ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಆರ್.ಪುಷ್ಪಲತಾ ನೇಮಕ

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯೆ ಜಿ.ಆರ್.ಪುಷ್ಪಲತಾ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಂಬಾ ರವರ ನಿರ್ದೇಶನದ ಮೇರೆಗೆ ಕರ್ನಾಟಕ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿಯವರು ನೇಮಕಾತಿ ಆದೇಶ ಜಾರಿಗೊಳಿಸಿದ್ದಾರೆ. ಪುಷ್ಪಲತಾ ರವರು ಈ ಹಿಂದೆ 2017-18 ರಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಈಗ ಎರಡನೇ ಬಾರಿಗೆ ಕೊಡಗು ಮಹಿಳಾ […]
ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ

ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]
ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]
ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ. ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]
ಧರ್ಮಸ್ಥಳ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ ಖಂಡಿಸಿ ಬೃಹತ್ ವಾಹನ ಜಾಥಾ : ಸೋಮವಾರಪೇಟೆಯಿಂದ ನೂರಾರು ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಭಕ್ತರು

ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಸೋಮವಾರಪೇಟೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. ಪಟ್ಟಣದ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಜಾಥಗೆ ಚಾಲನೆ ದೊರೆತು, ಶನಿವಾರಸಂತೆ, ಕೊಡ್ಲಿಪೇಟೆ, ಶುಕ್ರವಾರಸಂತೆ, ದೋಣಿಗಲ್ಲು, ಗುಂಡ್ಯ ರಾಷ್ಟ್ರಿಯ ಹೆದ್ದಾರಿ ಮಾರ್ಗವಾಗಿ ಧರ್ಮಸ್ಥಳ ತಲುಪಿತು. ಸುಮಾರು150 ವಾಹನಗಳಲ್ಲಿ 500ಕ್ಕೂ ಹೆಚ್ಚು ಭಕ್ತರು ವಾಹನ ಜಾಥದಲ್ಲಿ ಪಾಲ್ಗೊಂಡು, ಬಳಿಕ ಧರ್ಮಸ್ಥಳದ ದೇವಾಲಯ ಆವರಣಕ್ಕೆ ಮೆರವಣಿಗೆ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ […]
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ

ಜನವಾಹಿನಿ NEWS : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]
ನಿಲ್ದಾಣಕ್ಕೆ ಡಿಕ್ಕಿ ಹೊಡೆದ KSRTC ಬಸ್- ಮಗು ಸೇರಿ ಐವರು ಸಾವು, 7 ಮಂದಿಗೆ ಗಾಯ

ಜನವಾಹಿನಿ NEWS ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು […]
ಗೌರಿ ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಪಶ್ಚಿಮಘಟ್ಟದ ಗೌರಿ ಹೂ

✒️ ಲಕ್ಷ್ಮೀಕಾಂತ್ ಕೊಮಾರಪ್ಪ ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನೆಲ್ಲೆಡೆ ಗೌರಿ ಗಣೇಶ್ ಹಬ್ಬವು ಸಂಪ್ರದಾಯಿಕವಾಗಿ ಆಚರಿಸಲ್ಪಡುತ್ತಿದೆ. ಗೌರಿ ಹಬ್ಬದಂದು ಗೌರಿ ಹೂ ವೆಂದೆ ಕರೆಯಲ್ಪಡುವ ಗ್ಲೋರಿಯೊಸಾ ಸುಪರ್ಬಾ(ಅಗ್ನಿಶಿಖೆ) ಎಂಬ ಜಾತಿಯ ಹೂವನ್ನು ಪೂಜೆಯಲ್ಲಿ ಇಟ್ಟು ಪ್ರಾರ್ಥಿಸುವುದು ಗ್ರಾಮೀಣ ಭಾಗದ ವಿಶೇಷ.ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮಲೆನಾಡ ಭಾಗದಲ್ಲಿ ಅರಳಿನಿಂತ ಗೌರಿ ಹೂವು ಹಬ್ಬದ ಸಂಭ್ರಮ ಹೆಚ್ಚಿಸುತ್ತಿವೆ. ಗೌರಿ ಹೂವು ಎಂದು ಕರೆಯಲ್ಪಡುವ ಕೆಂಪು ಅರಿಶಿಣ ಬಣ್ಣದ ಹೂವು ಪಶ್ಚಿಮಘಟ್ಟದ ಸಹಜ ಕಾಡಿನಲ್ಲಿ ತನ್ನಿಷ್ಟಕ್ಕೆ ಅರಳುವ ಒಂದು […]