Breaking News :

ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ 

  ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]

ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ 

  ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ  ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]

ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಕುರಿತು ಸಿಎಂ ಗಮನ ಸೆಳೆದ ಶಾಸಕ ಪೊನ್ನಣ್ಣ

  ಜನವಾಹಿನಿ NEWS ಮಡಿಕೇರಿ : ಸದನದಲ್ಲಿ ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಇದರ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯಾಗುವಂತೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ   ಬಳಿಕ , ಮಾನ್ಯ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ವಿಷಯಗಳ ಕುರಿತಾಗಿ ಸವಿವರವಾದ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು.

ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ  ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ 

    ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ  ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಮಡಿಕೇರಿ : ಈಶ ಫೌಂಡೇಶನ್ ವತಿಯಿಂದ 17ನೇ ಆವೃತ್ತಿಯ ಈಶ ಗ್ರಾಮೋತ್ಸವ ಅಂಗವಾಗಿ ರೂರಲ್ ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಈಶ ಫೌಂಡೇಶನ್‌ನ ಸ್ವಯಂ ಸೇವಕ ಎಂ.ಎನ್.ಅಖಿಲ್, ಆ.24ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೊದಲ ಹಂತದಲ್ಲಿ(ಕ್ಲಸ್ಟರ್ ವಿಭಾಗ) ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿದೆ. […]

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. 

    ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]

ಅವರೇಗುಂದದಲ್ಲಿ ಬೃಹತ್ ಹೆಬ್ಬಾವು ರಕ್ಷಣೆ

ಅವರೇಗುಂದದಲ್ಲಿ ಬೃಹತ್ ಹೆಬ್ಬಾವು ರಕ್ಷಣೆ ಸಿದ್ದಾಪುರ : ಮಾಲ್ದಾರೆ ವ್ಯಾಪ್ತಿಯ ಅವರೇಗುಂದ ಗ್ರಾಮದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸುರೇಶ್ ಪೂಜಾರಿ ಹಾಗೂ ಆರ್ ಆರ್ ಟಿ ಸಿಬ್ಬಂದಿ ಶಶಿ ಯಶಸ್ವಿಯಾಗಿದ್ದಾರೆ. ಗ್ರಾಮದ ಸಮುದಾಯ ಭವನ ಪಕ್ಕದ ಅಂಗನವಾಡಿ ಬಳಿ ಬೃಹತ್ ಗಾತ್ರದ ಹೆಬ್ಬಾವುವೊಂದು ಕಾಣಿಸಿಕೊಂಡಿದೆ. ಹೆಬ್ಬಾವನ್ನು ಪ್ರತಕ್ಷವಾಗಿ ಕಂಡ ಗ್ರಾಮಸ್ಥ ಸಂಪತ್ ಕುಮಾರ್ ತಕ್ಷಣವೇ ಪಂಚಾಯಿತಿ ಸದಸ್ಯ ಮಹೇಶ್ ಕುಮಾರ್ ರವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. […]

ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ

    ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆಯಲು ದೇಶವು ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ೭೯ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯು ನಮ್ಮನ್ನು ಹೇಗೆ […]

ಧರ್ಮಸ್ಥಳದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ಕಾನೂನು ಪ್ರಕೃಯೆ ಸಚಿವ ಬೋಸ್ ರಾಜ್ ಸ್ಪಷ್ಟನೆ

  ಧರ್ಮಸ್ಥಳದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ಕಾನೂನು ಪ್ರಕೃಯೆ ಸಚಿವ ಬೋಸ್ ರಾಜ್ ಸ್ಪಷ್ಟನೆ ಮಡಿಕೇರಿ : ಧರ್ಮಸ್ಥಳ ಗ್ರಾಮದಲ್ಲಿ ಎಸ್.ಐ.ಟಿ. ತಂಡ ಅಸ್ಥಿಪಂಜರ ಪತ್ತೆ ಕಾರ್ಯನಡೆಸುತ್ತಿರುವುದು ಸಂಪೂರ್ಣವಾಗಿ ಕಾನೂನಿನ ಪ್ರಕೃಯೆ ಆಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಬೋಸ್ ರಾಜುರವರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜರುಗಿದ 79 ನೇ ಸ್ವಾತಂತ್ರ್ಯ ಉತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿ ರಾಜಕಾರಣವನ್ನು ಖಂಡಿಸಿದ್ದಾರೆ. ವ್ಯಕ್ತಿಯೊಬ್ಬ ಧರ್ಮಸ್ಥಳದ ಹಲವು ಬಾಗಗಳಲ್ಲಿ ಅಪರಿಚಿತ ಶವಗಳನ್ನು ಹೂತುಹಾಕಿದ್ದು […]

ರೇಣುಕಾಸ್ವಾಮಿ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟಿನಿಂದ ಮಹತ್ವದ ತೀರ್ಪು – ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಮಂದಿಯ ಜಾಮೀನು ರದ್ದು : ಮತ್ತೆ ಜೈಲು ಸೇರಲಿರುವ ಆರೋಪಿಗಳು ಬೆಂಗಳೂರು : ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು […]

ಅಲ್ಪಸಂಖ್ಯಾತ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಮಡಿಕೇರಿ : 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ […]