Breaking News :

ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು : ಡಾ. ಮಂತರ್ ಗೌಡ

  ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

ತುರ್ತು ನೀರು ಸರಬರಾಜು ವ್ಯವಸ್ಥೆಯನ್ನು ಉದ್ಘಾಟಿಸಿದ ಶಾಸಕ ಪೊನ್ನಣ್ಣ

  ಜನವಾಹಿನಿ News ಪೊನ್ನಂಪೇಟೆ : ಈ ಬಾರಿಯ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕ್ಷೇತ್ರದ ಶಾಸಕರು ತಮ್ಮ 28ಲಕ್ಷ ವೆಚ್ಚದ ವೈಯುಕ್ತಿಕ ಅನುದಾನದಲ್ಲಿ ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುತ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ. ಪೊನ್ನಂಪೇಟೆಯಲ್ಲಿ ಟ್ಯಾಂಕರ್ ವಾಹನವನ್ನು ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ , ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, […]

ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

  ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರ ಏಕಾಏಕಿ ಗೃಹಬಳಕೆ ಮತ್ತು ವಾಣಿಜ್ಯ ಅಡುಗೆ ಅನಿಲ ಬೆಲೆ ಏರಿಕೆ ಮಾಡಿದನ್ನು ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಇಂದಿರಾ ಗಾಂಧಿ ( ಚೌಕಿ) ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ನೂರಾರು ಕಾರ್ಯಕರ್ತರು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರ,ಬಿಜೆಪಿ ಆಡಳಿತ,ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ವಿರುದ್ದ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ […]

ಕೇರಳ ಚುನಾವಣೆ ; 2 ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಪೊನ್ನಣ್ಣ ನೇಮಕ

  ಜನವಾಹಿನಿ News ಮಾನಂದವಾಡಿ : ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.

ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ

ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ‌ 46 ಒಟ್ಟು 85 […]

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಪೊನ್ನಣ್ಣ

  ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ […]

ಸಿದ್ದಾಪುರ ವ್ಯಾಪ್ತಿಯಲ್ಲಿ ಹಲವರನ್ನು ಬಲಿ ಪಡೆದು ಆತಂಕಕ್ಕೆ ಕಾರಣವಾಗಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

  ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರ ಗಣಪತಿ ಎಂಬುವವರನ್ನು ಬಲಿಪಡೆದಿದ್ದ ಸುಮಾರು 35 ವರ್ಷದ ಕಾಡಾನೆಯನ್ನು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಚೆನ್ನೈಯನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದ್ದು, ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಇತ್ತೀಚೆಗೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಬಲಿ ಪಡೆದ ನಂತರ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ […]

ಕಾಡಾನೆ ದಾಳಿಗೆ ಮೃತಪಟ್ಟ ಜಲಜಾಕ್ಷಿ ನಿವಾಸಕ್ಕೆ ಶಾಸಕ ಮಂತರ್ ಗೌಡ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

  ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೆ ಸಂದರ್ಭ ಮೊದಲ ಹಂತದ 5 ಲಕ್ಷ ಮೊತ್ತ ಪರಿಹಾರ ಚೆಕ್‌ ವಿತರಿಸಿದರು. ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಕಾಡಾನೆ ಸೆರೆ ಸೇರಿದಂತೆ ಆನೆ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. […]

ಕೊಡಗಿನಲ್ಲಿ ಏಪ್ರಿಲ್‌ 8 ರಿಂದ ಮೂರು ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ : ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯದುವೀರ್ ಒಡೆಯರ್ ಮನವಿ

  ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸ ತರುವಂತಹ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ […]

ಮಕ್ಕಂದೂರಿನಲ್ಲಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕ ಮಂತರ್ ಗೌಡರವರಿಂದ ಚಾಲನೆ

ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಮಕ್ಕಂದೂರು ಹೆಮ್ಮೆತಾಳ್ ಪರಿಶಿಷ್ಟ ಪಂಗಡದ ಕಾಲೋನಿಗೆ ರೂ.10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಶನಿವಾರ ಚಾಲನೆ ನೀಡಿದರು. ಮಕ್ಕಂದೂರು ಗಾಳೀಬೀಡು ಮಾದಾಪುರ ಶಾಂತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಗಳು ವಿಭಿನ್ನವಾಗಿದ್ದು ಮುಖ್ಯ ರಸ್ತೆಯಿಂದ ದೂರದಲ್ಲಿ ಒಂದೊಂದು ಮನೆಗಳು ಇದ್ದು ರಸ್ತೆ ಮತ್ತು ವಿದ್ಯುತ್ ಸೌಕರ್ಯ ಗಳ ಸಮಸ್ಯೆಗಳನ್ನು ಅತಿಯಾಗಿ ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ಪರಿಹಾರಕ್ಕೆ ವಿಶೇಷ ಕಾಳಜಿವಹಿಸಲಾಗುವುದು ಎಂದು ಮಂತರ್ ಗೌಡ […]