್ರತಿಷ್ಠಾಪನೆ.

ಜನವಾಹಿನಿ NEWS ಮೂರ್ನಾಡು : ಮೂರ್ನಾಡಿನ ಪಟ್ಟಣ ಮತ್ತು ವಿವಿಧೆಡೆ ೨೭ರಂದು ವಿವಿಧ ಸಂಘ ಸಂಸ್ಥೆಗಳಿಂದ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ ೩೪ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿಯನ್ನು ೧೦-೦೦ ಗಂಟೆಗೆ ಪ್ರತಿಷ್ಠಾಪಿಸಲಾಗುವುದು. ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ ೩೩ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿಯನ್ನು ಗಾಂಧಿನಗರದ ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ ೮-೦೦ ಗಂಟೆಗೆ ಪ್ರತಿಷ್ಠಾಪಿಸಲಾಗುವುದು. […]
ಸೆ.19ರಂದು ರಾಜ್ಯ ಮಟ್ಟದ ಕಿವುಡರ ಸಂಘದ ಕ್ರೀಡಾಕೂಟ

ಜನವಾಹಿನಿ NEWS ವಿರಾಜಪೇಟೆ : ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಸೆಪ್ಟೆಂಬರ್ 19 ರಂದು ಕಿವುಡ ಸಮುದಾಯದ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಗೌರವ ಅಧ್ಯಕ್ಷ ಜೋಸೆಫ್ ಸ್ಯಾಮ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಿವುಡ ಸಮುದಾಯದ ಸಬಲಿಕರಣಕ್ಕಾಗಿ ನಮ್ಮ ಸಂಘವು ಎಂಟು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಕಿವುಡ ರ ವಯುಕ್ತಿಕ ಬೆಳವಣಿಗೆ ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ 2025ರ […]
ದೇಶದ ಅಭಿವೃದ್ದಿಯಲ್ಲಿ ಕೃಷಿ ಕ್ಷೇತ್ರದ ಕೊಡುಗೆ ಅಪಾರ : ಸಂಸದ ಯದುವೀರ್

ಜನವಾಹಿನಿ NEWS ಸೋಮವಾರಪೇಟೆ : ಇಲ್ಲಿನ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ, ಸಮೀಪದ ಹುದುಗೂರು ಗ್ರಾಮದ ಕಾಳಿಕಾಂಬ ಯುವಕ ಸಂಘದ ಸಹಯೋಗದೊಂದಿಗೆ ಗ್ರಾಮದ ಐಮುಡಿಯಂಡ ಗಣೇಶ್ ಅವರ ಗದ್ದೆಯಲ್ಲಿ ಆಯೋಜಿಸಿದ್ದ 7 ನೇ ವರ್ಷದ ನಾಟಿ ಹಬ್ಬ ಹಾಗೂ ಕೆಸರು ಗದ್ದೆ ಕ್ರೀಡಾಕೂಟವನ್ನು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು. ನಂತರ ಮಾತನಾಡಿದ ಸಂಸದ ಯದುವೀರ್ ಅವರು, ದೇಶದ ಅಭಿವೃದ್ದಿಯಲ್ಲಿ ಕೃಷಿ ಕ್ಷೇತ್ರ ಮಹತ್ತರ ಪಾತ್ರ ವಹಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಯುವ ಜನಾಂಗ ಉದ್ಯೋಗ ಸೇರಿದಂತೆ ಇನ್ನಿತರ […]
ಯಿಫಾ ಸಂಘಟನೆಯ ನೇತೃತ್ವದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ

ಜನವಾಹಿನಿ NEWS : ಸೋಮವಾರಪೇಟೆಯ ಯಂಗ್ ಇಂಡಿಯನ್ಸ್ ಫಾಮರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ, ಹುದುಗೂರು ಗ್ರಾಮದ ಶ್ರೀ ಕಾಳಿಕಾಂಬ ಯುವಕ ಸಂಘದ ಆಶ್ರಯದಲ್ಲಿ, ಹುದುಗೂರಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣಾ ಸಮಾರಂಭ ಯುವಕ ಸಂಘದ ಮೈದಾನದಲ್ಲಿ ನಡೆಯಿತು.ಗ್ರಾಮದ ಐಮುಡಿಯಂಡ ಗಣೇಶ್ ಅವರ ಕೆಸರು ಗದ್ದೆಯಲ್ಲಿ ನಡೆದ ಪುರುಷರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಟೀಮ್ ಪೊನ್ನಂಪೇಟೆ ತಂಡ ಪ್ರಥಮ, ಕೂಡುಮಂಗಳೂರು ಮಾರುತಿ ಫ್ರೆಂಡ್ಸ್ ತಂಡ ದ್ವೀತೀಯ ಸ್ಥಾನ ಗಳಿಸಿತು. […]
ಮುಕ್ಕೋಡು ಗ್ರಾಮದಲ್ಲಿ ರೈತರ ಬೆಳೆ ನಾಶ – ಅರಣ್ಯ ಇಲಾಖೆಯ ಕ್ರಮಕ್ಕೆ ರೈತರ ಆಕ್ರೋಶ:20 ವರ್ಷದ ತೋಟ ನೆಲಸಮ – ಅರಣ್ಯ ಇಲಾಖೆಯ ವಿರುದ್ಧ ‘ಅರಣ್ಯ ಭವನ ಚಲೋ’ ಎಚ್ಚರಿಕೆ

ಜನವಾಹಿನಿ NEWS ಸೋಮವಾರಪೇಟೆ : ಮಡಿಕೇರಿ ತಾಲೂಕಿನ ಮುಕ್ಕೋಡು ಗ್ರಾಮದ ಕಲ್ಲೊಟ್ಸ್ ಗ್ರಾಮದಲ್ಲಿ ಪೈಸಾರಿ ಜಾಗದಲ್ಲಿ ಬೆಳೆದಿದ್ದ ಏಲಕ್ಕಿ ಹಾಗೂ ಕಾಫಿ ಗಿಡಗಳನ್ನು ಅರಣ್ಯ ಇಲಾಖೆಯವರು ಕಡಿದು ಸಂಪೂರ್ಣ ನಾಶಪಡಿಸಿದ ಸ್ಥಳಕ್ಕೆ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಪೈಸಾರಿ ಜಾಗದಲ್ಲಿ ಕೃಷಿ ಮಾಡಿಕೊಂಡಿದ್ದ ಕಾಳಚಂಡ ನಾಣಿಯಪ್ಪ ವೃದ್ಧ ದಂಪತಿಯ ಮೇಲೆ ಅರಣ್ಯ ಇಲಾಖೆ ಅಮಾನುಷ ಕೃತ್ಯ ಎಸಗಿದ್ದು, ಫಸಲು ಕೊಡುವ ಹಂತದಲ್ಲಿದ್ದ ಏಲಕ್ಕಿ […]