ಕಾಂಗ್ರೆಸ್ ಸಚಿವನ ಪುತ್ರ & ಬಿಜೆಪಿ ಶಾಸಕನ ಪುತ್ರಿ ನಿಶ್ಚಿತಾರ್ಥ

ಸಚಿವ ಬೈರತಿ ಸುರೇಶ್ ಪುತ್ರ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿಯ ವಿವಾಹ ನಿಶ್ಚಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ. ರಾಜ್ಯದ ನಗರಾಭಿವೃದ್ಧಿ ಸಚಿವರಾಗಿರುವ ಬೈರತಿ ಸುರೇಶ್ ಮಗ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಮಗಳು ಮುಂದಿನ ವರ್ಷ ವಿವಾಹವಾಗಲಿದ್ದಾರೆ. ಇಂದು ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಇದು ಲವ್ ಕಮ್ ಆರೆಂಜ್ ಮ್ಯಾರೇಜ್ ಎಂದು ತಿಳಿದುಬಂದಿದೆ. ಬುಧವಾರ ಖಾಸಗಿ ಹೋಟೆಲ್ನಲ್ಲಿ ವಿಶ್ವನಾಥ್ ಪುತ್ರಿ ಅಪೂರ್ವ ಹಾಗೂ ಬೈರತಿ ಸುರೇಶ್ ಪುತ್ರ ಸಂಜಯ್ […]
ಪತ್ನಿಯನ್ನು ಕೊಲೆಗೈದು ಪೊಲೀಸರ ಮುಂದೆ ಅಮಾಯಕನಂತೆ ನಾಟಕವಾಡಿದ್ದ ಪತಿ ಅರೆಸ್ಟ್

ಪತ್ನಿಯನ್ನು ತಾನೇ ಕೊಲೆಗೈದು ಪೊಲೀಸರ ಮುಂದೆ ಅಮಾಯಕನಂತೆ ನಾಟಕವಾಡಿದ್ದ ಪತಿಯನ್ನು ಅರೆಸ್ಟ್ ಮಾಡುವಲ್ಲಿ ಬೆಂಗಳೂರಿನ ಬಾಗಲೂಟು ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೆಹಬೂಬ್ ಪಾಷಾ(50) ಬಂಧಿತ ಆರೋಪಿ. ಆ.25 ರಂದು ಈತ ತನ್ನ ಪತ್ನಿ ಮಮ್ತಾಜ್ಳನ್ನು ಯಾರೋ ಕೊಲೆ ಮಾಡಿರುವುದಾಗಿ ದೂರು ದಾಖಲಿಸಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಮಹಬೂಬ್ ಪಾಷಾ ತನ್ನ ಪತ್ನಿ ಮಮ್ತಾಜ್ ಜೊತೆಗೆ ಬಾಗಲೂರಿನಲ್ಲಿ ವಾಸವಾಗಿದ್ದ. ಕೌಟುಂಬಿಕ ಕಾರಣಗಳಿಂದ ಪತ್ನಿಯೊಡನೆ ಆಗಾಗೆ ಜಗಳ ನಡೆಯುತ್ತಿದ್ದು, ಭಾನುವಾರ ಜಗಳ ವಿಕೋಪಕ್ಕೆ ತಿರುಗಿತ್ತು. ಕುಪಿತಗೊಂಡ ಪಾಷಾ ತನ್ನ ಪತ್ನಿಯನ್ನು […]
ಕಾಪು ಪುರಸಭೆ ಚುನಾವಣೆ; ಎಸ್ ಡಿಪಿಐ ಸದಸ್ಯೆ ಬಿಜೆಪಿ ಸೇರ್ಪಡೆ, ಉಪಾಧ್ಯಕ್ಷೆಯಾಗಿ ಆಯ್ಕೆ

ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಆಪರೇಷನ್ ಕಮಲ ಸದ್ದು ಮಾಡಿದ್ದು, ಎಸ್ಡಿಪಿಐಗೆ ಭಾರತೀಯ ಜನತಾ ಪಕ್ಷ ಆಪರೇಷನ್ ಮಾಡಿದೆ. ಎಸ್ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ /ಉಪಾಧ್ಯಕ್ಷ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ […]
ಉಪ್ಪಿನಂಗಡಿ: ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಅರೆಸ್ಟ್

ಉಪ್ಪಿನಂಗಡಿ: ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್(27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಆರೋಪಿಯು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪರಿಯಶಾಂತಿ, […]
ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ಬಸವರಾಜ್ ಬೊಮ್ಮಯಿ

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸಿವಿಲ್ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ ವಕೀಲ ಜಗದೀಶ್ ಮಹದೇವ್ ವಿರುದ್ಧವು ಕೂಡ ನಿರ್ಬಂಧಕಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿ ಪ್ರಸಾರ ಮಾಡಿದಂತೆ ದಾವೇ ಹೂಡಿದ್ದಾರೆ. ಬಸವರಾಜ್ ಬೊಮ್ಮಾಯಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಳೆ ಕೋರ್ಟ್ ಆದೇಶ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂಕೋರ್ಟ್, ಕೆ.ಜೆ ಜಾರ್ಜ್ ಗೆ ರಿಲೀಫ್ ಕೊಟ್ಟ ವರದಿಯಲ್ಲೇನಿತ್ತು?

DySP ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಹಾಗು ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಸಿಬಿಐ, 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ. ಬದಲಾಗಿ ಒಂದೆರಡು […]
ಚಿಕ್ಕಮಗಳೂರು: ಸರಕಾರದ ಹಣವನ್ನು ಪ್ರಿಯತಮೆಯ ಖಾತೆಗೆ ಹಾಕಿದ ಅಧಿಕಾರಿ

ಚಿಕ್ಕಮಗಳೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಎಫ್.ಓ. ಅಧಿಕಾರಿ ಓರ್ವ ರಾಣಿಝರಿ, ಬಂಡಾಜೆ ಫಾಲ್ಸ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಂಚಿಸಿ, ಸರ್ಕಾರಕ್ಕೆ ಬರುವ ಲಕ್ಷಾಂತರ ರೂಪಾಯಿಯನ್ನು ಆತನ ಪ್ರಿಯತಮೆಯ ಖಾತೆಗೆ ವರ್ಗಾಯಿಸಿರುವ ಬಗ್ಗೆ ವರದಿಯಾಗಿದೆ. ಡಿ.ಆರ್.ಎಫ್.ಓ. ಚಂದನ್ ಗೌಡ ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.9000ರೂ. ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು. […]
ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿ ಹಾಕಿ ಕೊಟ್ಟ ಅತ್ತೆ

ಅತ್ತೆಯೋರ್ವಳು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಯ ಜೀವನೋಪಾಯಕ್ಕೆ ಹೊಸ ದಾರಿ ಮಾಡಿಕೊಟ್ಟು ಸುದ್ದಿಯಾಗಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕು ನೀರಲಗಿಯಲ್ಲಿ ಅತ್ತೆಯೊಬ್ಬರು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿಯನ್ನು ಮಾಡಿಕೊಟ್ಟಿದ್ದಾರೆ. ಈ ಮೂಲಕ ಆದರ್ಶ ಅತ್ತೆಯಾಗಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಯೋಜನವನ್ನು ಪಡೆದು ಸೊಸೆಯ ಬದುಕಿಗೆ ಅತ್ತೆ ಹೊಸ ದಾರಿ ಕಂಡುಕೊಂಡಿದ್ದಾರೆ. ಈ ಮೂಲಕ ಈ ಅತ್ತೆ ಸೊಸೆ […]
ದರ್ಶನ್ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಿದ್ದಾರೆ. ಬೇಗೂರು ಇನ್ಸ್ಪೆಕ್ಟರ್ ಕೃಷ್ಣ ಕುಮಾರ್, ರೌಡಿಶೀಟರ್ಗಳ ಜತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್ನಲ್ಲಿ ಎಲ್ಲರು ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು, ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧ ಇದ್ದರೂ ಸಿಗರೇಟ್ ಹೇಗೆ ಸಿಕ್ಕಿತು ಎಂದು ತನಿಖೆ ನಡೆಸಲಿದ್ದಾರೆ. ಇನ್ನೂ ಎರಡನೇ ಪ್ರಕರಣದ […]
ಕಾರ್ಕಳ; ಅತ್ಯಾಚಾರ ಪ್ರಕರಣದಲ್ಲಿ ಬಂಧಿತ 3ನೇ ಆರೋಪಿ ಬಿಜೆಪಿ ಕಾರ್ಯಕರ್ತ!

ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಮೂರನೇ ಆರೋಪಿ ಕಾರ್ಕಳ ತೆಲ್ಲರು ನಿವಾಸಿ ಅಭಯ್ ನನ್ನು ಬಂಧಿಸಲಾಗಿದೆ. ಈತ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎಂದು ವರದಿಯಾಗಿದೆ. ಅಭಯ್ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡ ನಂತರ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. […]