Breaking News :

ಹಾವು ಕಡಿದು 15 ವರ್ಷದ ಬಾಲಕಿ‌ ಮೃತ್ಯು

ಹಾವು ಕಡಿದು ವಿದ್ಯಾರ್ಥಿನಿ ಸಾವಿಗೀಡಾದ ಘಟನೆ  ಹೂವಿನಹಡಗಲಿ ತಾಲ್ಲೂಕಿನ ಹೊನ್ನನಾಯಕನಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಜಹಿರಾಬೀ ಹಾರೋಗೇರಿ (15) ಮೃತ ವಿದ್ಯಾರ್ಥಿನಿ. ಬಾಲಕಿ ತನ್ನ ತಾಯಿಯೊಂದಿಗೆ ಹೊಲಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಾಲಕಿಯನ್ನು ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಈ ಕುರಿತು ಪಟ್ಟಣ ಠಾಣೆಯಲ್ಲಿ […]

ಇನ್‌ಸ್ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಯಲ್ಲ, ಕೊಲೆ; ಕುಟುಂಬಸ್ಥರ ಆರೋಪ

ಪೊಲೀಸ್ ಇನ್‌ಸ್ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದ್ದು, ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಸೋಮವಾರ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಿಮ್ಮೇಗೌಡ ಅವರು ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ತಮ್ಮ ತೋಟದ ಜಾಗದಲ್ಲಿ ಮರಕ್ಕೆ […]

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ; ಭಾರೀ ಸದ್ದು ಮಾಡಿದ್ದ ಪ್ರಕರಣದ ಅಂತಿಮ ತೀರ್ಪು ಪ್ರಕಟ

ಮಂಗಳೂರು: ದೇಶದ ಎಲ್ಲೆಡೆ ಭಾರೀ ಸುದ್ದಿಯಾಗಿದ್ದ 2012ರ ಜು. 28ರಂದು ನಡೆದಿದ್ದ ಮಂಗಳೂರಿನ ಹೋಂಸ್ಟೇ ದಾಳಿ ಪ್ರಕರಣ ಎಲ್ಲಾ ಆರೋಪಿಗಳು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪುನೀಡಿದೆ. ನ್ಯಾಯಾಧೀಶ ಕಾಂತರಾಜು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದು, ಓರ್ವ ಪತ್ರಕರ್ತ ನವೀನ್ ಸೂರಿಂಜೆ ಮೇಲಿದ್ದ ಪ್ರಕರಣ ನ್ಯಾಯಾಲಯ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ದೋಷ ಮುಕ್ತಗೊಳಿಸಿ […]

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ 21ರ ಯುವತಿ; ಅಪರೂಪದ ಘಟನೆ

21 ವರ್ಷದ ಯುವತಿಯೋರ್ವಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ರಾಜಸ್ಥಾನದ ದೌಸಾ ಜಿಲ್ಲೆಯ ನಿವಾಸಿ ಸಂತೋಷ ದೇವಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ. ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿವೆ. ಸಧ್ಯ ನಾಲ್ಕು ಮಕ್ಕಳನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ವೈದ್ಯೆ ಡಾ.ಆಶಾ ವರ್ಮಾ, ನಮ್ಮ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ […]

ಮುಖ್ಯಮಂತ್ರಿಗಳ ನಿವಾಸದ ಬಳಿ ಮಹಿಳೆಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್​ನಿಂದ ಹೊರಬಂದ ಕೂಡಲೇ ಮಹಿಳೆ ಗೌತಮಪಲ್ಲಿ ಪೊಲೀಸ್ ಠಾಣೆ ಪ್ರದೇಶದ ವಿಕ್ರಮಾದಿತ್ಯ ಮಾರ್ಗದ 19 ಬಿಡಿ ಜಂಕ್ಷನ್ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್​ ಎಂದು ಹೇಳಲಾಗಿದೆ. ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ  ನಂದಿಸಿದ್ದಾರೆ. ಮಹಿಳೆಯನ್ನು ತ್ವರಿತವಾಗಿ […]

ಪುತ್ತೂರು; ಕೆರೆಗೆ ಹಾರಿ ಪಾಪತ್ತಡ್ಕ ನಿವಾಸಿ ಆಟೋ ಚಾಲಕ ಆತ್ಮಹತ್ಯೆ

-ಮೊಹಮ್ಮದ್ ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರು; ಪಾಪತ್ತಡ್ಕ‌ನಿವಾಸಿ ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯದಲ್ಲಿ ನಡೆದಿದೆ. ಪಾಪತ್ತಡ್ಕ ನಿವಾಸಿ ಮೊಹಮ್ಮದ್ ಮೃತರು. ಇವರು ಮೂಲತಃ ಪಾಪತ್ತಡ್ಕದವರಾಗಿದ್ದು, ಸಂಪ್ಯದಲ್ಲಿ ವಾಸಿಸುತ್ತಿದ್ದರು. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಪುತ್ತೂರಿನ ಆಸ್ಪತ್ರೆಯಲ್ಲಿರಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.    

ಭಾರೀ ಮಳೆಗೆ ಆಸ್ಪತ್ರೆಯೊಳಗೆ ನುಗ್ಗಿದ ನೀರು; ರೋಗಿಗಳ ಪರದಾಟ

ಭಾರೀ ಮಳೆಯಿಂದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಭಾರೀ ಮಳೆಯ ಪರಿಣಾಮ ಚರಂಡಿಯಲ್ಲಿ ಹರಿಯಬೇಕಿದ್ದ ನೀರು ಆಸ್ಪತ್ರೆಯ ವಾರ್ಡ್ ಗಳಲ್ಲಿ ಬಂದು ನಿಂತಿದ್ದು, ಸುಮಾರು ಎರಡೂ ಅಡಿಗೂ ಹೆಚ್ಚು ನೀರು ನಿಂತಿದ್ದರಿಂದ ರೋಗಿಗಳು ರಾತ್ರಿ ನಿದ್ದೆ ಮಾಡದೆ ಪರದಾಡುವಂತಾಗಿದೆ. ಈ ಅವ್ಯವಸ್ಥೆಗೆ  ಸರ್ಕಾರಿ ಆಸ್ಪತ್ರೆಯ ಆಡಳಿತದ ವೈಫಲ್ಯವೇ ಇದಕ್ಕೆಲ್ಲ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಶಾಲಾ ಬಸ್ ಹರಿದು ಅಂಗನವಾಡಿಗೆ ತೆರಳುತ್ತಿದ್ದ 5 ವರ್ಷದ ಬಾಲಕ ಮೃತ್ಯು

ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ‌. ಬಸವರಾಜ್(5) ಮೃತ ಬಾಲಕ. ವಿಜಯಪುರ ಜಿಲ್ಲೆಯ ನೀಡಗುಂಡಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಘಟನೆ ನಡೆದಿದೆ‌. ಬಾಲಕ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಚಾಲನೆಗೆ ಬ್ರೇಕ್: ವಾಹನ ಚಾಲಕರಿಗೆ ಬಹುಮುಖ್ಯ ಮಾಹಿತಿ

ಮಂಗಳೂರು: ಮಳೆ ಹಿನ್ನಲೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ವೇಗಕ್ಕೆ ಮಿತಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಆಡಳಿತವು ಜಿಲ್ಲೆಯ ಎನ್‌ಎಚ್-66ನಲ್ಲಿ ಸುರತ್ಕಲ್‌ನಿಂದ ತೊಕ್ಕೊಟ್ಟು ಜಂಕ್ಷನ್‌ವರೆಗೆ ಮತ್ತು ಬಿ.ಸಿ ರೋಡ್ ನಿಂದ ನಂತೂರು ಜಂಕ್ಷನ್ ವರೆಗೆ ಎನ್‌ಎಟಚ್-73 ರಲ್ಲಿ ದ್ವಿಚಕ್ರ, ತ್ರಿಚಕ್ರ ಮತ್ತು ಘನ ವಾಹನಗಳನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 60 ಕಿಮೀ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗಿದೆ ಎಂದು ಭಾರತೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಅನುಷ್ಟಾನ ಘಟಕದ ಯೋಜನಾ […]

ಮಂಗಳೂರಿನಿಂದ ವಯನಾಡಿಗೆ ಟ್ರಕ್ ಗಳಲ್ಲಿ ಪರಿಹಾರ ಸಾಮಾಗ್ರಿಗಳ ರವಾನೆ

ಕೇರಳದ ವಯನಾಡಿನಲ್ಲಿನ ಭೂಕುಸಿತದ ಸಂತ್ರಸ್ತರಿಗೆ ಮಂಗಳೂರಿನ ಬಿ ಹ್ಯೂಮನ್ ಮತ್ತು ಹೋಪ್ ಫೌಂಡೇಶನ್ ಸಂಸ್ಥೆಗಳು ಸಂಗ್ರಹಿಸಿದ ನೆರವು ಸಾಮಾಗ್ರಿಗಳನ್ನು ಕಳುಹಿಸಿಕೊಡಲಾಗಿದೆ. ಆಹಾರ, ಔಷಧಿ, ಬಟ್ಟೆ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಎರಡು ಟ್ರಕ್‌ಗಳಲ್ಲಿ ಮಂಗಳೂರಿನಿಂದ ಸೋಮವಾರ ಕಳುಹಿಸಿಕೊಡಲಾಗಿದೆ. ಟ್ರಕ್‌ಗಳಿಗೆ ತೆರಳಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಹಸಿರು ನಿಶಾನೆ ತೋರಿದ್ದಾರೆ. ಈ ವೇಳೆ ಮಾತನಾಡಿದ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಸಂಕಷ್ಟದಲ್ಲಿರುವ ವಯನಾಡ್ ಜನತೆಗೆ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ತಲುಪಿಸುವ ಕಾರ್ಯ ಕೈಗೊಂಡಿರುವ ಬಿ ಹ್ಯೂಮನ್ ಮತ್ತು ಹೋಪ್ ಸಂಸ್ಥೆಯ […]