Breaking News :

ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಕಾರ್ಯಕ್ರಮ

ಮಡಿಕೇರಿ : ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ನಾಳೆ (ಶನಿವಾರ) ಸಂಜೆ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ. ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ […]

ಮಹಿಳಾ ವಿಶ್ವ ಚೆಸ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..!

ಮಹಿಳಾ ವಿಶ್ವ ಚೆಸ್ ಚಾಂಪಿಯನ್ ಶಿಪ್ : ಫೈನಲ್ ನಲ್ಲಿ ಕೊನೆರು ಹಂಪಿ-ದಿವ್ಯಾ ದೇಶಮುಖ್ ಮುಖಾಮುಖಿ ; ಯಾರೇ ಗೆದ್ದರೂ ಭಾರತಕ್ಕೇ ಪ್ರಶಸ್ತಿ..! ನವದೆಹಲಿ : ಭಾರತದ ಇಬ್ಬರು ಮಹಿಳಾ ಚೆಸ್ ಪಟುಗಳು ಇತಿಹಾಸ ನಿರ್ಮಿಸಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿ ಫಿಡೆ ಮಹಿಳಾ ವಿಶ್ವಕಪ್‌ ಪ್ರಶಸ್ತಿ ಸುತ್ತಿನಲ್ಲಿ ಇಬ್ಬರು ಭಾರತೀಯರು ಸೆಣಸುತ್ತಿದ್ದು ಅನುಭವಿ ಆಟಗಾರ್ತಿ ಹಂಪಿ ಕೊನೇರು ಮತ್ತು ಯುವ ಆಟಗಾರ್ತಿ ದಿವ್ಯಾ ದೇಶ್‌ಮುಖ್ ಮುಖಾಮುಖಿಯಾಗಲಿದ್ದಾರೆ . ಈ ಮೂಲಕ ಭಾರತಕ್ಕೆ ಮತ್ತೊಂದು ಐತಿಹಾಸಿಕ ದಿನವಾಗಲಿದೆ. […]

ಸಿದ್ದಾಪುರ : ಜು.27ರಂದು 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ

ಜು.27ರಂದು ಸಿದ್ದಾಪುರದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ ಮಡಿಕೇರಿ : 5 ವರ್ಷಗಳ ಮಕ್ಕಳಿಗೆ ಬಯೋಮೆಟ್ರಿಕ್ ಕಡ್ಡಾಯ ಯುಐಡಿಎಐ ಅಧಿಸೂಚನೆಯ ಪ್ರಕಾರ ಮಕ್ಕಳು ಐದು ವರ್ಷ ಪೂರ್ಣಗೊಳಿಸಿದ ನಂತರ ಆಧಾರ್‌ಗೆ ಬಯೋಮೆಟ್ರಿಕ್ ಮಾಹಿತಿಯನ್ನು ಸೇರಿಸುವುದು ಕಡ್ಡಾಯವನ್ನು ಮಾಡಲಾಗಿದೆ. ನೀವು ನಿಮ್ಮ ಮಗುವಿಗೆ ಏಳು ವರ್ಷದೊಳಗೆ ಅದನ್ನು ನವೀಕರಿಸದಿದ್ದರೆ, ಆಧಾರ್ ಸ್ಥಗಿತಗೊಳುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ. ದಯವಿಟ್ಟು ಪೋಷಕರು 5 ವರ್ಷ ಮೇಲ್ಪಟ್ಟ ತಮ್ಮ ಮಕ್ಕಳ ಆಧಾರ್ ಕಾರ್ಡ್ […]

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು 

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]

ಕರ್ನಾಟಕ ಕಬಡ್ಡಿ ತಂಡದ ನಾಯಕನಾಗಿ ಸಚಿನ್ ಪೂವಯ್ಯ ಆಯ್ಕೆ 

ಕರ್ನಾಟಕ ಕಬಡ್ಡಿ ತಂಡವನ್ನು ನಾಯಕನಾಗಿ ಮುನ್ನಡೆಸಲಿರುವ ಕೊಡಗಿನ ಸಚಿನ್ ಮಡಿಕೇರಿ : ಜುಲೈ 25 ರಿಂದ ಪಂಜಾಬಿನ ಚಂಡೀಗಡದ ಪಂಚಕುಲದಲ್ಲಿ ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆ ವತಿಯಿಂದ ನಡೆಯಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಕೊಡಗಿನ ಸಚಿನ್ ಪೂವಯ್ಯ, ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಕರ್ನಾಟಕ ತಂಡದ ಮ್ಯಾನೇಜ್ಮೆಂಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿರುವ ಆಟಗಾರರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನಲ್ಲಿರುವ ತಮ್ಮ […]

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ 

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ  ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ ಕೊಡಗು : ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸಚಿನ್ ಪೂವಯ್ಯ  ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಸಚಿನ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉಂಜಿಗನಹಳ್ಳಿ ನಿವಾಸಿ ಪೂವಯ್ಯ.ಹೆಚ್.ಎಸ್ ಹಾಗೂ ಸರಸು.ಹೆಚ್.ಪಿ. ದಂಪತಿಗಳ ಪುತ್ರ. ಸಚಿನ್ ಈಗಾಗಲೇ ಜಿಲ್ಲೆ ಹಾಗೂ ರಾಜ್ಯ […]

ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

ವೀರಭದ್ರೇಶ್ವರ ವರ್ಧಂತಿ ಮಹೋತ್ಸವ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ಕೊಡಗು : ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ರಾಷ್ಟ್ರದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸಲಾಯಿತು.  ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮಠಧೀಷರ ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿಮಾಡಿದ ತಂಡ ವೀರಭದ್ರೇಶ್ವರ ಜಯಂತಿಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ […]

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಕೊಡಗು : ಜಿಲ್ಲೆಯ ವಿರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 2025-26ನೇ ಸಾಲಿನ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಇದರಲ್ಲಿ ಜೂನಿಯ‌ರ್ ವಿಭಾಗದಲ್ಲಿ […]

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳದ ಆತಂಕ : ಕೇಂದ್ರಕ್ಕೆ ಯದುವೀರ್ ಮಾಹಿತಿ

ಅಮಿತ್‌ ಶಾ ಭೇಟಿ ಮಾಡಿದ ಯದುವೀರ್‌ ಒಡೆಯರ್‌ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ. ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ […]