ಬೆಂಗಳೂರು: ಅಝಾನ್ ವೇಳೆ ಭಾಷಣ ನಿಲ್ಲಿಸಿ ಗೌರವ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಆಜಾನ್ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತು ಗೌರವವನ್ನು ಸೂಚಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ಆಜಾನ್ ಶುರುವಾಗಿದೆ.ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಶಿವಾಜಿನಗರದ ಬ್ರಾಡ್ […]
ಉಡುಪಿ: ತಾಯಿ ಮಕ್ಕಳ ಕೊಲೆ ಪ್ರಕರಣ, ಆರೋಪಿಯ ವಿಚಾರಣೆಗಿದ್ದ ತಡೆಯಾಜ್ಞೆ ತೆರವು

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದಲ್ಲದೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸಲು ಅನುಮತಿ ನೀಡಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು […]
ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, […]
ಮಂಡ್ಯ; ಅಪ್ರಾಪ್ತ ಬಾಲಕರಿಂದ ಕಿರುಕುಳ: ಬಾಲಕಿ ಆತ್ಮಹತ್ಯೆ

ಮಂಡ್ಯ: ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ 15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ. ಇದಲ್ಲದೆ ಆಡಿಯೊವನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ […]
ಸಿಎಂ ಕೈ ಸೇರಿದ ಬಿಜೆಪಿ ಅವಧಿಯ ಕೋವಿಡ್ ಹಗರಣದ ವರದಿ; ಮುಡಾ ಹಗರಣದ ಆರೋಪದ ಮಧ್ಯೆ ಮಹತ್ವ ಪಡೆದುಕೊಂಡ ಬೆಳವಣಿಗೆ

ಬಿಜೆಪಿ ಸರ್ಕಾರದ ಸವಧಿಯಲ್ಲಿ ನಡೆದ ಕೋವಿಡ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಸ್ಟಿನ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ವರದಿಯನ್ನು ಸಲ್ಲಿಕೆ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಭಾರೀ ಸದ್ದು ಮಾಡಿತ್ತು. ವೆಂಟಿಲೇಟರ್, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ […]
ಪ್ರವಾದಿಯ ನಿಂದನೆ: ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರವಾದಿ ಮಹಮ್ಮದ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ವಿರುದ್ಧ ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಜಿಲ್ಲಾಡಳಿತಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಸ್ವಾಮೀಜಿಯನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿದ್ದು, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಬಂಧಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಈ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಸ್ವಾಮೀಜಿ ಆಗಸ್ಟ್ 15.ರಂದು ಮಹಾರಾಷ್ಟ್ರದ ನಾಸಿಕ […]
ಸಭೆಯಲ್ಲಿ ಕೈಕೊಟ್ಟ ಕರೆಂಟ್, ಇಂಧನ ಸಚಿವರು ಗರಂ, ಕಣ್ಣೀರಿಟ್ಟ ಅಧಿಕಾರಿ

ವಿದ್ಯುತ್ ಸಮಸ್ಯೆ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸುವಾಗಲೇ ಪದೇಪದೇ ವಿದ್ಯುತ್ ಕೈಕೊಟ್ಟು ಮುಜುಗರ ಅನುಭವಿಸಿದ ಬಗ್ಗೆ ವರದಿಯಾಗಿದೆ. ಪದೇ ಪದೇ ವಿದ್ಯುತ್ ಸ್ಥಗಿತಗೊಂಡಾಗ ‘ಏಕೆ ಪವರ್ ಕಟ್ ಮಾಡುತ್ತೀರಿ’ ಎಂದು ಸಿಬ್ಬಂದಿಯನ್ನು ಸಿಟ್ಟಿನಿಂದ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ಸಚಿವರು ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶುಭಾ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಂದಾಗ ಈ ರೀತಿ ಆಗಬಾರದು ಎಂದು ಎಚ್ಚರಿಕೆಯನ್ನು […]
ಮುಡಾ ಹಗರಣ: ರಾಜ್ಯಪಾಲರಿಂದ ಅಚ್ಚರಿಯ ಹೇಳಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜಭವನದ ಚಲೋ ನಡೆಸಿದ್ದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಲರು ಅಚ್ಚರಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜಭವನ ಚಲೋ ಪ್ರತಿಭಟನೆ ಬಳಿಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ದಾಖಲಾಗಿರುವ […]
ಜೈಲು ಶಿಕ್ಷೆ ಭಯದಿಂದ ನ್ಯಾಯಾಲಯದಲ್ಲೇ ವಿಷ ಸೇವನೆ; ಆರೋಪಿ ಆಸ್ಪತ್ರೆಗೆ ದಾಖಲು

ದಾವಣಗೆರೆ: ಜೈಲು ಶಿಕ್ಷೆಯ ಭಯದಿಂದ ನ್ಯಾಯಾಲಯ ದಲ್ಲಿಯೇ ವಿಷ ಸೇವಿಸಿ ಆರೋಪಿಯೊಬ್ಬ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿನ ಆರೋಪಿ ಫಜಲ್ ಅಲಿ (38) ಶನಿವಾರ) ದಾವಣಗೆರೆ ಜಿಲ್ಲೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್ಸಿ ಕೋರ್ಟ್ಗೆ ಹಾಜರಾಗಿದ್ದ. ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲಿಯೇ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆರೋಪಿಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಪಿ ಫಜಲ್ ಅಲಿ ಹಾಗೂ ಆತನ ಪತ್ನಿ ವಿಚ್ಚೇಧನ ಪಡೆದಿದ್ದರು. ಬಳಿಕ ಕೋರ್ಟ್ ಆದೇಶದಂತೆ ಪತ್ನಿಗೆ […]
ಭಾರೀ ಸದ್ದು ಮಾಡಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಎಷ್ಟು ವೆಚ್ಚವಾಗಿದೆ ಗೊತ್ತಾ?

ದರ್ಶನ್ ಗ್ಯಾಂಗ್ ನ್ನು ಜೈಲಿಗಟ್ಟಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಎಷ್ಟು ವೆಚ್ಚವಾಗಿದೆ ಎಂಬುವುದು ಎಲ್ಲರ ಕುತೂಹಲವಾಗಿದೆ. ಎಸಿಪಿ ಚಂದನ್ ನೇತೃತ್ವದ ತಂಡ ಕೊಲೆ ಪ್ರಕರಣದಲ್ಲಿ ದರ್ಶನ್ ಗೆ ಬಂಧಿಸಿತ್ತು. ಆ ಬಳಿಕ ಕೊಲೆಗೆ ಸಂಬಂಧಿಸಿ ಮಹತ್ವದ ಸಾಕ್ಷಿಯನ್ನು ಸಂಗ್ರಹಿಸಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾ ವೆಚ್ಚ ಈವರೆಗೆ 5 ಲಕ್ಷ ಎನ್ನಲಾಗಿದೆ. ಪ್ರಕರಣದ ತನಿಖೆಗೆ ಈವರೆಗೆ ಖಾಕಿ ಪಡೆ 5 ಲಕ್ಷ ವೆಚ್ಚ ಮಾಡಿದೆ ಎನ್ನಲಾಗಿದೆ. ಅದರಲ್ಲಿಯೂ ಎಲೆಕ್ಟ್ರಾನಿಕ್ ಡಿವೈಸ್ ಗಳ ಖರೀದಿಗೆ ಹೆಚ್ಚು ವೆಚ್ಚವಾಗಿರುವುದಾಗಿ […]