ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ: ಎ.ಎಸ್.ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ದೀಪ ಬೆಳಗಿ, ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು […]
ಎಸ್ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಕಡ್ಡಾಯ : ಇಂದೇ ಮಾಹಿತಿ ಅಪ್ಡೇಟ್ ಮಾಡಿಸಿ ತಪ್ಪಿದಲ್ಲಿ, ಮತದಾನದ ಹಕ್ಕನ್ನೇ ಕಳೆದುಕೊಳ್ಳುವಿರಿ ಹುಷಾರ್…!

ಜನವಾಹಿನಿ News ಮಡಿಕೇರಿ : ಚುನಾವಣಾ ಆಯೋಗವು ನಡೆಸುವ ಈ ಪರಿಷ್ಕರಣೆ ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಕಡ್ಡಾಯ. ಯಾರಿಗೆ ಅನ್ವಯ: ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದುಹಾಕುವಿಕೆಗಾಗಿ ಇದು ಅನ್ವಯಿಸುತ್ತದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಅಪ್ಡೇಟ್ ಮಾಡುತ್ತಾರೆ. ಎಸ್ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಆಗುವುದರಿಂದ ಪ್ರತಿಯೊಬ್ಬ ಮತದಾರರು ಪರಿಶೀಲನೆಗೆ ಸಹಕರಿಸುವುದು ಮುಖ್ಯ.ಇದು ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ, ಹೊಸ ಮತದಾರರು ಸೇರ್ಪಡೆಗೊಳ್ಳಲು […]
ಮೀನುಗಾರಿಕೆ ಇಲಾಖೆಯ ಮಿಲನ ಭರತ್ ಗೆ ಬೆಳ್ಳಿ ಪದಕ

ಜನವಾಹಿನಿ News ಮಡಿಕೇರಿ : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರ. ಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ […]
ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಭಾಗವಹಿಸುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ […]
ಕೇರಳ ಚುನಾವಣೆ ; 2 ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಪೊನ್ನಣ್ಣ ನೇಮಕ

ಜನವಾಹಿನಿ News ಮಾನಂದವಾಡಿ : ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.
ಟಿ20 ವಿಶ್ವಕಪ್ : ಭಾರತಕ್ಕೆ ಐತಿಹಾಸಿಕ ಗೆಲುವು ; ಮೂರನೇ ಬಾರಿ ಚಾಂಪಿಯನ್ಸ್ ಆದ ಟೀಂ ಇಂಡಿಯಾ

ಜನವಾಹಿನಿ News ಅಹಮದಾಬಾದ್ : 2026ರ ಟಿ20 ವಿಶ್ವಕಪ್ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ಅನ್ನು 96 ರನ್ಗಳಿಂದ ಸೋಲಿಸಿ, ಸತತ ಎರಡನೇ ಬಾರಿಗೆ ಮತ್ತು ದಾಖಲೆಯ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡುವ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗಿಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 255/5 […]
ಟಿ20 ವಿಶ್ವಕಪ್ ಸೆಮಿ ಫೈನಲ್ಸ್: ಇಂಗ್ಲೆಂಡ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಜನವಾಹಿನಿ News ಮುಂಬೈ : ಇಂಗ್ಲೆಂಡ್ ವಿರುದ್ಧ ನಡೆದಿದ್ದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 246 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ಬೃಹತ್ ಮೊತ್ತ ಸಿಡಿಸಿದರೂ ಭಾರತ ಪಂದ್ಯ ಕ್ಷಣ ಕ್ಷಣಕ್ಕೂ ರೋಚಕ […]
ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]
ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]