Breaking News :

ಕೊಡಗಿನಲ್ಲಿ ಏಪ್ರಿಲ್‌ 8 ರಿಂದ ಮೂರು ದಿನಗಳ ಕಾಲ ಪಾಸ್‌ಪೋರ್ಟ್‌ ಮೇಳ : ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯದುವೀರ್ ಒಡೆಯರ್ ಮನವಿ

  ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸ ತರುವಂತಹ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ […]

ಮಕ್ಕಂದೂರಿನಲ್ಲಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕ ಮಂತರ್ ಗೌಡರವರಿಂದ ಚಾಲನೆ

ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಮಕ್ಕಂದೂರು ಹೆಮ್ಮೆತಾಳ್ ಪರಿಶಿಷ್ಟ ಪಂಗಡದ ಕಾಲೋನಿಗೆ ರೂ.10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಶನಿವಾರ ಚಾಲನೆ ನೀಡಿದರು. ಮಕ್ಕಂದೂರು ಗಾಳೀಬೀಡು ಮಾದಾಪುರ ಶಾಂತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಗಳು ವಿಭಿನ್ನವಾಗಿದ್ದು ಮುಖ್ಯ ರಸ್ತೆಯಿಂದ ದೂರದಲ್ಲಿ ಒಂದೊಂದು ಮನೆಗಳು ಇದ್ದು ರಸ್ತೆ ಮತ್ತು ವಿದ್ಯುತ್ ಸೌಕರ್ಯ ಗಳ ಸಮಸ್ಯೆಗಳನ್ನು ಅತಿಯಾಗಿ ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ಪರಿಹಾರಕ್ಕೆ ವಿಶೇಷ ಕಾಳಜಿವಹಿಸಲಾಗುವುದು ಎಂದು ಮಂತರ್ ಗೌಡ […]

2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ : ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ  ಸೇರಿದಂತೆ ಮೂವರಿಗೆ ಪ್ರಶಸ್ತಿ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ […]

ಮಂಗಳೂರು-ಮಡಿಕೇರಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ : ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಮೃತ ಪಟ್ಟ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಲು ಆಗ್ರಹ

ಅರಣ್ಯ ಅಧಿಕಾರಿಗಳ ಸಹಿ ಇಲ್ಲದ ಪರಿಹಾರದ ಚೆಕ್ಕ್ ವಿತರಣೆ :ಬೇಜವಾಬ್ದಾರಿ ಪ್ರದರ್ಶಿಸಿದ ಅಧಿಕಾರಿಗಳ ವಿರುದ್ಧ ಜನಾಕ್ರೋಶ ಜನವಾಹಿನಿ News ಮಡಿಕೇರಿ : ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಬೆಟ್ಟತೂರು ಗ್ರಾಮಸ್ಥರು ಮಡಿಕೇರಿ ಮಂಗಳೂರು ಹೆದ್ದಾರಿ ಮದೆ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಅರಣ್ಯ ಅಧಿಕಾರಿಗಳು ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು […]

ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ : ಮಡಿಕೇರಿ ಸಮೀಪದ ಬೆಟ್ಟತ್ತೂರಿನಲ್ಲಿ ಘಟನೆ 

ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಶಾಲಾ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತ ಬಾಲಕಿಯನ್ನು ಮದೆ ಬೆಟ್ಟತ್ತುರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (16) ಎಂದು ಗುರುತಿಸಲಾಗಿದೆ. ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಸಂಜೆ 5:30 ಕ್ಕೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು ಇಳಿದು ಸ್ವಲ್ಪ ದೂರ ನಡೆಯುವಾಗ ಏಕಏಕಿ […]

ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ : ಜಿಲ್ಲೆ ಚಿಕ್ಕದು, ಕೊಡುಗೆ ದೊಡ್ಡದು: ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ ಸರ್ಕಾರ ಅಕಾಡೆಮಿ ಗಳನ್ನು ರಚಿಸಿದೆ. ಇದಕ್ಕೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯರವರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ಸಾಗಿ ನಡೆಸುತ್ತಿದ್ದು, ಸರ್ವ ಸದಸ್ಯರ ಸಹಕಾರ ಎದ್ದು ಕಾಣುತ್ತಿದೆ. ಎಲ್ಲಾರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಯಶಸ್ಸು ಖಂಡಿತಾ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಕರ್ನಾಟಕ ಕೊಡವ […]

ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ – ಜ್ಞಾನಕ್ಕೆ ಮಿತಿ ಇಲ್ಲ : ಶಾಸಕ ಮಂತರ್ ಗೌಡ

  ಜನವಾಹಿನಿ News ಮಡಿಕೇರಿ  : ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ. ಯಾವುದೇ ಸುದ್ದಿಯಾದರೂ ಸಕರಾತ್ಮಕ ವಿಮರ್ಶೆ ನೀಡಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕೊಡಗು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂ ನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು […]

ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು : ಶಾಸಕ ಎ.ಎಸ್.ಪೊನ್ನಣ್ಣ

    ಜನವಾಹಿನಿ News ಮಡಿಕೇರಿ : ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ‘ಈಗ ಕೃತಕ ಬುದ್ಧಿಮತ್ತೆ (ಎಐ) ಬಂದಿದೆಯಾದರೂ, ಅದು ಎಲ್ಲವನ್ನೂ ಮಾಡುತ್ತದೆ ಎಂದು ಹೇಳಲಾಗದು. […]

ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ : ಸಂಸದ ಯದುವೀರ್ ಒಡೆಯರ್ ಖಂಡನೆ – ಕಾನೂನು ಕ್ರಮ ಕೈಗೊಳ್ಳಲು  ಸೂಚನೆ

  ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟಿಯಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮದ ನಿಮಿತ್ತ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದನ್ನು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ರವರು ಖಂಡಿಸಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಘಟನೆಯ ವಿವರವನ್ನು ಪಡೆದಿದ್ದು, ಶನಿವಾರ […]

ಹಿಂದೂ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡನೀಯ : ಎಡಿಕೇರಿ ಪ್ರಸನ್ನ

  ಹಿಂದೂಗಳ ಮೇಲಿನ ದೌರ್ಜನ್ಯವನ್ನು ಸಹಿಸಲಾಗದು ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟ್ಟಿಯಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ನಾಪೋಕ್ಲು ಪಟ್ಟಣದಲ್ಲಿ ಪ್ರಚಾರ ನಡೆಸುವ ವೇಳೆ ಶುಕ್ರವಾರ ಹಿಂದೂ ಕಾರ್ಯಕರ್ತ ಗೌತಮ್ ಎಂಬಾತನ ಮೇಲೆ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಗ ಸಿದ್ದಿಕ್ ಹಾಗೂ ಇತರರು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಯತ್ನ ಮಾಡಿರುವುದು ಖಂಡನೀಯ ಹಾಗೂ ಎಂದಿಗೂ ಇಂತ ಘೋರ ಘಟನೆಯನ್ನು ಸಹಿಸಲಾಗದು ಎಂದು ಉದ್ಯಮಿ ಸಮಾಜ ಸೇವಕ, ಬಲ್ಲಮಾವಟ್ಟಿಯಲ್ಲಿ ಮೂಲದ ಎಡಿಕೇರಿ ಪ್ರಸನ್ನ ಆಕ್ರೋಶ […]