ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ – ಜ್ಞಾನಕ್ಕೆ ಮಿತಿ ಇಲ್ಲ : ಶಾಸಕ ಮಂತರ್ ಗೌಡ

ಜನವಾಹಿನಿ News ಮಡಿಕೇರಿ : ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ. ಯಾವುದೇ ಸುದ್ದಿಯಾದರೂ ಸಕರಾತ್ಮಕ ವಿಮರ್ಶೆ ನೀಡಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕೊಡಗು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂ ನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು […]
ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು : ಶಾಸಕ ಎ.ಎಸ್.ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ‘ಈಗ ಕೃತಕ ಬುದ್ಧಿಮತ್ತೆ (ಎಐ) ಬಂದಿದೆಯಾದರೂ, ಅದು ಎಲ್ಲವನ್ನೂ ಮಾಡುತ್ತದೆ ಎಂದು ಹೇಳಲಾಗದು. […]
ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ : ಸಂಸದ ಯದುವೀರ್ ಒಡೆಯರ್ ಖಂಡನೆ – ಕಾನೂನು ಕ್ರಮ ಕೈಗೊಳ್ಳಲು ಸೂಚನೆ

ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟಿಯಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮದ ನಿಮಿತ್ತ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದನ್ನು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ರವರು ಖಂಡಿಸಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಘಟನೆಯ ವಿವರವನ್ನು ಪಡೆದಿದ್ದು, ಶನಿವಾರ […]
ಹಿಂದೂ ಕಾರ್ಯಕರ್ತನ ಮೇಲಿನ ಹಲ್ಲೆ ಖಂಡನೀಯ : ಎಡಿಕೇರಿ ಪ್ರಸನ್ನ

ಹಿಂದೂಗಳ ಮೇಲಿನ ದೌರ್ಜನ್ಯವನ್ನು ಸಹಿಸಲಾಗದು ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟ್ಟಿಯಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ನಾಪೋಕ್ಲು ಪಟ್ಟಣದಲ್ಲಿ ಪ್ರಚಾರ ನಡೆಸುವ ವೇಳೆ ಶುಕ್ರವಾರ ಹಿಂದೂ ಕಾರ್ಯಕರ್ತ ಗೌತಮ್ ಎಂಬಾತನ ಮೇಲೆ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಮಗ ಸಿದ್ದಿಕ್ ಹಾಗೂ ಇತರರು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಯತ್ನ ಮಾಡಿರುವುದು ಖಂಡನೀಯ ಹಾಗೂ ಎಂದಿಗೂ ಇಂತ ಘೋರ ಘಟನೆಯನ್ನು ಸಹಿಸಲಾಗದು ಎಂದು ಉದ್ಯಮಿ ಸಮಾಜ ಸೇವಕ, ಬಲ್ಲಮಾವಟ್ಟಿಯಲ್ಲಿ ಮೂಲದ ಎಡಿಕೇರಿ ಪ್ರಸನ್ನ ಆಕ್ರೋಶ […]
ನಾಪೋಕ್ಲು ಹಲ್ಲೆ ಪ್ರಕರಣ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಖಂಡನೆ – ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ

ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನು ಕ್ರಮ ಜರುಗಿಸಲಾಗುತ್ತೆ ಉತ್ತಪ್ಪ ಜನವಾಹಿನಿ News ಮಡಿಕೇರಿ : ನಾಪೋಕ್ಲು ವಿನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಆರೋಪಿಗಳು ಎಷ್ಟೇ ಪ್ರಭಾವಶಾಲಿಗಾರೂ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತೆ ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲ ಧರ್ಮದವರಿಗೂ ಕೂಡ ಅವರವರ ಸಮಾವೇಶ, ಸಂಗಮ ಮಾಡಿಕೊಳ್ಳಲು ಅವಕಾಶವಿದೆ, ಇಂದು ನಡೆದ ಹಲ್ಲೆ ನಿಜಕ್ಕೂ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಜಿಲ್ಲೆಯ ವಿವಿಧಡೆ ಎಲ್ಲಾ ಕಡೆ […]
ಬಲಮಾವುಟಿ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು – ಓರ್ವ ಆರೋಪಿ ಅರೆಸ್ಟ್

ಉಳಿದವರ ಬಂಧನಕ್ಕೆ ಪೊಲೀಸರ ತೀವ್ರ ಕಾರ್ಯಚರಣೆ ಜನವಾಹಿನಿ News ಮಡಿಕೇರಿ : ನಾಪೋಕ್ಲುವಿನಲ್ಲಿ ಬಿಗುವಿನ ವಾತವರಣ ಏರ್ಪಟ್ಟಿದ್ದು ಇದೀಗ ಹಿಂದೂ ಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ನೀಡಿದ ದೂರಿನ ಅನ್ವಯ ಆರೋಪಿಗಳ ವಿರುದ್ಧ ಕೊಲೆ ಯತ್ನ ಮೊಕದಮೆ ದಾಖಲು ಪಡಿಸಲಾಗಿ, ಅವರನ್ನು ಬಂಧಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಗೌತಮ್ ಎಂಬುವರು ಅಂಗಡಿ ಒಂದರಲ್ಲಿ ಸಾಮಗ್ರಿಗಳನ್ನು ತೆಗೆಯಲು ಹೋದಾಗ, ಅಂಗಡಿಯಲ್ಲಿದ್ದ ಹಂಸ ಅವರ ಪುತ್ರ ಸುಹೇಲ್ ಎಂಬಾತ ಗೌತಮ್ಮನ ಜೀಪಿನಲ್ಲಿ ಇದ್ದ ಕೇಸರಿ […]
ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ ನೀಡಲು ಸೂಚನೆ

ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ […]
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]