Breaking News :

ಉಡುಪಿ; ಹಾಡಹಗಲೇ ಕಾರಿನಲ್ಲಿ ಅನೈತಿಕ ಚಟುವಟಿಕೆ; ಕಾರು ಅಲುಗಾಟ ಕಂಡು ಹೋದ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಜೋಡಿ

ಉಡುಪಿ ನಗರದಲ್ಲಿ ಹಾಡ ಹಗಲಲ್ಲೇ ಕಾರಿನೊಳಗೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಜೋಡಿಯನ್ನು  ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ಈ ವೇಳೆ ಜೋಡಿ ಪರಾರಿಯಾಗಿದ್ದಾರೆ. ಉಡುಪಿಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು, ಕಾರು ನಿಲುಗಡೆಗೊಳಿಸಿತ್ತು. ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿತ್ತು. ನಿಂತಿದ್ದ ಕಾರನ್ನು  ಅಲುಗಾಟ ಕಂಡು ಸಂಶಯಗೊಂಡ ಸ್ಥಳಿಯರು ಇಣುಕಿ ನೋಡಿದಾಗ ಅನೈತಿಕ ಕೃತ್ಯ ಬೆಳಕಿಗೆ ಬಂದಿದೆ. ಈ ವೇಳೆ ಯುವಕ ಮತ್ತು ಯುವತಿಯ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. […]

2025ರ ಸಾಲಿಗೆ ಹೊಸ ಹಜ್ ನೀತಿ ಬಿಡುಗಡೆ ಮಾಡಿದ ಕೇಂದ್ರ; ಕೋಟಾದಲ್ಲೂ ಇಳಿಕೆ

ಕೇಂದ್ರ ಸರ್ಕಾರವು 2025ರ ಸಾಲಿಗೆ ಹೊಸ ಹಜ್‌ ನೀತಿ ಬಿಡುಗಡೆ ಮಾಡಿದೆ. ಹೊಸ ನೀತಿಯ ಪ್ರಕಾರ ಭಾರತೀಯ ಹಜ್‌ ಸಮಿತಿಯ ಕೋಟಾವನ್ನು ಶೇಕಡಾ 70ಕ್ಕೆ ಇಳಿಸಲಾಗಿದೆ. ಹೊಸ ನೀತಿಯ ಪ್ರಕಾರ, ಭಾರತಕ್ಕೆ ನಿಗದಿಪಡಿಸಲಾದ ಹಜ್‌ ಯಾತ್ರಿಕರ ಒಟ್ಟು ಕೋಟಾದ 70 ಪ್ರತಿಶತವನ್ನು ಭಾರತದ ಹಜ್‌ ಸಮಿತಿ ನಿರ್ವಹಿಸುತ್ತದೆ. ಅದೇ ಸಮಯದಲ್ಲಿ, ಉಳಿದ 30 ಪ್ರತಿಶತ ಕೋಟಾವನ್ನು ಖಾಸಗಿ ಹಜ್‌ ಗುಂಪು ಸಂಘಟಕರಿಗೆ ನೀಡಲಾಗುತ್ತದೆ. ಕಳೆದ ವರ್ಷದ ಹಜ್‌ ನೀತಿಯಲ್ಲಿ ಈ ಕೋಟಾ 80-20 ಆಗಿತ್ತು. ಹಜ್‌ ಯಾತ್ರೆಯನ್ನು […]

BIG NEWS ಒಲಿಂಪಿಕ್ಸ್ ಪೈನಲ್ ನಿಂದ ಅನರ್ಹಗೊಂಡ ವಿನೇಶ್ ಪೋಗಟ್

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ  50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿರುವ ಬಗ್ಗೆ ವರದಿಯಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ  ನಿಗದಿತ ತೂಕಕ್ಕಿಂತ ಅವರು 100 ಗ್ರಾಂ ತೂಕ ಹೆಚ್ಚಿರುವುದು ಪತ್ತೆಯಾಗಿತ್ತು. ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ಒಲಿಂಪಿಕ್ಸ್‌ ನಿಯಮದ ಪ್ರಕಾರ ಫೋಗಟ್‌ ಬೆಳ್ಳಿ ಪದಕಕ್ಕೂ ಅರ್ಹರಾಗುವುದಿಲ್ಲ […]

ಬಂಟ್ವಾಳ; ಕೆಲಸ ಸಿಗದೆ ಮನನೊಂದು ಯುವಕ ಆತ್ಮಹತ್ಯೆ

ಬಂಟ್ವಾಳ; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ವಕೀಲಿಕೆಗೆ ಪದವಿ ಪಡೆದರೂ ಸರಿಯಾದ ಅವಕಾಶ ಸಿಗದೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿರೂರು ಗುಡ್ಡೆ ಕುಸಿತ; ಅರ್ಜುನ್ ಮೃತದೇಹ ಪತ್ತೆ? ಏನಿದು ಬೆಳವಣಿಗೆ?

ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ  ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಹತ್ವದ ಬೆಳವಣಿಗೆ ನಡೆದಿದ್ದು, ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ […]

ಟಿಪ್ಪರ್ ಲಾರಿ ಹರಿದು ಗರ್ಭಿಣಿ ಸಾವು; ಭೀಕರ ಅಪಘಾತಕ್ಕೆ ಗರ್ಭಿಣಿಯ ಹೊಟ್ಟೆಯಿಂದ ಹೊರ ಬಂದ ಮಗು

ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ನಡೆದಿದೆ. ಎಡೇಹಳ್ಳಿ ಗ್ರಾಮದ ಸಿಂಚನ (30) ಮೃತರು. ಸಿಂಚನಾ ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದಾರೆ. ಟಿಪ್ಪರ್ ಹರಿದ ಪರಿಣಾಮ ಅವರ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ಬಾಂಗ್ಲಾ ಬಿಕ್ಕಟ್ಟು; ಮೋದಿ ವಿರುದ್ಧ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ವಾಗ್ಧಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ಕಿಡಿಕಾರಿದ್ದಾರೆ. ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಎಕ್ಸ್‌ನಲ್ಲಿ  ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡೀವ್ಸ್‌ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಸುಮ್ಮನಿದ್ದರು. ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ.. ಮೋದಿಯವರಿಗೆ ರಾಜೀನಾಮೆ ಕೊಡಿ ಎಂದು ಕೇಳಿ […]

ನರ್ಸಿಂಗ್ ಕೋರ್ಸ್ ಪ್ರವೇಶ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ; ಗುಪ್ತಾಂಗದಲ್ಲಿ ಮೊಬೈಲ್ ಇಟ್ಟುಕೊಂಡು ಬಂದು ಸಿಕ್ಕಿ ಬಿದ್ದ ಅಭ್ಯರ್ಥಿಗಳು

ಪರೀಕ್ಷೆ ಕೊಠಡಿಯೊಳಗೆ ಅಭ್ಯರ್ಥಿಗಳು ಗುಪ್ತಾಂಗದಲ್ಲಿ ಮೊಬೈಲ್ ಇಟ್ಟುಕೊಂಡು ಬಂದು ಸಿಕ್ಕಿ ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬೀರ್ಭುಮ್‌ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್‌ನಲ್ಲಿ ಎಎನ್‌ಎಂ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಿದ್ದರು. ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್‌ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ […]

ಸೇತುವೆ ಕುಸಿದು ನದಿಗೆ ಬಿದ್ದ ಲಾರಿ; ಶಿರೂರು ದುರ್ಘಟನೆ ಬೆನ್ನಲ್ಲಿ ಉತ್ತರಕನ್ನಡದಲ್ಲಿ ಮತ್ತೊಂದು ದುರಂತ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಸೇತುವೆ ಮೇಲೆ ತಮಿಳುನಾಡು ಮೂಲದ ಲಾರಿ ಚಲಿಸುವಾಗ ಘಟನೆ ಸಂಭವಿಸಿದ್ದು ಲಾರಿ ಸಮೇತ ಚಾಲಕ ಕಾಳಿ ನದಿಗೆ ಬಿದ್ದಿದ್ದಾನೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ 41 ವರ್ಷಗಳ ಹಳೆ ಸೇತುವೆ ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ […]

ಮಂಗಳೂರು; ಜೋಕಟ್ಟೆಯಲ್ಲಿ ಬಾಲಕಿಯ ಕೊಲೆ ಪ್ರಕರಣ; ಇಬ್ಬರು ವಶಕ್ಕೆ!

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು  ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ ನಡೆದಿದೆ. ಪಣಂಬೂರಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ […]