Breaking News :

ವಿರಾಜಪೇಟೆ : ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ

ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ ಮಡಿಕೇರಿ  : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 8 ಮಂದಿ ನೋಂದಣಿಯಾದ ವೆಲ್ಡಿಂಗ್ ಕಾರ್ಮಿಕರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವೆಲ್ಡಿಂಗ್ ಕಿಟ್‍ಗಳನ್ನು ವಿತರಿಸಿದರು. ವಿರಾಜಪೇಟೆಯ ಪಂಜರಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಕಿಟ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ಸೋಮವಾರಪೇಟೆ ಹಾಗೂ ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಎಸ್.ಶಶಿಧರ್, ಮಡಿಕೇರಿ ವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ. ಯತ್ನಟ್ಟಿ, ವಿರಾಜಪೇಟೆ ಹಾಗೂ ಮಡಿಕೇರಿ ಹಿರಿಯ […]

ಕೊಡಗು : ಟಿಂಬರ್ ಸಾಗಾಟ, ಸರಕು ಲಾರಿಗಳ ಓಡಾಟ ಅನುಮತಿಗೆ ಆಗ್ರಹಿಸಿ DC ಕಚೇರಿ ಚಲೋ ಪ್ರತಿಭಟನೆ

  ಕೊಡಗು : ಕೊಡಗಿನಲ್ಲಿ ಟಿಂಬರ್ ಸಾಗಾಟ, ಸರಕು ಲಾರಿಗಳ ಓಡಾಟಕ್ಕೆ ಅನುಮತಿ ನೀಡಲು ಆಗ್ರಹಿಸಿ ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಟಿಂಬರ್ ಮರ್ಚೆಂಟ್ ಮತ್ತು ಕಾರ್ಮಿಕರ ಸಂಘದ ವತಿಯಿಂದ DC ಕಚೇರಿ ಚಲೋ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿಮೈದಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ಸಂದರ್ಭ ಮಾತನಾಡಿದ ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಮಹಮ್ಮದ್ […]

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ 

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ  ಕೊಡಗು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದ್ದು, ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ […]

ಕಾರ್ಮಿಕರ ಮೇಲೆ ಕಾಡಾನೆ ದಾಳಿ : ಓರ್ವ ಗಂಭೀರ ಮತ್ತೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಓರ್ವ ಗಂಭೀರ ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ ಬೆಳ್ಳಂ ಬೆಳಗ್ಗೆ ಕಾರ್ಮಿಕನ ಮೇಲೆ ಕಾಡಾನೆ ಅಟ್ಯಾಕ್ ಸಿದ್ದಾಪುರ ಬಳಿಯ ಇವಾಲ್ವ್ ಬ್ಯಾಕ್ ರೆಸಾರ್ಟ್ ಮಾಲೀಕತ್ವದ ಶಿಲ್ಪಿ ಎಸ್ಟೇಟ್ ನಲ್ಲಿ ನಡೆದ ಘಟನೆ ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಮುಂದಾದ ಕಾಡಾನೆ. ಕಾರ್ಮಿಕನೋರ್ವನ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು , ಮತ್ತೋರ್ವನಿಗೆ ಕಾಲಿಗೆ ಪೆಟ್ಟಾಗಿದೆ. ಮೂಲತಃ ಬಾಗಲಕೋಟೆ ನಿವಾಸಿ […]

ಜು.19 ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ

ಜು.19 ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಮಡಿಕೇರಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ, 19 ರಂದು ಸಂಜೆ 4 ಗಂಟೆಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.

95 ಲಕ್ಷಕ್ಕೂ ಅಧಿಕ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ

ಕಳೆದ ಎರಡುವರೆ ವರ್ಷದಲ್ಲಿ 95 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ಮಡಿಕೇರಿ : 2023 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ: 43,69,507, 2024 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ :45,72,790, 2025 ನೇ ಸಾಲಿನ ಜೂನ್ ಅಂತ್ಯಕ್ಕೆ 10.50 ಲಕ್ಷ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ರಡಿ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟ […]

ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ

ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ ಮಡಿಕೇರಿ : ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜುಲೈ, 18 ರಂದು ಬೆಳಗ್ಗೆ 9.30 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಗೃಹ ಆರೊಗ್ಯ’ ಯೋಜನೆಯ ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಪಾಲಿಬೆಟ್ಟ : ಕಾನೂನು ಅರಿವು ಕಾರ್ಯಕ್ರಮ

ಕಾನೂನು ಅರಿವು ಕಾರ್ಯಕ್ರಮ ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಪಾಲಿಬೆಟ್ಟ ಇಲ್ಲಿ ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಕುರಿತ ಕಾರ್ಯಕ್ರಮ ನಡೆಯಿತು. ಪಾಲಿಬೆಟ್ಟದ ಆರಕ್ಷಕ ಉಪನಿರೀಕ್ಷಕರಾದ ಎಚ್.ಕೆ.ಮಂಜುನಾಥ್ ಅವರು ಪೋಕ್ಸೋ ಕಾಯಿದೆ, 112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮಗಳು, ಮೊಬೈಲ್ ಬಳಕೆಯ ರೀತಿ, ಸೈಬರ್ ಅಪರಾಧ, ಬಾಲ ಅಪರಾಧಗಳು, ಗುಡ್ […]

ಹಾರಂಗಿ ನೀರಿನ ಸಮರ್ಪಕ ನಿರ್ವಹಣೆಗೆ ಸೂಚನೆ

ಕೊಡಗು : ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು. ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು […]

ಜು.24 ರಂದು ಭಗಂಡೇಶ್ವರ ದೇವಾಲಯದಲ್ಲಿ ಪೊಲಿಂಕಾನ ಉತ್ಸವ

ಜು.24 ರಂದು ಭಗಂಡೇಶ್ವರ ದೇವಾಲಯದಲ್ಲಿ ಪೊಲಿಂಕಾನ ಉತ್ಸವ ಕೊಡಗು : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ವಿಶ್ವಾವಸು ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಪಾಢ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಜುಲೈ, 24 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೊಲಿಂಕಾನ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊಲಿಂಕಾನ ಉತ್ಸವ ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ […]