Breaking News :

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ; ಭಾರೀ ಸದ್ದು ಮಾಡಿದ್ದ ಪ್ರಕರಣದ ಅಂತಿಮ ತೀರ್ಪು ಪ್ರಕಟ

ಮಂಗಳೂರು: ದೇಶದ ಎಲ್ಲೆಡೆ ಭಾರೀ ಸುದ್ದಿಯಾಗಿದ್ದ 2012ರ ಜು. 28ರಂದು ನಡೆದಿದ್ದ ಮಂಗಳೂರಿನ ಹೋಂಸ್ಟೇ ದಾಳಿ ಪ್ರಕರಣ ಎಲ್ಲಾ ಆರೋಪಿಗಳು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪುನೀಡಿದೆ. ನ್ಯಾಯಾಧೀಶ ಕಾಂತರಾಜು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದು, ಓರ್ವ ಪತ್ರಕರ್ತ ನವೀನ್ ಸೂರಿಂಜೆ ಮೇಲಿದ್ದ ಪ್ರಕರಣ ನ್ಯಾಯಾಲಯ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ದೋಷ ಮುಕ್ತಗೊಳಿಸಿ […]

ಭಾರೀ ಮಳೆಗೆ ಆಸ್ಪತ್ರೆಯೊಳಗೆ ನುಗ್ಗಿದ ನೀರು; ರೋಗಿಗಳ ಪರದಾಟ

ಭಾರೀ ಮಳೆಯಿಂದ ಸಾರ್ವಜನಿಕ ಆಸ್ಪತ್ರೆಯೊಳಗೆ ನೀರು ನುಗ್ಗಿ ರೋಗಿಗಳು ಪರದಾಡಿದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ಭಾರೀ ಮಳೆಯ ಪರಿಣಾಮ ಚರಂಡಿಯಲ್ಲಿ ಹರಿಯಬೇಕಿದ್ದ ನೀರು ಆಸ್ಪತ್ರೆಯ ವಾರ್ಡ್ ಗಳಲ್ಲಿ ಬಂದು ನಿಂತಿದ್ದು, ಸುಮಾರು ಎರಡೂ ಅಡಿಗೂ ಹೆಚ್ಚು ನೀರು ನಿಂತಿದ್ದರಿಂದ ರೋಗಿಗಳು ರಾತ್ರಿ ನಿದ್ದೆ ಮಾಡದೆ ಪರದಾಡುವಂತಾಗಿದೆ. ಈ ಅವ್ಯವಸ್ಥೆಗೆ  ಸರ್ಕಾರಿ ಆಸ್ಪತ್ರೆಯ ಆಡಳಿತದ ವೈಫಲ್ಯವೇ ಇದಕ್ಕೆಲ್ಲ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಶಾಲಾ ಬಸ್ ಹರಿದು ಅಂಗನವಾಡಿಗೆ ತೆರಳುತ್ತಿದ್ದ 5 ವರ್ಷದ ಬಾಲಕ ಮೃತ್ಯು

ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ‌. ಬಸವರಾಜ್(5) ಮೃತ ಬಾಲಕ. ವಿಜಯಪುರ ಜಿಲ್ಲೆಯ ನೀಡಗುಂಡಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಘಟನೆ ನಡೆದಿದೆ‌. ಬಾಲಕ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಚಾಲನೆಗೆ ಬ್ರೇಕ್: ವಾಹನ ಚಾಲಕರಿಗೆ ಬಹುಮುಖ್ಯ ಮಾಹಿತಿ

ಮಂಗಳೂರು: ಮಳೆ ಹಿನ್ನಲೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ವೇಗಕ್ಕೆ ಮಿತಿ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಆಡಳಿತವು ಜಿಲ್ಲೆಯ ಎನ್‌ಎಚ್-66ನಲ್ಲಿ ಸುರತ್ಕಲ್‌ನಿಂದ ತೊಕ್ಕೊಟ್ಟು ಜಂಕ್ಷನ್‌ವರೆಗೆ ಮತ್ತು ಬಿ.ಸಿ ರೋಡ್ ನಿಂದ ನಂತೂರು ಜಂಕ್ಷನ್ ವರೆಗೆ ಎನ್‌ಎಟಚ್-73 ರಲ್ಲಿ ದ್ವಿಚಕ್ರ, ತ್ರಿಚಕ್ರ ಮತ್ತು ಘನ ವಾಹನಗಳನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಂಟೆಗೆ 60 ಕಿಮೀ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗಿದೆ ಎಂದು ಭಾರತೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ಅನುಷ್ಟಾನ ಘಟಕದ ಯೋಜನಾ […]

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಗೆ ಸರಕಾರಿ ಗೌರವ; ತಗಾದೆ ತೆಗೆದ ಬಸವನಗೌಡ ಪಾಟೀಲ್ ಯತ್ನಾಳ್

ಆಗಸ್ಟ್‌ 2 ರಂದು ಬೆಂಗಳೂರಿನ ಸಿಎಂ ಕಾನ್ವೆನ್ಶನ್‌ನಲ್ಲಿ ಬೆಂಗಳೂರಿನ ಖಾಝಿ ಸ್ವೀಕಾರ ಸಮಾರಂಭ ಮತ್ತು ಕೂರತ್ ತಂಙಳ್ ಅವರ ಅನುಸ್ಮರಣೆ ನಡೆದಿತ್ತು. ಕಾರ್ಯಕ್ರಮಕ್ಕೆ ಇಂಡಿಯನ್ ಗ್ರಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅತಿಥಿಯಾಗಿ ಆಗಮಿಸಿದ್ದರು. ಬೆಂಗಳೂರಿಗೆ ಆಗಮಿಸಿದ್ದ ಉಸ್ತಾದರಿಗೆ ಸರಕಾರಿ ವಾಹನದಲ್ಲಿ ತೆರಳಲು ಅವಕಾಶವನ್ನು ಮಾಡಿಕೊಡಲಾಗಿತ್ತು. ಇದಕ್ಕೆ ಇದೀಗ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಗಾದೆ ತೆಗೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ ಮಾಡಿರುವ ಬಸವನಗೌಡ ಪಾಟೀಲ್ ಯತ್ನಾಳ್, ಸರ್ಕಾರಕ್ಕೆ ಸಂಬಂಧವೇ ಇಲ್ಲದ […]

ಉಡುಪಿ ಬಸ್ ನಲ್ಲಿ ಯುವತಿ ಅಸ್ವಸ್ಥ; ಬಸ್ ನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಸಿಬ್ಬಂದಿಗಳು

ಉಡುಪಿ: ಬಸ್ ನಲ್ಲಿ ತೆರಳುತ್ತಿರುವಾಗ ಯುವತಿಯೋರ್ವಳು ಅಸ್ವಸ್ಥಗೊಂಡಿದ್ದು, ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ನ್ನು ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ  ನಡೆದಿದೆ. ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ  ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಎಚ್ಚೆತ್ತು ಬಸ್ ನ್ನು ನೇರ ಆಸ್ಪತ್ರೆಗೆ ಸಾಗಿಸಿದ್ದಾರೆ. ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಯುವತಿಯ ಮನೆಯವರಿಗೆ ಮಾಹಿತಿ […]

ವಯನಾಡಿನ ರೀತಿಯ ದುರಂತದ ಭೀತಿಯಲ್ಲಿ ಮಂಗಳೂರಿನ ಕೆತ್ತಿಕಲ್ ನಿವಾಸಿಗಳು

ವಯನಾಡಿನಲ್ಲಿ ಭೀಕರ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 360ರ ಗಡಿ ದಾಟಿದೆ. ಇನ್ನು ಕೂಡ 300 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತಕ್ಕೆ ದೇಶವೇ ಬೆಚ್ಚಿಬಿದ್ದಿದೆ. ಸಾಂಭವ್ಯ ಘಟನೆಯನ್ನು ತಡೆಯಲು ವಿವಿಧ ರಾಜ್ಯಗಳು ಮುಂದಾಗಿದೆ. ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಳಿಯೂ ಅಂಥದ್ದೇ ಅನಾಹುತ ಸಂಭವಿಸಬಹುದಾದ ಭೀತಿ ಎದುರಾಗಿದೆ. ಮಂಗಳೂರು ನಗರ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಬಳಿ ಗುಡ್ಡೆ ಮಣ್ಣು ಕುಸಿಯುತ್ತಲೇ ಇದ್ದು ಆತಂಕ ಸೃಷ್ಟಿಸಿದೆ. ಈ ಗುಡ್ಡದ […]

BIG NEWS ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಪಿಎಸ್ಐ ಪರಶುರಾಮ್ ಪ್ರಕರಣದ ಬೆನ್ನಲ್ಲೇ ನಡೆದ ಮತ್ತೊಂದು ಘಟನೆ

ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪಿಎಸ್‌ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಂಪಾಜೆಯಲ್ಲಿ ಬೈಕ್ ಅಪಘಾತ; ಧರ್ಮಸ್ಥಳಕ್ಕೆ ಬರುತ್ತಿದ್ದ ಇಬ್ಬರು ಯುವಕರು ಮೃತ್ಯು

ಮಡಿಕೇರಿ; ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಚೇರಿ ಬಳಿ ನಡೆದಿದೆ. ಮೃತರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ಇವರು ಬುಲೆಟ್ ಬೈಕ್ ನಲ್ಲಿ ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೊಯ್ನಾಡಿನ ಫಾರೆಸ್ಟ್ ಐಬಿ ಬಳಿ ಮುಖ್ಯರಸ್ತೆಯಲ್ಲಿ ರಸ್ತೆ ಬದಿಯ ಮೋರಿಗೆ ವೇಗವಾಗಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ಚರಂಡಿಗೆ ಇಬ್ಬರು ಯುವಕರು ಎಸೆಯಲ್ಪಟ್ಟು […]

ಮಗಳ ಮದುವೆ ಆಮಂತ್ರಣ ಹಂಚಿ ಬಂದವ ಅಪಘಾತದಲ್ಲಿ ಮೃತ್ಯು; ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ

ಮಗಳ ಮದುವೆಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದ ತಂದೆಯೋರ್ವ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಜುನಾಥ್ ಮೃತ ದುರ್ದೈವಿ. ಇವರು ಅಧಿಕಾರಿಯಾಗಿ ಕೆಲಸ‌ ಮಾಡುತ್ತಿದ್ದರು. ಇವರು ಬೆಳಗ್ಗೆ ಆಮಂತ್ರಣ ಪತ್ರಿಕೆ ಹಂಚಿ ರಾತ್ರಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್​​ ಮೇಲೆ ಕಾರು ಕೆಟ್ಟು ನಿಂತಿದೆ ಎಂದು ಅದನ್ನು ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುವಾಗ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು ಅಧಿಕಾರಿ ಮಂಜುನಾಥ್ ಮೃತಪಟ್ಟಿದ್ದಾರೆ. ಆಗಸ್ಟ್ 10ರಂದು ಮೃತ […]