ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ. ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]
ಧರ್ಮಸ್ಥಳ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ ಖಂಡಿಸಿ ಬೃಹತ್ ವಾಹನ ಜಾಥಾ : ಸೋಮವಾರಪೇಟೆಯಿಂದ ನೂರಾರು ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಭಕ್ತರು

ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಸೋಮವಾರಪೇಟೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. ಪಟ್ಟಣದ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಜಾಥಗೆ ಚಾಲನೆ ದೊರೆತು, ಶನಿವಾರಸಂತೆ, ಕೊಡ್ಲಿಪೇಟೆ, ಶುಕ್ರವಾರಸಂತೆ, ದೋಣಿಗಲ್ಲು, ಗುಂಡ್ಯ ರಾಷ್ಟ್ರಿಯ ಹೆದ್ದಾರಿ ಮಾರ್ಗವಾಗಿ ಧರ್ಮಸ್ಥಳ ತಲುಪಿತು. ಸುಮಾರು150 ವಾಹನಗಳಲ್ಲಿ 500ಕ್ಕೂ ಹೆಚ್ಚು ಭಕ್ತರು ವಾಹನ ಜಾಥದಲ್ಲಿ ಪಾಲ್ಗೊಂಡು, ಬಳಿಕ ಧರ್ಮಸ್ಥಳದ ದೇವಾಲಯ ಆವರಣಕ್ಕೆ ಮೆರವಣಿಗೆ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ […]
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ

ಜನವಾಹಿನಿ NEWS : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]
ನಿಲ್ದಾಣಕ್ಕೆ ಡಿಕ್ಕಿ ಹೊಡೆದ KSRTC ಬಸ್- ಮಗು ಸೇರಿ ಐವರು ಸಾವು, 7 ಮಂದಿಗೆ ಗಾಯ

ಜನವಾಹಿನಿ NEWS ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು […]
ಗೌರಿ ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಪಶ್ಚಿಮಘಟ್ಟದ ಗೌರಿ ಹೂ

✒️ ಲಕ್ಷ್ಮೀಕಾಂತ್ ಕೊಮಾರಪ್ಪ ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನೆಲ್ಲೆಡೆ ಗೌರಿ ಗಣೇಶ್ ಹಬ್ಬವು ಸಂಪ್ರದಾಯಿಕವಾಗಿ ಆಚರಿಸಲ್ಪಡುತ್ತಿದೆ. ಗೌರಿ ಹಬ್ಬದಂದು ಗೌರಿ ಹೂ ವೆಂದೆ ಕರೆಯಲ್ಪಡುವ ಗ್ಲೋರಿಯೊಸಾ ಸುಪರ್ಬಾ(ಅಗ್ನಿಶಿಖೆ) ಎಂಬ ಜಾತಿಯ ಹೂವನ್ನು ಪೂಜೆಯಲ್ಲಿ ಇಟ್ಟು ಪ್ರಾರ್ಥಿಸುವುದು ಗ್ರಾಮೀಣ ಭಾಗದ ವಿಶೇಷ.ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮಲೆನಾಡ ಭಾಗದಲ್ಲಿ ಅರಳಿನಿಂತ ಗೌರಿ ಹೂವು ಹಬ್ಬದ ಸಂಭ್ರಮ ಹೆಚ್ಚಿಸುತ್ತಿವೆ. ಗೌರಿ ಹೂವು ಎಂದು ಕರೆಯಲ್ಪಡುವ ಕೆಂಪು ಅರಿಶಿಣ ಬಣ್ಣದ ಹೂವು ಪಶ್ಚಿಮಘಟ್ಟದ ಸಹಜ ಕಾಡಿನಲ್ಲಿ ತನ್ನಿಷ್ಟಕ್ಕೆ ಅರಳುವ ಒಂದು […]
ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ

ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್ಎಸ್ ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]
ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ

ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]
ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಕುರಿತು ಸಿಎಂ ಗಮನ ಸೆಳೆದ ಶಾಸಕ ಪೊನ್ನಣ್ಣ

ಜನವಾಹಿನಿ NEWS ಮಡಿಕೇರಿ : ಸದನದಲ್ಲಿ ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಇದರ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯಾಗುವಂತೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಬಳಿಕ , ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ವಿಷಯಗಳ ಕುರಿತಾಗಿ ಸವಿವರವಾದ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು.