Breaking News :

ವಿಟ್ಲ; ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಠಾಣೆಗೆ ಹಿಂಜಾವೇ ಮುಖಂಡರು ಭೇಟಿ

ವಿಟ್ಲ : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕನೋರ್ವ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ವಿಟ್ಲ ಸಮೀಪದ ಕುದ್ದು ಪದವಿನಿಂದ ಕೇಳಿ ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ ಮುಖಂಡರು ವಿಟ್ಲ ಠಾಣೆಗೆ ಭೇಟಿ ನೀಡಿದ್ದಾರೆ‌. ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ […]

ವಿಟ್ಲ; ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಸ್ಕೂಟರ್ ಸವಾರನ ಸ್ಥಿತಿ ಗಂಭೀರ

ವಿಟ್ಲ; ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಅತ್ಮಹತ್ಯೆ; ಪತ್ನಿ ವಿರುದ್ಧ ಕಿರುಕುಳ ಆರೋಪಿಸಿದ ಕುಟುಂಬ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್ ನಲ್ಲಿ ನಡೆದಿದೆ. ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಮಂಜುನಾಥ್ ಗೆ ಪತ್ನಿ ಚೇತನ ಪತಿ ಕಿರುಕುಳ ನೀಡುತ್ತಿದ್ದರು ಎಂದು ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ […]

ಮದ್ರಸಾಗಳಿಗೆ ಮಾನ್ಯತೆ ನೀಡಲು ವಿವಿಗಳ ಸ್ಥಾಪನೆಗೆ ಮುಂದಾದ ಸರಕಾರ

ಮದ್ರಸಾಗಳಿಗೆ ಮಾನ್ಯತೆ ನೀಡಲು ಎರಡು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಉತ್ತರಪ್ರದೇಶ ಸರಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಮಾನ್ಯತೆ ಪಡೆಯದ ಮದ್ರಸಾಗಳಲ್ಲಿನ ವಿದ್ಯಾರ್ಥಿಗಳನ್ನು ರಾಜ್ಯ ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಿಸುವ ವಿವಾದದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಓಂ ಪ್ರಕಾಶ್‌ ರಾಜ್‌ಭರ್‌, ‘ಹೊಸದಾಗಿ ಸ್ಥಾಪಿಸುವ ಎರಡು ವಿಶ್ವವಿದ್ಯಾಲಯಗಳೊಂದಿಗೆ ಉತ್ತರ ಪ್ರದೇಶದ ಮದ್ರಸಾ ಶಿಕ್ಷಣ ಮಂಡಳಿಯನ್ನು ಜೋಡಿಸಲಾಗುವುದು. ಈ ವಿವಿಗಳಿಂದ ಎಲ್ಲ ಮದ್ರಸಾಗಳು ಮಾನ್ಯತೆ ಪಡೆಯಬೇಕು ಎಂಬ ಕಾನೂನು ತರಲಾಗುವುದು. […]

ಏರ್ ಪೋರ್ಟ್ ನಲ್ಲಿ ತಮಾಷೆಗೆ ಬಾಂಬ್ ಇದೆ ಎಂದ ಪ್ರಯಾಣಿಕ; ಮುಂದೇನಾಯ್ತು ಗೊತ್ತಾ?

