Breaking News :

ಪೆರ್ನೆ ಬಳಿ ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ; ಲಾರಿ ಚಾಲಕ ಮೃತ್ಯು

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಸ್ಸಿನಲ್ಲಿದ್ದ […]

ಮೂಡಬಿದ್ರೆ; ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ; ಮೂವರು ಪೊಲೀಸ್ ವಶಕ್ಕೆ

ಮೂಡಬಿದಿರೆ: ಪೊಲೀಸ್‌ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜಾತಿ ನಿಂದನೆಗೈದ ಆರೋಪದಲ್ಲಿ ಮೂವರನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮುಡಾ ಸದಸ್ಯ ಪ್ರಕಾಶ್‌, ಅಬ್ದುಲ್‌ ಸತ್ತಾರ್‌ ಮತ್ತು ವಿಜೇತ್‌ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪೊಲೀಸ್‌ ಠಾಣೆಯ ಪಿಎಸ್‌ ಐ ಕೃಷ್ಣಪ್ಪ ಎಂಬವರು ಬಸ್‌ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಹೈಮಾಸ್ಟ್‌ ದೀಪಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್‌ ಧರಿಸದೆ ತ್ರಿಪಲ್‌ ರೈಡ್‌ನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್‌ಐ ಬೈದಿದ್ದಾರೆ […]

ಮಣಿಪಾಲ; ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಮೃತ್ಯು

ಮಣಿಪಾಲ; ಕಾರಿನ ಗ್ಲಾಸ್ ಹಾಕಿ ಕಾರಿನಲ್ಲಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. […]

ಮತ್ತೆ ಭೂಕುಸಿತ; ಮಂಗಳೂರು- ಬೆಂಗಳೂರು ರೈಲು ಸಂಚಾರ ಬಂದ್

ಹಾಸನ; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿತವಾಗಿದೆ. ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಸ್ವಾತಂತ್ರ್ಯದ ದಿನ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ; ಐವರು ಪೊಲೀಸ್ ವಶಕ್ಕೆ

ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ತುಮಕೂರಿನ ಜಿಕೆಬಿಎಂಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೆ ಬಂದ ಯುವಕರ ಗುಂಪು ಯುದ್ಧ ಪೀಡಿತ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನಕ್ಕೆ ಯತ್ನ ನಡೆಸಿದ ಹಿನ್ನೆಲೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಣಿಗಲ್‌ ಪಟ್ಟಣದ ಷರೀಫ್‌ ಮೊಹಲ್ಲಾ ನಿವಾಸಿಗಳಾದ ಜಾವೀದ್‌ ಪಾಷಾ ಅಲಿಯಾಸ್ ಚೋಟು (23), ನ್ಯಾಮತ್‌ ಉಲ್ಲಾ (28) ಮತ್ತು ಫುರ್ಕಾನ್‌ (18) ಬಂಧಿತರು. ಫುರ್ಕಾನ್‌ ವಿದ್ಯಾರ್ಥಿಯಾಗಿದ್ದು, ಜಾವೀದ್‌ ಪೈಂಟಿಂಗ್‌ ಕೆಲಸ ಮಾಡುತ್ತಿದ್ದ. ಇದಲ್ಲದೆ ಇಬ್ಬರು ಬಾಲಕರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಕುಣಿಗಲ್‌ ಸರ್ಕಾರಿ […]

ಮಂಗಳೂರು; ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಶಾಲಾ ಶಿಕ್ಷಕಿ ಶಾಹಿದಾ ಮೃತ್ಯು

ಮಂಗಳೂರು ಬಂದರ್ ನಲ್ಲಿ  ನಡೆದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಶಾಲೆಗೆ ಹೋಗಿದ್ದ ಶಾಹಿದಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಮಾಜಿ ಕಾರ್ಪೊರೇಟರ್ ಮೇಲೆ‌ ತಂಡದಿಂದ ಹಲ್ಲೆ

ಮಾಜಿ ಕಾರ್ಪೊರೇಟರ್ ಓರ್ವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಈ ವೇಳೆ ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ತೆರಳಿದ್ದಾರೆ. […]

ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುತ್ತಿದ್ದ ಬಾಲಕ ವಿದ್ಯುತ್ ಶಾಕ್ ಹೊಡೆದು ಮೃತ್ಯು

ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುತ್ತಿದ್ದಾಗ ಕಂಬದಿಂದ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ಗ್ರಾಮದಲ್ಲಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ.ಹೆಚ್. ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ಹೇಮಂತ್ ಇಂದು ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುವಾಗ ವಿದ್ಯುತ್ ಕಂಬದಿಂದ ಗಯಾ ವೈರ್​ಗೆ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ ಅಧಿಕಾರಿಗಳಿಗೆ ಗ್ರಾಮಸ್ಥರ […]

ಚನ್ನಪಟ್ಟಣ ಉಪಚುನಾವಣೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧೆ

ಚನ್ನಪಟ್ಟಣದ ಉಪಚುನಾವಣೆ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಡಿಕೆ ಶಿವಕುಮಾರ್, ಮುಂಬರುವ ಚನ್ನಪಟ್ಟಣದ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎನ್ ಡಿಎ ಮೈತ್ರಿಯಲ್ಲಿ ಈಗಾಗಲೇ ಮಾಜಿ ಸಚಿವ ಸಿಪಿ ಯೋಗೇಶ್ವರ್ ಕೂಡ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿಜೆಪಿಯಲ್ಲಿ ಸಹಜವಾಗಿ ಅಸಮಾಧಾನ ಕಂಡುಬರುತ್ತಿದೆ. […]

ಒಂದೇ ಕುಟುಂಬದ ಮೂವರು ಹೇಮಾವತಿ ನದಿ ಕಾಲುವೆಗೆ ಹಾರಿ ಆತ್ಮಹತ್ಯೆ

ಸಾಲ ವಾಪಸ್ಸು ತೀರಿಸಲಾಗದೆ, ಒಂದೇ ಕುಟುಂಬದ ಮೂವರು ಹೇಮಾವತಿ ನದಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೆ ಪತಿ, ಪತ್ನಿ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೇಮಾವತಿ ನದಿ ಕಾಲುವೆಗೆ ಹಾರಿ ಪತಿ ಶ್ರೀನಿವಾಸ್, ಪತ್ನಿ ಶ್ವೇತಾ ಹಾಗೂ ಪುತ್ರಿ ನಾಗಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮಂಗಳವಾರ ಮೂವರು ಮನೆಯಿಂದ ಕಾಣೆಯಾಗಿದ್ದರು. ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಕಾಣೆಯಾದ ಬಳಿಕ ಕುಟುಂಬಸ್ಥರು ಎಲ್ಲೆಡೆ […]