Breaking News :

ಬೈಕ್ ಗೆ ಪಿಕಪ್ ಢಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಬೈಕ್ ಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಅಗಸರಕೋಣೆ ಬಳಿ ನಡೆದಿದೆ. ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ಸಂಭವಿಸಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದ […]

ಶಿವಮೊಗ್ಗ; ಒಂದೇ ಮನೆಯ‌ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ

ಶಿವಮೊಗ್ಗ ಕ್ಲಾರ್ಕ್‌ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭುವನೇಶ್ವರಿ, ಮಾರುತಿ ಹಾಗೂ ದರ್ಶನ್‌ ಮೃತರು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಭುವನೇಶ್ವರಿ ಹಾಗೂ ಅವರ ತಮ್ಮ ಹಾಗೂ ಮಗ ಸಾವನ್ನಪ್ಪಿದವರು. ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಜಯ್‌ ಗ್ಯಾರೇಜ್‌ ಬಳಿಇವರ ಮನೆಯಿದ್ದು, ಇವರಿಗೆ ಪೋನ್ ಸಂಪರ್ಕ ಸಿಗದ ಹಿನ್ನೆಲೆ ಸಂಬಂಧಿಕರೊಬ್ಬರು ಮನೆಯ ಬಳಿಗೆ ಬಂದು ವಿಚಾರಿಸಿದ್ದಾರೆ. ಈ […]

ಚನ್ನಪಟ್ಟಣ ಉಪಚುನಾವಣೆ; ಎನ್ ಡಿಎ ಮೈತ್ರಿಕೂಟಕ್ಕೆ ತಲೆ ನೋವಾದ ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷವು ಟಿಕೆಟ್‌ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆಯನ್ನು ಅವರು ಕೊಟ್ಟಿದ್ದು, ಅವರ ನಡೆ ಎನ್ ಡಿಎ ಮೈತ್ರಿ ಕೂಟಕ್ಕೆ ದೊಡ್ಡ ತಲೆನೋವಾಗುವ ಸಂಭವವಿದೆ. ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ […]

ಹುಟ್ಟು ಹಬ್ಬದ ದಿನವೇ ಇಬ್ಬರು ಯುವಕರು ಅಪಘಾತದಲ್ಲಿ ಮೃತ್ಯು

ಭೀಕರ ಅಪಘಾತದಲ್ಲಿ ಬರ್ತ್ ಡೆ ಪಾರ್ಟಿ ಮುಗಿಸಿ ವಾಪಾಸ್ಸಾಗುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಬೀದರ್ ಜಿಲ್ಲೆ ಔರಾದ್‌ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ನಡೆದಿದೆ. ಔರಾದ್‌ ತಾಲೂಕಿನ ಬೇಲೂರ್‌ (ಎನ್)‌ ಗ್ರಾಮದ ಹಣಮಂತ ಚನ್ನಪ್ಪ (20), ಗಣೇಶ ಧನರಾಜ್ (19) ಮೃತರು. ಹಣಮಂತನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜಂಬಗಿ ಗ್ರಾಮದಲ್ಲಿ ಬರ್ತಡೇ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುವಾಗ ಬೈಕ್‌ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ‌. ಈ ವೇಳೆ ಇಬ್ಬರೂ ರಸ್ತೆ ಪಕ್ಕದ ಕಂದಕದಲ್ಲಿ […]

ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗಭೂಮಿ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ

ಮಂಗಳೂರು; ಖ್ಯಾತ ತುಳು ರಂಗಭೂಮಿ ಕಲಾವಿದ, ಒರಿಯರ್ದೊರಿ ಅಸಲ್ ತುಳು ಸಿನಿಮಾದ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಅವರು ಇಂದು ನಿಧನರಾಗಿದ್ದಾರೆ. ಅಂಬ್ಲಮೊಗರುವಿನ ಮನೆಯಲ್ಲಿ ಅಸ್ವಸ್ಥರಾಗಿದ್ದ  ಅಶೋಕ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಅವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ನಾಟಕ ತಂಡದಲ್ಲಿ ಕಲಾ ಸೇವೆ ಸಲ್ಲಿಸಿದ್ದರು. ಇವರ ಅಗಲಿಕೆಗೆ ತುಳು ಸಿನಿಮಾರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.  