ಏರ್ಪೋರ್ಟ್ ನಲ್ಲಿ ಬ್ಯಾಗ್ ಚೆಕಿಂಗ್ ವೇಳೆ ಬಾಂಬ್ ಇದೆ ಎಂದು ತಮಾಷೆ ಮಾಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕೇರಳದ ಕೊಚ್ಚಿನ್​ ಏರ್​ಪೋರ್ಟ್​​ನಲ್ಲಿ ನಡೆದಿದೆ. ಸೆಕ್ಯುರಿಟಿ ಚೆಕ್​ಇನ್ ಅಧಿಕಾರಿಗಳು ತಮ್ಮ ಬ್ಯಾಗ್ ತಪಾಸಣೆ ಮಾಡುತ್ತಿದ್ದ ವೇಳೆ, ತನ್ನ ಬ್ಯಾಗ್​ನಲ್ಲಿ ಏನೂ ಬಾಂಬ್ ಇಲ್ವಲ್ಲಾ ಎಂದು 42 ವರ್ಷದ ಮನೋಜ್ ಕುಮಾರ್ ಹೇಳಿದ್ದಾನೆ. ಈತ ಕೊಚ್ಚಿಯಿಂದ ಮುಂಬೈಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಅವರ ಹೇಳಿಕೆ ಕಳವಳಕ್ಕೆ ಕಾರಣವಾಯಿತು. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (ಬಿಡಿಡಿಎಸ್) […]

ವಯನಾಡು ಭೂಕುಸಿತಕ್ಕೆ ಪ್ರಚೋದಕ ಅಂಶವೇನು? ಭೂವೈಜ್ಞಾನಿಕ ಸಮೀಕ್ಷೆ ಹೇಳುತ್ತಿರುವುದೇನು ಗೊತ್ತಾ?

ದೇಶವನ್ನೇ ಬೆಚ್ಚಿಬೀಳಿಸಿದ್ದ ವಯನಾಡು ಭೂಕುಸಿತ ದುರಂತದ ಬಗ್ಗೆ  ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯು ಮಹತ್ವದ ಮಾಹಿತಿಯನ್ನು ನೀಡಿದ್ದು,  ಅತಿಯಾದ ಮಳೆ ದುರಂತಕ್ಕೆ ಪ್ರಚೋದಕ ಅಂಶವೆಂದು ಉಲ್ಲೇಖಿಸಿದೆ. ನಿರಂತರ ಮಳೆಯಿಂದಾಗಿ ಒಳಗೆ ಹೆಚ್ಚುವರಿ ರಂಧ್ರ ಒತ್ತಡ ಹೆಚ್ಚಾಗಲು ಕಾರಣವಾಗುವ ಅತಿಯಾದ ಹೊರೆಯ ವಸ್ತುಗಳ ಸಡಿಲ ಮತ್ತು ಅಸಂಘಟಿತ ಸ್ವಭಾವವು ಈ ಎಲ್ಲಾ ಘಟನೆಗಳಿಗೆ ಪ್ರಚೋದಕ ಅಂಶವಾಗಿದೆ ಎಂದು ಜುಲೈ 30ರ ಭೂಕುಸಿತದ ಬಗ್ಗೆ ಜಿಎಸ್‌ಐನ ಪ್ರಥಮ ಮಾಹಿತಿ ವರದಿ ತಿಳಿಸಿದೆ. 2015-16ರಲ್ಲಿ ನಡೆಸಿದ ರಾಷ್ಟ್ರೀಯ ಭೂಕುಸಿತ ಸಸೆಪ್ಟೆಬಿಲಿಟಿ ಮ್ಯಾಪಿಂಗ್ ಪ್ರಕಾರ, […]

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲು

ಕೋಲ್ಕತಾ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ  ಪಿಜಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಭಾರೀ ಸದ್ದು ಮಾಡಿತ್ತು, ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ತನಿಖೆಯ ವೇಳೆ ಹಲವು ಮಹತ್ವದ ಅಂಶಗಳು ಬಯಲಾಗಿದೆ. ಅಪರಾಧ ಮಾಡಿದ ನಂತರ, ಆರೋಪಿ ತಾನು ಉಳಿದುಕೊಂಡಿದ್ದ ಸ್ಥಳಕ್ಕೆ ಹಿಂತಿರುಗಿ ಶುಕ್ರವಾರ ತಡರಾತ್ರಿಯವರೆಗೆ ಮಲಗಿದ್ದನು. ಎಚ್ಚರವಾದ ನಂತರ, ಅವನು ಮತ್ತೆ  ಬಟ್ಟೆ ತೊಳೆದಿದ್ದಾನೆ ಎಂದು ಪೋಲಿಸರು ತನಿಖೆಯ ವೇಳೆ ಕಂಡು ಕೊಂಡಿದ್ದಾರೆ. ಘಟನೆ ನಡೆದ ಬಳಿಕ ಭಾರೀ […]

ಮಂಗಳೂರು; ಟಾರ್ಗೆಟ್ ಇಲ್ಯಾಸ್ ಮರ್ಡರ್ ಕೇಸ್ ಆರೋಪಿಯ ಬರ್ಬರ ಹತ್ಯೆ

ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀ‌ರ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಕಲ್ಲಾಪು ಬಳಿ ಭಾನುವಾರ ರಾತ್ರಿ ನಡೆದಿದೆ. ತನ್ನ ತಾಯಿಯೊಂದಿಗೆ ಕಲ್ಲಾಪು ರೆಸ್ಟೋರೆಂಟ್‌ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಇದ್ದ ತಂಡ ಹತ್ಯೆಗೈದು ಪರಾರಿಯಾಗಿದೆ. ದರೋಡೆ ಕೇಸಿನಲ್ಲಿ ಜೈಲು ಪಾಲಾಗಿದ್ದ ಸಮೀ‌ರ್ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದ ಎಂದು ತಿಳಿದು ಬಂದಿದೆ.  

ಶಾಲಾ ತರಗತಿಯಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯವಾಗಿ ವರ್ತನೆ; ವಿಡಿಯೋ ವೈರಲ್ ಬೆನ್ನಲ್ಲಿ ವ್ಯಕ್ತವಾದ ಆಕ್ರೋಶ

ಖಾಸಗಿ ಶಾಲೆಯೊಂದರ ತರಗತಿಯಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ. ನೋಯ್ಡಾದ ಶಾಲೆಯೊಂದರ ವಿಡಿಯೋ ಇದು ಎಂದು ಹೇಳಲಾಗುತ್ತದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರತಿಯ ಕೊನೆಯ ಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡುತ್ತಿದ್ದರು, ಅವರ ಪಕ್ಕದಲ್ಲೇ ಇತರ ಮಕ್ಕಳು ಕೂಡ ಕಿಸ್ಸಿಂಗ್ ರೊಮ್ಯಾನ್ಸ್ ನಲ್ಲಿ ತೊಡಗಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ […]

ಕಾರ್ಕಳ; ಓಮ್ನಿ- ಆಲ್ಟೋ ಕಾರಿನ ನಡುವೆ ಅಪಘಾತ; ಓರ್ವನ ಸ್ಥಿತಿ ಗಂಭೀರ

ಕಾರ್ಕಳ: ಓಮಿನಿ ಮತ್ತು ಆಲ್ಟೊ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ  ಓರ್ವ ಗಂಭೀರವಾಗಿ ಗಾಯಗೊಂಡು ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಾಣೂರು ಕೋಳಿ ಫಾರಂ ಬಳಿ ನಡೆದಿದೆ. ಅಪಘಾತದಲ್ಲಿ ಓಮಿನಿ ಕಾರಿನಲ್ಲಿದ್ದ ಮೂಡಬಿದ್ರೆ ನಿವಾಸಿಗಳಾದ ಆಫ್ರಿದ್, ಗಂಭೀರವಾಗಿ ಗಾಯಗೊಂಡಿದ್ದು,  ಅನ್ವಿಸ್, ಅಶ್ವಿನ್ ಮತ್ತು ಅಗ್ಮ  ಗಾಯಗೊಂಡಿದ್ದಾರೆ. ಮೂಡುಬಿದಿರೆಯಿಂದ ಕಾರ್ಕಳದ ರೆಸಾಟ್೯ ಕಡೆಗೆ ಬರುತ್ತಿದ್ದ ಓಮಿನಿ ಕಾರು ಹಾಗೂ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ […]