Breaking News :

ಉಡುಪಿ; ಗಾಂಜಾ ನಶೆಯಲ್ಲಿ ತಳವಾರು ಝಳಪಿಸಿದ ಗ್ಯಾಂಗ್; ಇಬ್ಬರಿಗೆ ಗಾಯ

ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ ಝಳಪಿಸಿದ ಘಟನೆ ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಾಲ್ಕೈದು ಜನರಿಗೆ ಗಂಭೀರವಾಗಿ ಗಾಯವಾಗಿದೆ. ಘಟನೆಗೆ ಸಂಬಂಧಿಸಿ ವಕ್ವಾಡಿಯ ಆದರ್ಶ(33), ಎಡ್ವರ್ಡ್(35), ಗಣೇಶ್ ಕುಂಭಾಶಿ(28), ಗೋವರ್ಧನ್(32) ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಪರಾರಿ ಆಗಿದ್ದು, ಪೊಲೀಸ್‌ರು ಹುಡುಕಾಟ ನಡೆಸಿದ್ದಾರೆ. ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದಾಂಧಲೆ ಮಾಡಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಆಟೋ, ಬೈಕ್ ಮೇಲು […]

ರಾಜ್ಯಪಾಲರ ನಿರ್ಧಾರದ ವಿರುದ್ಧ ಹೈಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯಪಾಲರ […]

ಶಾಲಾ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೃತ್ಯದ ಹಿಂದೆ ಅಪ್ರಾಪ್ತರು!

ಮುಳಬಾಗಿಲು ಬಳಿ ಶಾಲಾ ಶಿಕ್ಷಕಿಯನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 14ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ (43) ಎಂಬುವವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆಯೇ ಇಂದು ತಿರುಪತಿಯಲ್ಲಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ […]

ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಸಿಎಂ ಇಬ್ರಾಹಿಂ ವಾಗ್ಧಾಳಿ

ಮೂಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಕೇಂದ್ರ ಸಚಿವ ಸಿಎಂ‌ ಇಬ್ರಾಹಿಂ ಕೆಂಡಾಮಂಡಲರಾಗಿದ್ದು, ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ಟಗರು ಇದ್ದಂತೆ ಧೈರ್ಯ ಹೇಳಿದ್ದೇನೆ. ಮೊದಲು ಸಿಎಂ ಜೊತೆಯಲ್ಲಿ ನಾನು ಇರಲಿಲ್ಲ. ಆದರೆ ಈಗ ಅವರ ಜೊತೆಯಲ್ಲಿ ಇರುತ್ತೇನೆ […]

ಮೌಲಾನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಜನ

ಬಾಗಲಕೋಟೆ : ತರಕಾರಿ ಮಾರುಕಟ್ಟೆಯಲ್ಲಿ ನಡೆದ ಸಣ್ಣ‌ ಜಗಳ, ವಿಕೋಪಕ್ಕೆ ತಿರುಗಿ ಮೌಲಾನಾ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೌಲಾನಾ ಮೇಲೆ‌ ಕಾರ್ತಿಕ‌ ಮತ್ತು ಪ್ರೀತಮ್, ನಾಗರಾಜ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ,‌ ಮುಸ್ಲಿಂ ಸಮುದಾಯದ ಪ್ರಮುಖರು, ರಾತ್ರಿ ನವನಗರ‌ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮುಸ್ಲಿಂ‌ ಮುಖಂಡರನ್ನು ಪೊಲೀಸರು ಸಮಾಧಾನಪಡಿಸಿದ್ದು, ಆರೋಪಿಗಳಾದ ಕಾರ್ತಿಕ‌ ಮತ್ತು ಪ್ರೀತಮ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಾಜ ಎಂಬಾತ […]

ವಿಟ್ಲ; ಉರಿಮಜಲು ಬಳಿ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ; ತನಿಖೆಯ ವೇಳೆ ಕಾರಣ ಬಯಲು

ವಿಟ್ಲದ ಉರಿಮಜಲು ಎಂಬಲ್ಲಿ ಹಾಡಹಗಲೇ ರಿಕ್ಷಾ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗೆ ಕಾರ್ಯಡಿ ನಿವಾಸಿ ಆಪೀ ಚೂರಿಯಿಂದ ಇರಿದಿದ್ದ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಶರೀಫ್ ಜೊತೆ ತಗಾದೆಯನ್ನು ತೆಗೆದ ಆಫೀ ಬಳಿಕ ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿತ್ತು. ಗಾಯಗೊಂಡಿರುವ ಶರೀಫ್ ನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ರಾಜ್ಯಪಾಲ ಆಗೋಕೆ ನೀನು ನಾಲಾಯಕ್; ಗೆಹ್ಲೂಟ್ ವಿರುದ್ಧ ಕಾಂಗ್ರೆಸ್ ಶಾಸಕ ತೀವ್ರ ವಾಗ್ಧಾಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಿಂದ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯಪಾಲರ ನಿಲುವನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ  ಕಾಂಗ್ರೆಸ್ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್ ಕೊಡ್ತಿರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ […]

ಪ್ರಾಸಿಕ್ಯೂಷನ್​ಗೆ ಅನುಮತಿ; ಸಿದ್ದರಾಮಯ್ಯ ಮುಂದಿನ ನಡೆಯೇನು?

ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮೋದನೆ ನೀಡಿದ್ದಾರೆ. ಇದರ ಬೆನ್ನಲ್ಲಿ ದೂರುದಾರರ ದೂರಿಗೆ ತೂಕ ಬಂದಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುವ ಅಧಿಕಾರವಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆಯೂ ಹಲವಾರು ಆಯ್ಕೆಗಳಿವೆ. ಮೇಲ್ನೋಟಕ್ಕೆ ತನಿಖೆಗೆ ಅರ್ಹ ಎಂದು ಕಂಡು ಬಂದರೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅದೇಶ ನೀಡಬಹುದು. ನ್ಯಾಯಾಲಯದ ಮುಂದೆ ಹಾಜರಾಗಲು ಮುಖ್ಯಮಂತ್ರಿಗಳಿಗೆ ಸಮನ್ಸ್‌ ನೀಡಬಹುದು. ಈ ದೂರಿನಲ್ಲಿ ಯಾವುದೇ ಹುರುಳಿಲ್ಲ […]

ಕ್ಷೌರ ಮಾಡುವ ವಿಚಾರದಲ್ಲಿ ಗಲಾಟೆ: ಓರ್ವನ ಕೊಲೆ

ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ  ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ. ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದಾನೆ. ಕಟಿಂಗ್ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ. ನಿನ್ನೆ ಕಟಿಂಗ್ ಮಾಡಿಸಿಕೊಳ್ಳಲು ಯಮನೂರಸ್ವಾಮಿ ಬಂಡಿಹಾಳ ಕಟಿಂಗ್ ಶಾಪ್​ಗೆ ಬಂದಿದ್ದರು.ಈ ವೇಳೆ ಕ್ಷೌರಿಕ ಮುದಕಪ್ಪ ಹಡಪದ ಹಾಗೂ ಯಮನೂರಸ್ವಾಮಿ ಬಂಡಿಹಾಳ ನಡುವೆ ಜಗಳ ಶುರುವಾಗಿತ್ತು. ಆಗ ಮುದಕಪ್ಪ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ […]

ಸರಕಾರಿ ಬಸ್ & ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು […]