ಮಂಗಳೂರು; ಐವನ್ ಡಿಸೋಜಾ ಮನೆಗೆ ಕಲ್ಲೆಸೆತ

ಮಂಗಳೂರು: ವಿಧಾನಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಐವನ್ ಡಿಸೋಜಾ ಅವರ ವೆಲೆನ್ಸಿಯಾದಲ್ಲಿದ್ದ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದ ಅವರ ಮನೆಯ ಕಿಟಕಿಯ ಗಾಜಿಗೆ ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿ ಮೃತ್ಯು

ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ. […]
ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕುಮಾರಸ್ವಾಮಿಯನ್ನು ಬಂಧಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸದ್ಯಕ್ಕೆ ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿ ಮೇಲೆ ಈಗಾಗಲೇ ಲೋಕಾಯುಕ್ತ ಹಾಗೂ ಎಸಿಬಿ ಸಂಸ್ಥೆಗಳು ತನಿಖೆ ಮಾಡಿವೆ. ಕುಮಾರಸ್ವಾಮಿ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ. ಈ ಹಿನ್ನೆಲೆ ಲೋಕಾಯುಕ್ತ ಸಂಸ್ಥೆ ಪ್ರಾಸಿಕ್ಯೂಷನ್ ಗೆ ಪರವಾನಗಿ ನೀಡುವಂತೆ ರಾಜ್ಯಪಾಲರನ್ನು ಕೇಳಿದ್ದಾರೆ. ಕುಮಾರಸ್ವಾಮಿಗೆ ಭಯ ಬಂದಿದೆ. […]
ಬೆಟ್ಟದಿಂದ ಉರುಳಿ ಬಂದ ಬೃಹತ್ ಗಾತ್ರದ ಬಂಡೆ; ಕೂದಳೆಲೆ ಅಂತರದಲ್ಲಿ ಪಾರಾದ 20ಕ್ಕೂ ಅಧಿಕ ಜನ

ಮಳೆಯಿಂದಾಗಿ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲುಬಂಡೆ ಉರುಳಿದ್ದು, ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ಸಂಗಾಪುರದ 2ನೇ ವಾಡರ್ ಗದ್ವಾಲ್ ಏರಿಯಾದ ಸಮೀಪದಲ್ಲಿರುವ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿದೆ. ಐದಾರು ಮನೆಗಳಿಗೆ ಹಾನಿಯಾಗುವುದು ಕೂದಲೆಳೆಯ ಅಂತರದಿಂದ ತಪ್ಪಿ ಹೋಗಿದೆ. ಉರುಳಿ ಬಂದ ಬಂಡೆ ಕುಡಿಯುವ ನೀರಿಗಾಗಿ ಹಾಕಲಾಗಿದ್ದ ನಾಲ್ಕು ಇಂಚು ಗಾತ್ರದ ಕಬ್ಬಿಣದ ಪೈಪ್ ನಿಂದಾಗಿ ನಿಂತುಕೊಂಡಿದೆ. ಇದರಿಂದ ನಾಲ್ಕೈದು ಮನೆಯಲ್ಲಿ ವಾಸವಿದ್ದ ಸುಮಾರು 20ಕ್ಕೂ ಹೆಚ್ಚು ಜನರ […]
ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬ

ಮೈಸೂರಿನ ಹೂಟಗಳ್ಳಿಯಲ್ಲಿ ಕಾಲೇಜು ಹಾಸ್ಟೆಲ್ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಪ್ರಕರಣ ಇದೀಗ ವಿಭಿನ್ನ ತಿರುವು ಪಡೆದುಕೊಂಡಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿ. ಜಯಪ್ರಾರ್ಥನಾ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತಿದ್ದರು. ಊಟದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ […]
ರಾಯಚೂರು: ದರ್ಗಾವೊಂದರಲ್ಲಿ ಕಂಡು ಬಂದ ಅಚ್ಚರಿಯ ಬೆಳವಣಿಗೆ; ಮೂಕ ವಿಸ್ಮಿತರಾದ ಜನ

ರಾಯಚೂರು: ದರ್ಗಾದಲ್ಲಿ ಅಚ್ವರಿಯ ಬೆಳವಣಿಗೆ ನಡೆದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಆನಾಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣರ ಬಾವಿ ದರ್ಗಾ ಶರೀಫ್ನಲ್ಲಿರುವ 3 ಮಜಾರಗಳು ಉಸಿರಾಡುತ್ತಿವೆ. ನೂರಾರು ವರ್ಷಗಳ ಧರ್ಮ ಗುರುಗಳ ಗೋರಿ ಉಸಿರಾಟ ಕುತೂಹಲ ಮೂಡಿಸಿದೆ. ಪ್ರತೀ ವರ್ಷ ಹಜರತ್ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ಉರುಸ್ ವೇಳೆಯೇ ಗೋರಿಗಳು ಉಸಿರಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಉರುಸ್ನ 40 ದಿನಗಳ ಕಾಲ ಮಾತ್ರ ಗೋರಿಗಳು ಉಸಿರಾಡುತ್ತವೆಯಂತೆ. ಗೋರಿಯ ಉಸಿರಾಟದಿಂದ ಹೂಗಳು ಪುಟಿಯುತ್ತವೆ. […]
ಪುತ್ತೂರು ಇರಿತ ಪ್ರಕರಣ; ಶಿಕ್ಷಕಿ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತ ಬಾಲಕಿ

ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕಿಯ ಕೈಗೆ ಇರಿತ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಬಾಲಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಹಾಗೂ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿಯು ಗಂಭೀರವಾದ ಆರೋಪ ಮಾಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕಿ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ವ್ಯಾಪಕವಾದ ಆಗ್ರಹ ವ್ಯಕ್ತವಾಗಿದೆ. ಇದರ ಬೆನ್ನಲ್ಲಿ […]
ಪುತ್ತೂರು; ವಿದ್ಯಾರ್ಥಿನಿಗೆ ಇರಿತ ಪ್ರಕರಣ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು; ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಬಂದ ಪರಿಚಯಸ್ಥ ವಿದ್ಯಾರ್ಥಿ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಇದನ್ನು ನಿರಾಕರಿಸಿದಾಗ ಬಾಲಕಿಗೆ ಆತನ ಕೈಯ್ಯಲ್ಲಿದ್ದ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರು: ಪುಟ್ಬಾಲ್ ಆಟದ ವಿಚಾರದಲ್ಲಿ ಕಿಡ್ನಾಪ್ ಮಾಡಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದ ವೇಳೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದು, ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು […]
ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಬೆದರಿಸಿ ಲಿಂಗ ಪರಿವರ್ತನೆ? ಮಂಗಳ ಮುಖಿಯರ ವಿರುದ್ಧ ಗಂಭೀರ ಆರೋಪ

ಸಿಲಿಕಾನ್ ಸಿಟಿಯಲ್ಲಿ ಮಂಗಳಮುಖಿಯರು ಟೀ ಅಂಗಡಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಯುವಕನನ್ನು ಲಿಂಗ ಪರಿವರ್ತನೆ ಮಾಡಿ ಭಿಕ್ಷಾಟನೆಗೆ ಒತ್ತಾಯಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಫ್ರೇಜರ್ ಟೌನ್ ನಲ್ಲಿ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎನ್ನುವ ಐದು ಮಂದಿ ವಿರುದ್ಧ ಕಸೀಪಾ ಅಲಿಯಾಸ್ ಮೊಹಮ್ಮದ್ ಅಬೂಬಕ್ಕರ್ ಸೇಠ್ ಪುಲಿಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ? ನಾನು ಮೂರು ವರ್ಷಗಳ ಹಿಂದೆ ಅಂಬೇಡ್ಕರ್ ಕಾಲೇಜ್ ಬಳಿ ಬರ್ಕತ್ ಎಂಬುವವರ ಟೀ ಅಂಗಡಿಯಲ್ಲಿ […]