ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]
ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ ಕುಶಾಲನಗರ : ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಮೃತರಾದರು. ಕಾರಿನಲ್ಲಿದ್ದ ಮತ್ತೋರ್ವ ಅರುಣ ಹಾಗೂ ರವಿ ಎಂಬವರಿಗೆ ಗಾಯಗಳಾಗಿದೆ.
ಕರ್ನಾಟಕ ಕಬಡ್ಡಿ ತಂಡದ ನಾಯಕನಾಗಿ ಸಚಿನ್ ಪೂವಯ್ಯ ಆಯ್ಕೆ

ಕರ್ನಾಟಕ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿರುವ ಕೊಡಗಿನ ಸಚಿನ್ ಮಡಿಕೇರಿ : ಜುಲೈ 25 ರಿಂದ ಪಂಜಾಬಿನ ಚಂಡೀಗಡದ ಪಂಚಕುಲದಲ್ಲಿ ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆ ವತಿಯಿಂದ ನಡೆಯಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಕೊಡಗಿನ ಸಚಿನ್ ಪೂವಯ್ಯ, ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಕರ್ನಾಟಕ ತಂಡದ ಮ್ಯಾನೇಜ್ಮೆಂಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಆಟಗಾರರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನಲ್ಲಿರುವ ತಮ್ಮ […]
ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ

ಶಾಸಕ ಪೊನ್ನಣ್ಣರವರನ್ನು ಮಂತ್ರಿ ಮಾಡಬೇಕೆಂದು ಕೊಡಗು ಅರೆಭಾಷೆ ಗೌಡ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿಗೆ ಮನವಿ ಮಡಿಕೇರಿ : ಅರೆಭಾಷೆ ಗೌಡ ಸಮುದಾಯದ ಹಲವು ಬೇಡಿಕೆಗಳನ್ನೊಳಗೊಂಡ ಮನವಿಯೊಂದಿಗೆ, ಸಮಾಜದ ಪ್ರಮುಖರು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು, ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭ ಪ್ರಮುಖ ಬೇಡಿಕೆಯಾಗಿ ಮಾನ್ಯ ಪೊನ್ನಣ್ಣ ರವರನ್ನು ಮುಂದಿನ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಪ್ರಮುಖ ಖಾತೆಯೊಂದಿಗೆ ಸಂಪುಟ ದರ್ಜೆ ಸಚಿವ ಸ್ಥಾನ […]
ಕೊಡಗು ಗೌಡ ಸಮಾಜದ ಮುಖಂಡರಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಅಭಿನಂದನೆ

ಕೊಡಗು ಗೌಡ ಸಮಾಜದ ಮುಖಂಡರಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಅಭಿನಂದನೆ ಮಡಿಕೇರಿ : ಕೊಡಗು ಗೌಡ ಸಮಾಜದ ಮುಖಂಡರಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಇತ್ತೀಚೆಗೆ ಭಾಗಮಂಡಲ ಗೌಡ ಸಮಾಜದ ನಿಯೋಗವು ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ನೀಡಿದ ಮನವಿಗೆ ಸ್ಪಂದಿಸಿ, ಸಮುದಾಯ ಭವನ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು ಮಾಡುವ ಭರವಸೆ ನೀಡಿದ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಕಚೇರಿಗೆ ಭೇಟಿ ನೀಡಿದ ಕೊಡಗು ಗೌಡ ಸಮಾಜದ […]
ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ

ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ ಮಡಿಕೇರಿ :* ಪ್ರತಿ ವರ್ಷದಂತೆ ಈ ಬಾರಿಯೂ ಆ.15 ರಂದು ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಳೆದ ಬಾರಿಯಂತೆ ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತ್ತು ಉಪಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಆಯಾಯ ಉಪ ಸಮಿತಿಗಳು ತಮ್ಮ […]
ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು ಮಡಿಕೇರಿ : ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಸರ ಕದ್ದೊಯ್ದಿರುವ ಘಟನೆ ಕೊಂಡಗೇರಿಯಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿದೆ. ಕೊಂಡಂಗೇರಿಯ ಸಾರಮ್ಮ ಎಂಬುವವರೇ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಏನಿದು ಪ್ರಕರಣ :: ಸಾರಮ್ಮ ತನ್ನ ಸೊಸೆಯೊಂದಿಗೆ ಮನೆಯಲ್ಲಿದ್ದು, ʼನಾನು ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದೇನೆ. ಕುಡಿಯೋಕೆ ನೀರು ಕೊಡಿʼ ಅಂತ ವ್ಯಕ್ತಿಯೊಬ್ಬ […]
ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು

ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು… ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಭಗಂಡೇಶ್ವರ ದೇವಾಲಯದ ಆವರಣವನ್ನು ಶುಚಿಗೊಳಿಸಲಾಯಿತು. ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ದೇವಾಲಯದ ಆವರಣದಲ್ಲಿ ಹಾವಸೆ(ಪಾಚಿ) ನಿರ್ಮಾಣವಾಗಿತ್ತು. ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುವಾಗ ಜಾರುವ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಇಲ್ಲಿನ ಅರ್ಚಕರು ಇತ್ತೀಚೆಗೆ ಯುವಕ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಯುವಕ ಸಂಘದ ಸದಸ್ಯರು […]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.