ಬಸ್ & ಆಟೋ ನಡುವೆ ಅಪಘಾತ; ತಾಯಿ & ಇಬ್ಬರು ಮಕ್ಕಳು ದುರ್ಮರಣ

ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನ ಅತಿವಾಳ ಕ್ರಾಸ್ ಬಳಿ ನಡೆದಿದೆ. ಬೀದರ್ನ ಹೊನ್ನಕೇರಿ ತಾಂಡಾ ನಿವಾಸಿಗಳಾದ ಅನಿತಾ ಬಾಯಿ(45) ಮತ್ತು ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿತರ ಮೂವರು ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುನೀತ್ ಕೆರೆಹಳ್ಳಿ ಗ್ಯಾಂಗ್ ಸೃಷ್ಟಿಸಿದ್ದ ನಾಯಿ ಮಾಂಸ ವಿವಾದಕ್ಕೆ ಪುಲ್ ಸ್ಟಾಪ್; ಹೈದ್ರಾಬಾದ್ ಲ್ಯಾಬ್ ಅಂತಿಮ ವರದಿ ಬಹಿರಂಗ

ಇದ್ರೀಶ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಗ್ಯಾಂಗ್ ಸೃಷ್ಟಿಸಿದ್ದ ನಾಯಿ ಮಾಂಸ ವಿವಾದಕ್ಕೆ ಕೊನೆಗೆ ಪುಲ್ ಸ್ಟಾಪ್ ಬಿದ್ದಿದೆ. ಮಾಂಸದ ಮಾದರಿಯನ್ನು ಪರಿಶೀಲಿಸಿ ಹೈದರಾಬಾದ್ ಲ್ಯಾಬ್ ಅಂತಿಮ ವರದಿಯನ್ನು ನೀಡಿದ್ದು, ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸವೇ ಹೊರತು ನಾಯಿ ಮಾಂಸವಲ್ಲ ಎಂದು ಹೇಳಿದೆ. ಕೆಲ ದಿನಗಳ ಹಿಂದೆ ರಾಜಸ್ಥಾನದಿಂದ ಉದ್ಯಮಿ ಅಬ್ದುಲ್ ರಜಾಕ್ ತರಿಸುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್ ಕೆರೆಹಳ್ಳಿ ಗ್ಯಾಂಗ್ ರಾದ್ದಾಂತ ಮಾಡಿ ಪೊಲೀಸರ […]
ನನ್ನ ಬಗ್ಗೆ ಬೀದಿ ಬೀದಿಯಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ, ಇನ್ಮುಂದೆ ಪ್ರತಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ; ಸಿಎಂ ಸಿದ್ದರಾಮಯ್ಯ

ನಾನು ಈಗ ಮೊದಲಿನ ಸಿದ್ದರಾಮಯ್ಯ ಅಲ್ಲ, ನಾನು ಬದಲಾಗುತ್ತೇನೆ. ಇನ್ಮುಂದೆ ಪ್ರತಿ ಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಬಗ್ಗೆ ಹೋಗ್ಲಿ ಬಿಡು, ಹೋಗ್ಲಿ ಬಿಡು ಅಂತ ನಾನು ಹೇಳುತ್ತಿದ್ದೆ. ಅದೇ ನನಗೆ ಈಗ ಮುಳ್ಳಾಗುತ್ತಿದೆ. ಪ್ರತಿ ಪಕ್ಷಗಳ ಎಲ್ಲಾ ನಾಯಕರ ಹಳೇ ಪ್ರಕರಣ ತೆರೆಯುತ್ತೇನೆ. ದ್ವೇಷದ ರಾಜಕಾರಣ ಅಂದರೂ ಪರವಾಗಿಲ್ಲ. ನಾನು ಇನ್ಮುಂದೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಪ್ಪೇ ಮಾಡದ […]
ಕ್ರಿಕೆಟರ್ ಮೊಹಮ್ಮದ್ ಸಿರಾಜ್ ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರಕಾರ

ಹೈದರಾಬಾದ್ : ಬೌಲರ್ ಮುಹಮ್ಮದ್ ಸಿರಾಜ್ಗೆ ತೆಲಂಗಾಣ ಸರಕಾರವು ನಿವೇಶನ ಮಂಜೂರು ಮಾಡಿದೆ. ಜುಬಿಲಿ ಹಿಲ್ಸ್ನ ರಸ್ತೆ ಸಂಖ್ಯೆ 78 ರಲ್ಲಿ 600 ಚದರ ಭೂಮಿಯನ್ನು ಮಂಜೂರು ಮಾಡುವ ಆದೇಶವನ್ನು ತೆಲಂಗಾಣ ಸರ್ಕಾರ ನೀಡಿದೆ. ಜುಲೈ 31 ರಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಸಿರಾಜ್ ಅವರಿಗೆ ನಗರದಲ್ಲಿ ಮನೆ ನಿವೇಶನ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಸಿರಾಜ್ ಅವರೊಂದಿಗೆ, ಶೂಟರ್ ಇಶಾ ಸಿಂಗ್ ಮತ್ತು ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಝರೀನ್ ಅವರಿಗೂ […]
ಉಡುಪಿ; ಬಸ್ ಟೈಮಿಂಗ್ಸ್ ವಿಚಾರದಲ್ಲಿ ಗಲಾಟೆ; ಪ್ರಕರಣ ದಾಖಲು

ಬಸ್ ಟೈಮಿಂಗ್ ವಿಚಾರದಲ್ಲಿ ಗಲಭೆ ಸೃಷ್ಟಿಸಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಘಟನೆ ಉಡುಪಿಯ ಹಿರಿಯಡಕ ಜಂಕ್ಷನ್ ಬಳಿ ನಡೆದಿದೆ. ಘಟನೆ ಬಗ್ಗೆ ನಾಲ್ವರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟೈಮಿಂಗ್ ವಿಚಾರದಲ್ಲಿ ಬಸ್ ಅನ್ನು ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಿ ಗಲಭೆ ಸೃಷ್ಟಿಸಿದ ಶಶಿಕಾಂತ್ (25) ರಾಜೇಶ್ (35) ಉಮೇಶ್ (54) ಮತ್ತು ಪ್ರಶಾಂತ್ (40) ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿ ಶೀಟರ್ ಕಾಲಿಗೆ ಗುಂಡೇಟು

ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದ ಬಳಿ ನಡೆದಿದೆ. ಮುತ್ತುರಾಜು ಎಂಬಾತನ ಮೇಲೆ ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಹಿಡಿಯಲು ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಆರೋಪಿಯ ಬಲಗಾಲಿಗೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ರೌಡಿಶೀಟರ್ ಅನ್ನು ಮಂಡ್ಯದ ಮಿಮ್ಸ್ […]
ಒಣ ಮೀನು ಎಂದು ದೂರ ಮಾಡಬೇಡಿ..ಒಣ ಮೀನು ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಒಣ ಮೀನುಗಳು ಹೆಚ್ಚಿನ ವಾಸನೆ ಬರುವ ಕಾರಣ ಹೆಚ್ಚಿನ ಜನರು ಅದನ್ನು ತಿನ್ನದೆ ದೂರ ಮಾಡುತ್ತಾರೆ. ಒಣ ಮೀನುಗಳಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಅದು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಒಣ ಮೀನುಗಳಲ್ಲಿ ಪ್ರೋಟೀನ್ಗಳು, ಉತ್ಕರ್ಷಣ ನಿರೋಧಕಗಳು, ಪೊಟ್ಯಾಸಿಯಮ್, ರಂಜಕ, ಸೆಲೆನಿಯಂ, ವಿಟಮಿನ್ ಬಿ 12, ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು ಮತ್ತು ಸೋಡಿಯಂ ಹೆಚ್ಚಿದೆ ಒಣ ಮೀನುಗಳಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಒಣ ಮೀನುಗಳಲ್ಲಿರುವ ಪೋಷಕಾಂಶಗಳಿಂದಾಗಿ, ದೇಹವು ಒಣಗುವುದಿಲ್ಲ. ನರಗಳ ಸಮಸ್ಯೆಗಳನ್ನು ತಡೆಗಟ್ಟಲು ಒಣ […]
ಎಸ್ಎಂ.ಕೃಷ್ಣ ಅಳಿಯ ಸಿದ್ದಾರ್ಥ್ ಸಾವಿಗೆ ಕಾರಣ ಯಾರು? ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ಧಾಳಿ

ಮಾಜಿ ಸಿಎಂ ಎಸ್ಎಂ. ಕೃಷ್ಣ ನಿಮಗೆ ರಾಜಕೀಯ ಜನ್ಮ ಕೊಟ್ಟಿದ್ದರು. ಆದರೆ, ಅವರ ಅಳಿಯ ಸಿದ್ಧಾರ್ಥ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಜನರ ಮುಂದಿಡಿ ಎಂದು ಡಿಕೆ ಶಿವಕುಮಾರ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದು, ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ ಜಟಾಪಟಿ ಮತ್ತೆ ಮುಂದುವರಿದಿದೆ. ಮೈಸೂರು ಚಲೋ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಹಾಗೂ ಡಿಸಿಎಂ ನನ್ನ ಮತ್ತು ಯಡಿಯೂರಪ್ಪ ನಡುವೆ ಬಿರುಕು ಮೂಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ಶ್ರಮಪಟ್ಟು 105 ಸ್ಥಾನವನ್ನು ಪಡೆದಿದ್ದಾಗ ಅಧಿಕಾರ […]
5 ಕೆಜಿ ‘ಆಲೂಗಡ್ಡೆ’ ಲಂಚವಾಗಿ ಬೇಡಿಕೆ ಇಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು

5 ಕೆಜಿ ‘ಆಲೂಗಡ್ಡೆ’ಗೆ ಲಂಚವಾಗಿ ಬೇಡಿಕೆಯಿಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಕನೌಜ್ನಲ್ಲಿ ನಿಯೋಜನೆಗೊಂಡಿದ್ದ ಸಬ್ ಇನ್ಸ್ಪೆಕ್ಟರ್ ನ್ನು ಅಮಾನತುಗೊಳಿಸಲಾಗಿದೆ. ಕೇಸ್ ವೊಂದರ ಇತ್ಯರ್ಥಪಡಿಸಲು ಪೊಲೀಸ್ ಅಧಿಕಾರಿ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಸೌರಿಖ್ ಪೊಲೀಸ್ ಠಾಣೆಯಡಿಯಲ್ಲಿ ಬರುವ ಬಹವಲ್ಪುರ್ ಚಾಪುನ್ನ ಚೌಕಿಯ ಇನ್ಸ್ ಪೆಕ್ಟರ್ ರಾಮ್ ಕೃಪಾಲ್ ಸಿಂಗ್ ಅವರನ್ನು ಅಮಾನತು ಮಾಡಿ ಕನೌಜ್ ಎಸ್ ಪಿ ಅಮಿತ್ ಕುಮಾರ್ ಅದೇಶಿಸಿದ್ದಾರೆ. ಅಲ್ಲದೆ […]
ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆ; ಅತ್ಯಾಚಾರ, ಕೊಲೆ ಆರೋಪಿಸಿದ ಕುಟುಂಬ

-ದೇಶದಾದ್ಯಂತ ಭಾರೀ ಸದ್ದು ಮಾಡಿದ ಪ್ರಕರಣ ಪ.ಬಂಗಾಳದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲಿನ ಲೈಂಗಿನ ಕಿರುಕುಳ, ಹತ್ಯೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ. ಶುಕ್ರವಾರ ಕೋಲ್ಕತ್ತದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಮಹಿಳಾ ಸ್ನಾತಕೋತ್ತರ ವೈದ್ಯ […]