Breaking News :

ಶಿವಮೊಗ್ಗ: ಯುವಕನ ಮೇಲೆ ಹಲ್ಲೆ ನಡೆಸಿದ ತಂಡ; ಯುವಕ ಆಸ್ಪತ್ರೆಗೆ ದಾಖಲು

-ತಬ್ರೀಜ್ ಅಹ್ಮದ್ ಹಲ್ಲೆಗೊಳಗಾದ ಯುವಕ ಶಿವಮೊಗ್ಗ; ಯುವಕನೋರ್ವನಿಗೆ ಮೂವರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಟೌನ್ ಶಿಶುಹಾರ ರಸ್ತೆಯಲ್ಲಿ ನಡೆದಿದೆ. ತಬ್ರೀಜ್ ಅಹಮ್ಮದ್ ಹಲ್ಲೆಗೊಳಗಾದ ಯುವಕ. ಇವರ ಮೇಲೆ ಪ್ರಕಾಶ್, ಮಾರುತಿ, ಮನು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಶಿಶುವಿಹಾರ ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಗೆ ಬಂದು ಮತ್ತೆ ವಾಪಾಸ್ಸಾಗಲು ಬೈಕ್ ಸ್ಟಾರ್ಟ್ ಮಾಡುವಾಗ ಬಂದ ಪ್ರಕಾಶ್, ಮಾರುತಿ, ಮನು, ತಬ್ರೀಜ್ ಗೆ 500 ರೂ. ಹಣ ಕೊಡುವಂತೆ ಕೇಳಿದ್ದಾರೆ. ಈ […]

ಹಿಟ್ ಆಂಡ್ ರನ್ ಗೆ 21 ವರ್ಷದ ಯುವಕ ಬಲಿ

ಹಿಟ್ ಆಂಡ್ ರನ್​ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ. ಆಯುಷ್ ಅಪ್ಪಯ್ಯ (21) ಮೃತ ಯುವಕ. ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಜಂಕ್ಷನ್ ಕಡೆಗೆ ಡಿಯೋ ಬೈಕ್​ನಲ್ಲಿ ಯುವಕ ಹೋಗುತ್ತಿದ್ದನು. ಈ ವೇಳೆ ಕನ್ನಿಂಗ್ ಹ್ಯಾಮ್ ರಸ್ತೆಯ ವಕ್ಫ್ ಬೋರ್ಡ್ ಬಳಿ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಯುವಕನ ತಲೆಗೆ ಗಂಭೀರವಾದ ಗಾಯವಾಗಿದೆ. ಬಳಿಕ ಕೆಲವರು  ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆತ […]

ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೊಡೆದಾಡಿಕೊಂಡ ಉಪನ್ಯಾಸಕರು

ಇಬ್ಬರು ಉಪನ್ಯಾಸಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡಿರುವ ಘಟನೆ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ ನಾಗಾನಂದ ಕೆಂಪರಾಜು ಮತ್ತು ಕನ್ನಡ ಉನ್ಯಾಸಕ ಜೆ.ಜಿ ನಾಗರಾಜ್ ನಡುವೆ ಜಗಳ ನಡೆದಿದೆ. ಗಲಾಟೆಯಲ್ಲಿ ನಾಗರಾಜ್ ಅವರ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ನೇಹಿತರಾಗಿದ್ದ ನಾಗನಂದ ಕೆಂಪರಾಜು ಹಾಗೂ ಜೆ.ಜಿ.ನಾಗರಾಜ ಮಧ್ಯೆ  ಕಳೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ವಿಷಯವಾಗಿ ಮನಸ್ಥಾಪಗಳು […]

ಬೆಂಗಳೂರು: ಕೋರ್ಟ್ ಆವರಣದಲ್ಲಿ ವಕೀಲೆಗೆ ಚೂರಿ ಇರಿತ

ಬೆಂಗಳೂರು:  ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆರೋಪಿ ಜಯರಾಮನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲೆ ವಿಮಾಲ ಮತ್ತು ಜಯರಾಮ ಇಬ್ಬರು ಸ್ನೇಹಿರು. ಇಬ್ಬರು ಇದ್ದ ಖಾಸಗಿ ಕ್ಷಣಗಳನ್ನು ಜಯರಾಮ್‌ ಮೊಬೈಲ್ನಲ್ಲಿ ಶೂಟ್‌ ಮಾಡಿಕೊಂಡು ಬ್ಲಾಕ್‌ ಮೇಲೆ ಮಾಡಿ  ಕೋಟಿಗಟ್ಟಲೆ ಹಣ ಪೀಕಿದ್ದಾನೆ. ನಂತರ ಜಮೀನು ವಿಷಯವಾಗಿ ಇಬ್ಬರಿಗೆ ಜಗಳವಾಗಿ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು […]

ವಾಲ್ಮಿಕಿ ನಿಗಮದ ಹಗರಣದಲ್ಲಿ ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಈಡಿ ಅಧಿಕಾರಿಗಳಿಂದ ಒತ್ತಡದ ಆರೋಪ; ದೂರು ದಾಖಲು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಮಹತ್ತರವಾದ ಬೆಳವಣಿಗೆ ನಡೆದಿದ್ದು, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ , ಮಾಜಿ ಸಚಿವ ನಾಗೇಂದ್ರ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಪ್ರಕರಣ ಕೂಡ ದಾಖಲಾಗಿದೆ. ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ […]

ಅಂಕೋಲಾ ಗುಡ್ಡೆ ಕುಸಿತ ಸ್ಥಳದಲ್ಲಿ 8ನೇ ಮೃತದೇಹ ಪತ್ತೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಸ್ಥಳದಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದ್ದು, ಮೃತರನ್ನು ಉಳುವರೆ ಗ್ರಾಮದ ಸಣ್ಣಿ ಹನುಮತಗೌಡ (61) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿರುವ ಸಿಬ್ಬಂದಿಗಳು ಉಳಿದ ಮೂವರ ಮೃತದೇಹದ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಈವರೆಗೆ ದುರ್ಘಟನೆಯಲ್ಲಿ 8 ಮಂದಿಯ ಮೃತದೇಹ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ. ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ  ಸಂಗೀತಾ(33) ಮತ್ತು ಮಕ್ಕಳಾದ ಪ್ರೀತಿ(13), ಪ್ರಜ್ವಲ್(9) ಆತ್ಮಹತ್ಯೆಗೆ ಯತ್ನಿಸಿದವರು. ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೃದಯ ವಿದ್ರಾಹಕ ಘಟನೆ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೈಕ್‌ ನಲ್ಲಿ ತೆರಳುತ್ತಿದ್ದವರ ಮೇಲೆ ಮರವೊಂದು ಬಿದ್ದು  ಇಬ್ಬರು ಸವಾರರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಮಾಸೂರು ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು. ಇವರು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರು ಬೈಕ್ ನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಸೂರಜ್ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು […]

ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ- ಮಗ ಮೃತ್ಯು

ಬಾತ್‌ರೂಮ್‌ನಲ್ಲಿ ಗೀಸರ್‌ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ಜ್ಯೋತಿ ನಗರದಲ್ಲಿ ನಡೆದಿದೆ. ಶೋಭಾ (40), ದಿಲೀಪ್ (17) ಮೃತ ದುರ್ದೈವಿಗಳು. ದಿಲೀಪ್‌ ಬಿಸಿ ನೀರು ಕಾಯಿಸಲು ಗ್ಯಾಸ್ ಗೀಜರ್ ಆನ್ ಮಾಡಿದ್ದ. ಈ ವೇಳೆ ಅನಿಲ ಸೋರಿಕೆಯಾಗಿ ಆತ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ತಡವಾದರೂ ಮಗ ಬಾತ್ ರೂಂನಿಂದ  ಬಾರದೇ ಇದ್ದಾಗ, ಆತನನ್ನು ಹುಡುಕಿಕೊಂಡು ಬಾತ್‌ರೂಮ್‌ಗೆ ಬಂದ ಶೋಭಾ ವಿಷ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದನ್ನು ಕಂಡು ಇತರರು […]