ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ

ಗುರಿ ಸಾಧಿಸುವ ಛಲವಿದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯ; ಆರ್.ಐಶ್ವರ್ಯ ಮಡಿಕೇರಿ : ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ, ಸಾದಿಸುವ ಛಲ ಇದ್ದಲ್ಲಿ ಜೀವನದಲ್ಲಿ ಏನನ್ನು ಬೇಕಾದರೂ ಸಾದಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಮಾದಾಪುರದ ಡಿ.ಚೆನ್ಮಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಎಂತಹುದ್ದೇ ಕಠಿಣ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದೆಗುಂದದೆ ಸೋಲು ಗೆಲವುಗಳನ್ನು ಸ್ಥಿತಪ್ರಜ್ಞರಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗರಗಂದೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪಾರ್ವತಿ ಮಾತನಾಡಿ ವಿದ್ಯಾರ್ಥಿ ಸಂಘದ […]
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಬೆಂಗಳೂರು : ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ ರಾಜ್ಕುಮಾರ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ […]
ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಕಾರ್ಯಕ್ರಮ

ಮಡಿಕೇರಿ : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ನಾಳೆ (ಶನಿವಾರ) ಸಂಜೆ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ […]
ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ: ಕೃಷ್ಣ ಬೈರೇಗೌಡ

ಪೊನ್ನಂಪೇಟೆ ಮತ್ತು ಕುಶಾಲನಗರದಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ: ಕೃಷ್ಣ ಬೈರೇಗೌಡ ಮಡಿಕೇರಿ : ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆಯ ತಹಶೀಲ್ದಾರರ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಸರ್ಕಾರ ಭೂಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆ ತಹಶೀಲ್ದಾರರ ಕಚೇರಿಯಲ್ಲಿ ಯಾವ ರೀತಿ ಅಪ್ಡೇಟ್ ಮಾಡಿದ್ದಾರೆ ಎಂಬ ಬಗ್ಗೆ ಸಚಿವರು ಮಾಹಿತಿ […]
ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ

ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ ಮಡಿಕೇರಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಮತ್ತು ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗೆ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಜುಲೈ 26ರ ಬೆಳಿಗ್ಗೆ 8.30ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುನ್ನಚ್ಚರಿಕೆಯನ್ನೂ […]
ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ

ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಒತ್ತಾಯ : ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ ಮಡಿಕೇರಿ : ಸಿಎಂ ಸಿದ್ದರಾಮಯ್ಯ ನವರು ಘೋಷಿಸಿದ ಮಾಸಿಕ ಗೌರವಧನ, ಮಾಸಿಕ ೧೦,೦೦೦ ಮತ್ತು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ರೂ.೧೦೦೦ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾವಣೆಗೊಂಡ ಜಿಲ್ಲೆಯ ವಿವಿಧ […]
ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು ಮಡಿಕೇರಿ : ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತಿಬ್ಬರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. […]
ಪೊನ್ನಂಪೇಟೆ ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದ ಕಂದಾಯ ಸಚಿವರು

ಮಡಿಕೇರಿ : ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪೊನ್ನಂಪೇಟೆ ತಾಲ್ಲೂಕು ತಹಶಿಲ್ದಾರರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಹಶಿಲ್ದಾರ್ ಮೋಹನ್ ಕುಮಾರ್ ಇತರರು ಇದ್ದರು.
ಕುಸಿದು ಬಿದ್ದ ಕಾರ್ಮಿಕನ ಮನೆ : ಕಂದಮ್ಮನ ಕೈಗೆ ಗಂಭೀರ ಪೆಟ್ಟು : ಶಿಲ್ಪಿ ಎಸ್ಟೇಟ್ ನಲ್ಲಿ ಘಟನೆ

ಕುಸಿದು ಬಿದ್ದ ಕಾರ್ಮಿಕನ ಮನೆ : ಕಂದಮ್ಮನ ಕೈಗೆ ಗಂಭೀರ ಪೆಟ್ಟು : ಶಿಲ್ಪಿ ಎಸ್ಟೇಟ್ ನಲ್ಲಿ ಘಟನೆ ಸಿದ್ದಾಪುರ : ಅತಿಯಾದ ಮಳೆಯಿಂದ ಕಾರ್ಮಿಕರು ವಾಸವಿದ್ದ ಮನೆಯೊಂದು ಕುಸಿದು ಬಿದ್ದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್ ನಲ್ಲಿ ನಡೆದ ಘಟನೆ. ಘಟನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕರ 4 ವರ್ಷದ ಬಾಲಕನ ಕೈಗೆ ಗಂಭೀರ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಬಾಲಕನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ […]
ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]