Breaking News :

ಸೀತಾರಂ ಯೆಚೂರಿ ಪಾರ್ಥೀವ ಶರೀರ ಏಮ್ಸ್ ಆಸ್ಪತ್ರೆಗೆ ದಾನ

ಸಿಪಿಐಎಂ ಹಿರಿಯ ನಾಯಕ ಸೀತಾರಾಂ ಯಚೂರಿ ಕುಟುಂಬಸ್ಥರು ಅವರ ಪಾರ್ಥೀವ ಶರೀರವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ ಮೆಡಿಕಲ್ ಕೇಂದ್ರಕ್ಕೆ ದಾನ ಮಾಡಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸಿಪಿಐ ಕಾರ್ಯದರ್ಶಿ ಸೀತಾರಾಂ ಯಚೂರಿ (72) ನಿನ್ನೆ ನಿಧನರಾಗಿದ್ದರು. ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಯಚೂರಿ ಕುಟುಂಬಸ್ಥರು ಯಚೂರಿ ಅವರ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ ಮೆಡಿಕಲ್ ಕೇಂದ್ರಕ್ಕೆ ನೀಡಲಾಗಿದೆ. ಯಚೂರಿ ಅವರ ಮೃತದೇಹ ಉಪಯೋಗವಾಗಲಿ, ಅವರ ನಿಧನದ ಬಳಿಕವೂ ಅವರ […]

ಉಪ್ಪಿನಂಗಡಿ: ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ:  ಅಪ್ರಾಪ್ತ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ಆರೋಪಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ‌. ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿಧ್ಯಾರ್ಥಿನಿಯನ್ನು ಆರೋಪಿ ಪರಿಚಯಮಾಡಿಕೊಂಡಿದ್ದ, ಬಳಿಕ ಮೊಬೈಲ್ ಪೋನ್ ನಂಬರ ಪಡೆದು ಆತ್ಮೀಯತೆ ಬೆಳೆಸಿದ್ದಾನೆ. ಈ ನಡುವೆ ಜುಲೈ 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು […]

ಭಿಕ್ಷಕನ ಬಳಿ 7.5 ಕೋಟಿ ರೂ.; ಈತ ಜಗತ್ತಿನ ಶ್ರೀಮಂತ ಭಿಕ್ಷುಕ!

ಮುಂಬೈನ ಭಿಕ್ಷುಕ ಭರತ್ ಜೈನ್ ಕೋಟಿ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು,7.5 ಕೋಟಿ ರೂ.ಸಂಪತ್ತಿನ ಒಡೆಯನಾಗಿದ್ದಾನೆ. ನಾವು ಸಾಮಾನ್ಯವಾಗಿ ಭಿಕ್ಷುಕರನ್ನು ಅತ್ಯಂತ ಬಡವರು, ದೈನಂದಿನ ಉಳಿವಿಗಾಗಿ ಹೋರಾಡುವವರು ಎಂದು ಗ್ರಹಿಸುತ್ತೇವೆ. ಆದರೆ, ಒಬ್ಬ ಭಿಕ್ಷುಕ ಕೋಟಿಗಟ್ಟಲೆ ಸಂಪತ್ತನ್ನು ಸಂಪಾದಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಅತ್ಯಂತ ಶ್ರೀಮಂತ ಭಿಕ್ಷುಕ ಎಂದು ಪರಿಗಣಿಸಲ್ಪಟ್ಟ ಭರತ್ ಜೈನ್ ಅಸಾಧಾರಣ ವ್ಯಕ್ತಿ. ಮುಂಬೈನ ನಿವಾಸಿಯಾಗಿರುವ ಭರತ್ ಜೈನ್ ಕೋಟಿಗಟ್ಟಲೆ ಆಸ್ತಿಯನ್ನು ಹೊಂದಿದ್ದಾರೆ. ಕಾರ್ಪೊರೇಟ್ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿರುವ ಅನೇಕ ಸುಶಿಕ್ಷಿತ ವೃತ್ತಿಪರರಿಗಿಂತ […]

ಉಳ್ಳಾಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ […]

ಬೈಕ್ ಗೆ ಲಾರಿ ಢಿಕ್ಕಿ: ಮೂವರು ವಿದ್ಯಾರ್ಥಿಗಳು ದುರ್ಮರಣ

ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಯಲಹಂಕ ಸಮೀಪ ನಡೆದಿದೆ. ಜಿಕೆವಿಕೆ ಆವರಣದಲ್ಲಿ ಇರುವ ಬಾಗಲಕೋಟೆಯ ತೋಟಗಾರಿಕೆ ವಿವಿಯ ವಿದ್ಯಾರ್ಥಿಗಳಾದ ರೋಹಿತ್ (21), ಹರ್ಷವರ್ಧನ್ (22) ಹಾಗೂ ಸುಚಿತ್ (22) ಮೃತರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ರಾತ್ರಿ 1 ಗಂಟೆಗೆ ಒಂದೇ ಬೈಕ್‌ನಲ್ಲಿ ಮೂವರು ವಿದ್ಯಾರ್ಥಿಗಳು ಜಾಲಿ ರೈಡ್‌ಗೆ ಹೋಗಿ ಹಾಸ್ಟೆಲ್‌ಗೆ ಮರಳುವಾಗ ಚಿಕ್ಕಜಾಲ ಸಮೀಪದ ಡ್ಯಾಶ್ ಸ್ಯ್ಕಾವರ್ ಮುಂದೆ ಅವಘಡ ಸಂಭವಿಸಿದೆ. ಅಪಘಾತದ ಬಳಿಕ […]

ವಯನಾಡು ಭೂ ಕುಸಿತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡಿದ್ದ ಯುವತಿಯ ಬಾಳಲ್ಲಿ ಮತ್ತೊಂದು ದುರಂತ

ಕೇರಳದ ವಯನಾಡ್‌ನ ಚೂರಲ್ಮಲದಲ್ಲಿ ಜುಲೈ 30 ರಂದು ನಡೆದ ಭೂಕುಸಿತದಲ್ಲಿ ತನ್ನ ತಂದೆ ತಾಯಿ ಸೋದರಿ ಸೇರಿದಂತೆ ಕುಟುಂಬದ 9 ಮಂದಿಯನ್ನು ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಆಘಾತ ಎದುರಾಗಿದ್ದು, ಭೂಕುಸಿತ ಘಟನೆ ನಡೆದು ಸರಿಸುಮಾರು ಒಂದು ತಿಂಗಳ ಬಳಿಕ ಈಗ ಅವರು ತಮ್ಮ ಭಾವಿ ಪತಿಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದಾರೆ ವಯನಾಡ್‌ ಭೂಕುಸಿತದಲ್ಲಿ ತನ್ನವರೆಲ್ಲರನ್ನು ಕಳೆದುಕೊಂಡಿದ್ದ ಆಕೆಗೆ ಬದುಕುವ ಭರವಸೆ ನೀಡಿದ್ದು, ಆಕೆಯ ಭಾವಿ ಪತಿ ಹಾಗೂ ಬಾಲ್ಯದ ಗೆಳೆಯ 24 ವರ್ಷದ ಜೀಸನ್ ಅವರು. ಆದರೆ ಈಗ […]

ಪುತ್ತೂರು: ಅಪಘಾತದ ಗಾಯಾಳು ಉಪನ್ಯಾಸಕಿ ಮೃತ್ಯು; ಜೀವಕ್ಕೆ ಕುತ್ತು ತಂದಿದ್ದ ಕೊಡೆ

ಪುತ್ತೂರು; ಬೈಕಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ […]

ಮಂಗಳೂರು: ಹಸುವೊಂದಕ್ಕೆ ದಯಾಮರಣ; ಏನಿದು ಅಪರೂಪದ ಸುದ್ದಿ?

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ವ್ಯಾಪ್ತಿಗೆ ಸೇರಿರುವ ಕೊಲ್ಯ ಎನ್ನುವ ಪ್ರದೇಶದಲ್ಲಿ ಹಸುವೊಂದಕ್ಕೆ ಬುಧವಾರ ದಯಾಮರಣ ನೀಡಿರುವ ಬಗ್ಗೆ ವರದಿಯಾಗಿದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಸು ಸಾರ್ವಜನಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿತ್ತು. ಅನವಶ್ಯಕವಾಗಿ ಜರನ್ನು ತಿವಿಯಲು ಹೋಗುತ್ತಿತ್ತು. ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ ಹಸುವಿನ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕಳೆದ ಎರಡು ದಿನಗಳಿಂದಲೂ ಇದೇ ವರ್ತನೆ ತೋರಿಸಿದ್ದ ಹಸುವನ್ನು ಸ್ಥಳೀಯರೇ ಸೇರಿ ಕಟ್ಟಿ ಹಾಕಿದ್ದರು. ಇತ್ತೀಚೆಗೆ ಮಹಿಳೆಯೊಬ್ಬರ ಮೇಲೂ ದಾಳಿ ನಡೆಸಿತ್ತು. ಇನ್ನು ಹಸು […]

ಯೂಸುಫ್ ಅಲಿಯ ಲುಲು ಗ್ರೂಪ್ ನಿಂದ ಭಾರತದ ಅತಿದೊಡ್ಡ “ಶಾಪಿಂಗ್ ಮಾಲ್” ನಿರ್ಮಾಣ; ಎಲ್ಲಿ ಗೊತ್ತಾ?

ಲುಲು ಗ್ರೂಪ್ ಇಂಟರ್‌ನ್ಯಾಶನಲ್ ಗುಜರಾತ್‌ನ ಅಹಮದಾಬಾದ್‌ನಲ್ಲಿ “ಭಾರತದ ಅತಿದೊಡ್ಡ ಶಾಪಿಂಗ್ ಮಾಲ್” ಅನ್ನು ನಿರ್ಮಿಸಲು ಸಿದ್ಧವಾಗಿದೆ. ಲುಲು ಗ್ರೂಪ್, ಭಾರತದ ಪ್ರಮುಖ ನಗರಗಳಲ್ಲಿ ಶಾಪಿಂಗ್ ಮಾಲ್‌ಗಳನ್ನು ಹೊಂದಿದೆ ಮತ್ತು ನಿರ್ವಹಿಸುತ್ತದೆ. ಪ್ರಸ್ತುತ, ಲುಲು ಮಾಲ್‌ಗಳು ಭಾರತದಾದ್ಯಂತ ಆರು ನಗರಗಳಲ್ಲಿ ಬೆಂಗಳೂರು, ಕೊಯಮತ್ತೂರು, ಹೈದರಾಬಾದ್, ಕೊಚ್ಚಿ, ಲಕ್ನೋ ಮತ್ತು ತಿರುವನಂತಪುರಂನಲ್ಲಿ ಮಾಲ್‌ ಹೊಂದಿದೆ. ಕಳೆದ ವರ್ಷ, ಲುಲು ಗ್ರೂಪ್ ಭಾರತದಾದ್ಯಂತ 12 ಹೊಸ ಮಾಲ್‌ಗಳನ್ನು ತೆರೆಯುವ ಯೋಜನೆಯನ್ನು ಘೋಷಿಸಿತು. ಆರು ಮಾಲ್‌ಗಳು ಮತ್ತು ಉತ್ತರ ಪ್ರದೇಶದ ನೋಯ್ಡಾ, ವಾರಣಾಸಿ, […]

ನೇಜಾರು ತಾಯಿ- ಮಕ್ಕಳ ಕೊಲೆ ಪ್ರಕರಣ; ಜೈಲಿನಲ್ಲಿ ಉಪವಾಸ ಕುಳಿತ ಆರೋಪಿ ಪ್ರವೀಣ್ ಚೌಗಲೆ

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಅನ್ನ, ನೀರು ಸ್ವೀಕರಿಸದೆ ಉಪವಾಸ ಮುಷ್ಕರ ಹೂಡಿದ್ದಾನೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್, ಆಹಾರ ಸೇವಿಸದೆ ಉಪವಾಸ ಮುಷ್ಕರ ಮಾಡುತ್ತಿದ್ದು, ಪ್ರತ್ಯೇಕ ಸೆಲ್‌ನಿಂದ ಪ್ರಧಾನ ಸೆಲ್‌ಗೆ ಶಿಫ್ಟ್‌ ಮಾಡಲು ಬೇಡಿಕೆ ಇಟ್ಟಿದ್ದಾನೆ. 2023ರ ನವೆಂಬರ್ 12ರಂದು ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು. ಏರ್ ಇಂಡಿಯಾ […]