ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]
ಶಾಸಕ ಪೊನ್ನಣ್ಣರಿಂದ ರಸ್ತೆ ದುರಸ್ತಿಗೆ ಭೂಮಿ ಪೂಜೆ

ಜನವಾಹಿನಿ News ಸಿದ್ದಾಪುರ : ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಕರಡಿಗೋಡು ಗ್ರಾಮಕ್ಕೆ ತೆರಳುವ ರಸ್ತೆ ದುರಸ್ತಿ ಕಾರ್ಯಕ್ಕೆ ಭಾನುವಾರ ಶಾಸಕ ಪೊನ್ನಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ಕಳೆದ ಹಲವಾರು ವರ್ಷಗಳಿಂದ ದುರಸ್ತಿ ಕಾಣದಿದ್ದ ಈ ರಸ್ತೆಗೆ ಸುಮಾರು 50 ಲಕ್ಷ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಸೇಕ್ರೆಡ್ ಹಾರ್ಟ್ ಹಾಸ್ಪಿಟಲ್ ಸಮೀಪದಿಂದ ಬಸವೇಶ್ವರ ದೇವಾಲಯದ ವರೆಗಿನ ಸುಮಾರು ಒಂದು ಕಿಲೋ ಮೀಟರ್ ರಸ್ತೆ ದುರಸ್ತಿ ಕಾರ್ಯ ನಡೆಯಲಿದೆ. ಇದರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಡಾಂಬರು […]
ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟನೆ : ಕೊಡ್ಲಿಪೇಟೆಯಲ್ಲಿಯೂ ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಾಣ: ರಾಮಲಿಂಗಾರೆಡ್ಡಿ

ಜನವಾಹಿನಿ News ಮಡಿಕೇರಿ : ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಶನಿವಾರಸಂತೆಯಲ್ಲಿ 105 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಸಚಿವರು ಮಾತನಾಡಿದರು. ಶನಿವಾರಸಂತೆ ಗ್ರಾಮದಲ್ಲಿ ಹುಟ್ಟಿ ಬೆಳೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆಯನ್ನು ಸ್ಮರಿಸಿ […]
ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬನ್ನಿ : ಸವಿತಾ ಸಮಾಜ ಬಾಂಧವರಿಗೆ ಟಿ.ಪಿ.ರಮೇಶ್ ಸಲಹೆ

ಜನವಾಹಿನಿ News ಮಡಿಕೇರಿ : ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ . ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. […]
ಇತಿಹಾಸ ಮರೆತು ಇತಿಹಾಸ ನಿರ್ಮಿಸಲು ಸಾದ್ಯವಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಭಾರತದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ ಘೋಷವಾಕ್ಯ ವನ್ನು ಪುನರುಚ್ಚರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪೂಜಾರಿರ ರಾಮಪ್ಪ ನವರ ಹೆಸರಿನಲ್ಲಿ ಮೇಕೇರಿ ಬಿಳಿಗೇರಿ, ಅರ್ವತ್ತೋಕ್ಲು ಲಿಂಕ್ ರಸ್ತೆಗೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡಗಿನ ಅನೇಕ ಮಹನೀಯರು ತಮ್ಮ ಬದುಕನ್ನು ತ್ಯಾಗ ಮಾಡಿ ಪಾಲ್ಗೊಳ್ಳುವ […]
ವಿವಿಧ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳಿಂದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ

ಜನವಾಹಿನಿ News ಮಡಿಕೇರಿ : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು. ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, […]
ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು

ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ […]
ಪ್ರಧಾನಿ ಅವಹೇಳನ : ಆರೋಪಿಗಳು ಮಡಿಕೇರಿ ಬಿಜೆಪಿ ಮುಖಂಡರ ಚೇಲಾಗಳು ಕೊಡಗು ಕಾಂಗ್ರೆಸ್ ಆರೋಪ

ಜನವಾಹಿನಿ News ಮಡಿಕೇರಿ : ದೇಶದ ಪ್ರಧಾನ ಮಂತ್ರಿಗಳನ್ನು ಅಪಮಾನಿಸಿ ಬಂಧಿತರಾಗಿರುವ ಕಿಡಿಗೇಡಿ ಆರೋಪಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ಬದ್ದ ಹುದ್ದೆಯಲ್ಲಿ ಪರಮ್ಮೋಚ್ಛ ಸ್ಥಾನದಲ್ಲಿರುವ ದೇಶದ ಪ್ರಧಾನ ಮಂತ್ರಿಗಳನ್ನು ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿಗಳು ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದು ಈ ಹಿನ್ನಲೆಯಲ್ಲಿ ಮಡಿಕೇರಿ […]
ಪ್ರಧಾನಿಗೆ ಅವಹೇಳನ ಪ್ರಕರಣ : ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು […]