Breaking News :

ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ; ರಾಜ್ಯಪಾಲರಿಗೆ ಎಚ್ಚರಿಸಿದ ಐವನ್ ಡಿಸೋಜಾ, ಬಿಜೆಪಿಯಿಂದ ಆಕ್ಷೇಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ  ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾತನಾಡಿದ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಸಿದ್ದಾರೆ. ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ […]

ಮಂಗಳೂರಿನಲ್ಲಿ ಸಕ್ರಿಯವಾಗಿದ್ದ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಗ್ಯಾಂಗ್; ಕರಾವಳಿಗರಿಗೆ ಶಾಕಿಂಗ್ ಸುದ್ದಿ

ಖೋಟಾ ನೋಟು ಮುದ್ರಿಸಿ ಮಂಗಳೂರಿನಲ್ಲಿ ಚಲಾವಣೆ ಮಾಡುತ್ತಿದ್ದ ತಂಡವನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡಿನ ಕೊಳತ್ತೂರು ನಿವಾಸಿ ಪ್ರಿಯೇಶ್(38), ಮುಳಿಯಾರು ವಿನೋದ್ ಕುಮಾರ್ (33), ಕುನಿಯಾ ಅಬ್ದುಲ್ ಖಾದರ್ (58), ಬೆಳಿಯೂರು ಕಟ್ಟೆಯ ಅಯೂಬ್ ಖಾನ್(51) ಬಂಧಿತ ಆರೋಪಿಗಳು. ಕಾಸರಗೋಡು ಜಿಲ್ಲೆಯಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ […]

ಮಂಗಳೂರು; ಪ್ರತಿಭಟನೆ ವೇಳೆ ಬಸ್ಸಿಗೆ ಕಲ್ಲೆಸೆತ, ಮೂವರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ […]

BREAKING ಪ್ರಾಸಿಕ್ಯೂಷನ್ ಗೆ ತಡೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆಯನ್ನು 29ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು. […]

ಸಿದ್ದರಾಮಯ್ಯ ಪರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುವಾಗ ಕುಸಿದು ಬಿದ್ದು ಮೃತಪಟ್ಟ ಕುರುಬರ ಸಂಘದ ಅಧ್ಯಕ್ಷ

ಮುಡಾ ಅವ್ಯವಹಾರಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಿದ್ದಾಗ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕುರಿತು ಕುರುಬರ ಸಂಘದ ಅಧ್ಯಕ್ಷರಾಗಿರುವ ರವಿಚಂದ್ರನ್, ರಾಜ್ಯಪಾಲರ ವಿರುದ್ಧ ಮಾತನಾಡುವಾಗ ಕುಸಿದು ಬಿದ್ದಿದ್ದಾರೆ. ಇನ್ನು ಅವರನ್ನು ಹತ್ತಿರದ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್ […]

ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ಆದೇಶ ನೀಡುವಂತಿಲ್ಲ; ಸಿದ್ದರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ಕೋರ್ಟ್ ನಲ್ಲಿ ವಾದ

ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ವೇಳೆ ಮಾತನಾಡಿದ ಹಿರಿಯ ವಕೀಲ ಮನು ಸಿಂಘ್ವಿ , ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು. ರಾಜ್ಯಪಾಲರಿಗೆ […]

ರಾಜ್ಯಪಾಲರ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಟೈರ್ ಗೆ ಬೆಂಕಿ, ಕೈ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಪ್ರತಿಭಟನೆ ತೀವ್ರಗೊಂಡಿದೆ. ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ಕಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇನ್ನೂ ಬೆಂಗಳೂರಿನ […]

ಮಂಗಳೂರು; ರಾಜ್ಯಪಾಲರ ವಿರುದ್ಧದ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ; ಮಹಿಳೆಗೆ ಗಾಯ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ಜೋಕಟ್ಟೆಗೆ ಹೋಗುವ ಸಿಟಿ ಬಸ್ ಗೆ ಲಾಲ್ ಬಾಗ್ ನಲ್ಲಿ  ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಗಾಯವಾಗಿದೆ. ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸೀಟಿನ ಹಿಂದೆ ಕುಳಿತಿದ್ದ ಮಹಿಳೆಗೆ ಗಾಯವಾಗಿದೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ನಡೆದಿದೆ. ನಾಗೇಶ(56), ಸತ್ಯಲಕ್ಷ್ಮೀ (46) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದ ದಂಪತಿ ಶನಿವಾರ ರಾತ್ರಿ ಚಾಮರಾಜ ನಗರದ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೊಳ್ಳೇಗಾಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ; ಗಾಂಜಾ ನಶೆಯಲ್ಲಿ ತಳವಾರು ಝಳಪಿಸಿದ ಗ್ಯಾಂಗ್; ಇಬ್ಬರಿಗೆ ಗಾಯ

ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ ಝಳಪಿಸಿದ ಘಟನೆ ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಾಲ್ಕೈದು ಜನರಿಗೆ ಗಂಭೀರವಾಗಿ ಗಾಯವಾಗಿದೆ. ಘಟನೆಗೆ ಸಂಬಂಧಿಸಿ ವಕ್ವಾಡಿಯ ಆದರ್ಶ(33), ಎಡ್ವರ್ಡ್(35), ಗಣೇಶ್ ಕುಂಭಾಶಿ(28), ಗೋವರ್ಧನ್(32) ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಪರಾರಿ ಆಗಿದ್ದು, ಪೊಲೀಸ್‌ರು ಹುಡುಕಾಟ ನಡೆಸಿದ್ದಾರೆ. ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದಾಂಧಲೆ ಮಾಡಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಆಟೋ, ಬೈಕ್ ಮೇಲು […]