ವಿಟ್ಲ; ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಠಾಣೆಗೆ ಹಿಂಜಾವೇ ಮುಖಂಡರು ಭೇಟಿ

ವಿಟ್ಲ : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕನೋರ್ವ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ವಿಟ್ಲ ಸಮೀಪದ ಕುದ್ದು ಪದವಿನಿಂದ ಕೇಳಿ ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ ಮುಖಂಡರು ವಿಟ್ಲ ಠಾಣೆಗೆ ಭೇಟಿ ನೀಡಿದ್ದಾರೆ‌. ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ […]

ವಿಟ್ಲ; ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಸ್ಕೂಟರ್ ಸವಾರನ ಸ್ಥಿತಿ ಗಂಭೀರ

ವಿಟ್ಲ; ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಅತ್ಮಹತ್ಯೆ; ಪತ್ನಿ ವಿರುದ್ಧ ಕಿರುಕುಳ ಆರೋಪಿಸಿದ ಕುಟುಂಬ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್ ನಲ್ಲಿ ನಡೆದಿದೆ. ಮಂಜುನಾಥ (38) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಮಂಜುನಾಥ್ ಗೆ ಪತ್ನಿ ಚೇತನ ಪತಿ ಕಿರುಕುಳ ನೀಡುತ್ತಿದ್ದರು ಎಂದು ಚೇತನಾ ವಿರುದ್ಧ ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ […]

ಮಂಗಳೂರು; ಟಾರ್ಗೆಟ್ ಇಲ್ಯಾಸ್ ಮರ್ಡರ್ ಕೇಸ್ ಆರೋಪಿಯ ಬರ್ಬರ ಹತ್ಯೆ

ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀ‌ರ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಕಲ್ಲಾಪು ಬಳಿ ಭಾನುವಾರ ರಾತ್ರಿ ನಡೆದಿದೆ. ತನ್ನ ತಾಯಿಯೊಂದಿಗೆ ಕಲ್ಲಾಪು ರೆಸ್ಟೋರೆಂಟ್‌ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಇದ್ದ ತಂಡ ಹತ್ಯೆಗೈದು ಪರಾರಿಯಾಗಿದೆ. ದರೋಡೆ ಕೇಸಿನಲ್ಲಿ ಜೈಲು ಪಾಲಾಗಿದ್ದ ಸಮೀ‌ರ್ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದ ಎಂದು ತಿಳಿದು ಬಂದಿದೆ.  

ಕಾರ್ಕಳ; ಓಮ್ನಿ- ಆಲ್ಟೋ ಕಾರಿನ ನಡುವೆ ಅಪಘಾತ; ಓರ್ವನ ಸ್ಥಿತಿ ಗಂಭೀರ

ಕಾರ್ಕಳ: ಓಮಿನಿ ಮತ್ತು ಆಲ್ಟೊ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ  ಓರ್ವ ಗಂಭೀರವಾಗಿ ಗಾಯಗೊಂಡು ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸಾಣೂರು ಕೋಳಿ ಫಾರಂ ಬಳಿ ನಡೆದಿದೆ. ಅಪಘಾತದಲ್ಲಿ ಓಮಿನಿ ಕಾರಿನಲ್ಲಿದ್ದ ಮೂಡಬಿದ್ರೆ ನಿವಾಸಿಗಳಾದ ಆಫ್ರಿದ್, ಗಂಭೀರವಾಗಿ ಗಾಯಗೊಂಡಿದ್ದು,  ಅನ್ವಿಸ್, ಅಶ್ವಿನ್ ಮತ್ತು ಅಗ್ಮ  ಗಾಯಗೊಂಡಿದ್ದಾರೆ. ಮೂಡುಬಿದಿರೆಯಿಂದ ಕಾರ್ಕಳದ ರೆಸಾಟ್೯ ಕಡೆಗೆ ಬರುತ್ತಿದ್ದ ಓಮಿನಿ ಕಾರು ಹಾಗೂ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ […]