Breaking News :

ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ  ಗಣರಾಜ್ಯೋತ್ಸವ  ಆಚರಣೆ 

  ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ […]

ಪಾಲಿಬೆಟ್ಟ: ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ – ರೆಡ್ ಯುನೈಟೆಡ್ ಊಟಿ ತಂಡ ಚಾಂಪಿಯನ್

  ಜನವಾಹಿನಿ News ಪಾಲಿಬೆಟ್ಟ : ಯಂಗ್ ಇಂಡಿಯಾ ಯೂತ್ ಕ್ಲಬ್ ನ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ ಮಟ್ಟದ ಸೂಪರ್ ಫೈ ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ ವರಣರಂಜಿತ ತೆರೆಕಂಡಿದೆ. ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯ ಅಂತಿಮ ಫೈನಲ್ ಪಂದ್ಯಾಟದಲ್ಲಿ ಕ್ಲಾಸಿಕ್ ಸ್ಪೋರ್ಟ್ ಕ್ಲಬ್ ಮತ್ತು ರೆಡ್ ಯುನೈಟೆಡ್ ಊಟಿ ತಂಡದ ನಡುವೆ ನಡೆದ ರೋಮಾಂಚನಕಾರಿ ಪಂದ್ಯಾವಳಿಯಲ್ಲಿ 3-0 ಗೋಲುಗಳಿಂದ ರೆಡ್ ಯುನೈಟೆಡ್ ಊಟಿ ತಂಡ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ […]

ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ : ನಾಲ್ಕಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

    ಜನವಾಹಿನಿ News ಬಂಟ್ವಾಳ : ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಸಂತೋಷ್ ಎಂಬವರ ಮಾಲಕತ್ವದ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಟೈಲರ್ ಶಾಪ್,ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಘಟನಾ ಸ್ಥಳದ ಸುತ್ತಮುತ್ತ ಹಲವಾರು […]

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

ಜನವಾಹಿನಿ News ಮಡಿಕೇರಿ : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ […]

ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು

ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ […]

ಮೈಸೂರು : ಅರಮನೆ ಬಳಿ ಸ್ಪೋಟ : ಓರ್ವ ಸಾವು ಹಲವರ ಸ್ಥಿತಿ ಗಂಭೀರ

  ಜನವಾಹಿನಿ News ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ. ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್‌ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡು […]

ಪ್ರಧಾನಿಗೆ ಅವಹೇಳನ ಪ್ರಕರಣ : ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್‌, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು […]

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ..!

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು […]

ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಲೀಗ್ ಗೆ ಶಾಸಕ ಪೊನ್ನಣ್ಣರಿಂದ ಚಾಲನೆ 

  ಜನವಾಹಿನಿ News ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ಜರಗಿತು. ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ. ಈ ಪಂದ್ಯಾಟವು ವಕೀಲರಿಗೆ ಹಬ್ಬದ […]

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ 

  ಜನವಾಹಿನಿ News ಮಡಿಕೇರಿ : 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2025-26ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 1, 2025 ರಿಂದ ಡಿಸೆಂಬರ್ 31, 2025ರ ಅವಧಿಯಲ್ಲಿ […]