ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಅವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು. ಮಾನ್ಯ ಮುಖ್ಯಮಂತ್ರಿಗಳಲ್ಲಿ ಅವರುಗಳ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಅವರ ಸಮಸ್ಯೆಗಳನ್ನು […]
ಸಿದ್ದಾಪುರ : ಆಟೋ ಮೇಲೆ ಕಾಡಾನೆ ದಾಳಿ : ಪ್ರಯಾಣಿಕನಿಗೆ ಗಾಯ : ತಪ್ಪಿದ ಭಾರಿ ಅನಾಹುತ

*ಜನವಾಹಿನಿ ಬ್ರೇಕಿಂಗ್* ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ *ನೆನ್ನೆಯಷ್ಟೇ ಬೈಕ್ ಸವಾರನ ಮೇಲೆ ದಾಳಿ ಮಾಡಿದ ಪ್ರಕರಣ ವರದಿಯಾಗಿತು.* *ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆಟೋ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ* *ಇಂಜಲಗೆರೆ ಮುತ್ತಪ್ಪ ದೇವಾಲಯದ ಸಮೀಪ ನಡೆದ ಘಟನೆ.* *ಆಟೋದಲ್ಲಿದ್ದ ಪ್ರಯಾಣಿಕ ಪುಲಿಯೇರಿ ಗ್ರಾಮದ ಪ್ರದೀಪ್ ಎಂಬುವವರ ತೊಡೆಯ ಭಾಗಕ್ಕೆ ಗಾಯ* *ಇಂಜಲಗೆರೆ ಫಿರೋಜ್ ಎಂಬುವವರಿಗೆ ಸೇರಿದ ಆಟೋದ ಮೇಲೆ ಎರಗಿದ ಕಾಡಾನೆ* *ಆಟೋದ ಮೇಲೆ ದಂತದಿಂದ ತಿವಿದ ಪರಿಣಾಮ ಆಟೋ ಎಡಭಾಗ […]
ಅಖಂಡ ಭಾರತ ಸಂಕಲ್ಪ : ಮಡಿಕೇರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಅಖಂಡ ಭಾರತ ಸಂಕಲ್ಪ : ಮಡಿಕೇರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ ಮಡಿಕೇರಿ : ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆಯ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಅಖಂಡ ಭಾರತದ ಸಂಕಲ್ಪ ತೊಟ್ಟರು. ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆರಂಭಗೊಂಡ ಪಂಜಿನ ಮೆರವಣಿಗೆ […]
ಅಂತರಾಜ್ಯ ಅಪರಾಧಿಯ ಬಂಧನ

ಅಂತರಾಜ್ಯ ಅಪರಾಧಿಯ ಬಂಧನ ಪುತ್ತೂರು: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. ಎಂಬಾತನನ್ನು ಬಂಧಿಸಿದ ಪೊಲೀಸ್ ತಂಡವು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನು ಎನ್ನಲಾಗಿದೆ. ಇಲಿಯಾಸ್ ಪಿ.ಎ. ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ […]
ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು

ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಶಾಸಕ ಪೊನ್ನಣ್ಣ ಸ್ವಾಗತಿಸಿದರು ಬೆಂಗಳೂರು : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕರದ ರಾಹುಲ್ ಗಾಂಧಿಯವರನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಬರಮಾಡಿಕೊಂಡರು.
ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ ಮಡಿಕೇರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥ ನಡೆಸಿತು. ವೇದಿಕೆಯ ಸಂಚಾಲಕ ಅಗೋಳಿಕಜೆ ಧನಂಜಯ ಜಾಥಾದ […]
ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ

ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ – ಪ್ರತಿಭಟನೆ : ಅಪ್ಪಚ್ಚು ರಂಜನ್ ಎಚ್ಚರಿಕೆ ಮಡಿಕೇರಿ : ಜನ ವಿರೋಧದ ನಡುವೆ ರಾಜಾಸೀಟ್ ಉದ್ಯಾನವನದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ, ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಅಪ್ಪಚ್ಚುರಂಜನ್ ಎಚ್ಚರಿಸಿದ್ದಾರೆ. ರಾಜಾಸೀಟ್ ಉದ್ಯಾನವನ ಜನಸಂದಣಿ ಹೆಚ್ಚಿರುವ ಪ್ರದೇಶ. ಈಗಾಗಲೇ ವಾಹನ ನಿಲುಗಡೆಗೆ ಸ್ಥಳವಿಲ್ಲದೆ ಸಮಸ್ಯೆ ಉದ್ಬವವಾಗಿದೆ. ಇಂತಹ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸದೇ ಜನರಿಗೆ ಸಮಸ್ಯೆಯಾಗಬಲ್ಲ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು […]
ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]
ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿ ಸಭೆ – ಮಂತರ್ ಗೌಡ ಭಾಗಿ

ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿ ಸಭೆ – ಮಂತರ್ ಗೌಡ ಭಾಗಿ ಮಡಿಕೇರಿ : ಕೊಡಗು ಮಾನವ – ವನ್ಯಪ್ರಾಣಿ ಸಂಘರ್ಷ (kodagu Man – Animal conflict mitigation foundation) ಪ್ರತಿಷ್ಠಾನ ನಿಧಿಯ ಆಡಳಿತ ಮಂಡಳಿಯ ಉಪ ಶಮನ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕೊಡಗು ಮಾನವ – ವನ್ಯ ಪ್ರಾಣಿ ಸಂಘರ್ಷ ಉಪ ಶಮನ […]
ದಶಕಗಳಿಂದ ಈ ಗ್ರಾಮಕ್ಕಿಲ್ಲ ಸುಸಜ್ಜಿತ ರಸ್ತೆ : ಜನಪ್ರತಿನಿಧಿಗಳು ಬದಲಾದರೂ ಬದಲಾಗದ ಪರಿಸ್ಥಿತಿ..!

ದಶಕಗಳಿಂದ ಬಗೆ ಹರಿಯದ ರಸ್ತೆ ಸಮಸ್ಯೆ : ಕಾಡು ಪ್ರಾಣಿಗಳ ಹಾವಳಿ ನಡುವೆ ದಿನ ಕಳೆಯುತ್ತಿರುವ ಗ್ರಾಮಸ್ಥರು..! ಸಿದ್ದಾಪುರ : ನೆಲ್ಯಾಹುದಿಕೇರಿ ವ್ಯಾಪ್ತಿಯ ನಲುವತ್ತೆಕ್ರೆ ಗ್ರಾಮದ 2ನೇ ವಾರ್ಡಿಗೆ ಸೇರಿದ ಕೊಂಗೇರಿ ಬೊಪ್ಪಯ್ಯನವರ ತೋಟದ ಹತ್ತಿರವಿರುವ ಪುಟ್ಟ ಗ್ರಾಮದಲ್ಲಿರುವ ಸುಮಾರು 14ಕ್ಕೂ ಅಧಿಕ ಮನೆಗಳಿದ್ದು, ಇಲ್ಲಿಗೆ ತೆರಳುವ ಕಿರುದಾರಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದೆ. ಇದರಿಂದಾಗಿ ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಜನ ಅತ್ತಿತ್ತ ನಡೆದಾಡಲು ಕೂಡ ಅಸಾಧ್ಯವಾದ ರೀತಿಯಲ್ಲಿದೆ. ಸುಮಾರು […]