Breaking News :

ಮಂಗಳೂರು: ಹಸುವೊಂದಕ್ಕೆ ದಯಾಮರಣ; ಏನಿದು ಅಪರೂಪದ ಸುದ್ದಿ?

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ವ್ಯಾಪ್ತಿಗೆ ಸೇರಿರುವ ಕೊಲ್ಯ ಎನ್ನುವ ಪ್ರದೇಶದಲ್ಲಿ ಹಸುವೊಂದಕ್ಕೆ ಬುಧವಾರ ದಯಾಮರಣ ನೀಡಿರುವ ಬಗ್ಗೆ ವರದಿಯಾಗಿದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಸು ಸಾರ್ವಜನಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿತ್ತು. ಅನವಶ್ಯಕವಾಗಿ ಜರನ್ನು ತಿವಿಯಲು ಹೋಗುತ್ತಿತ್ತು. ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ ಹಸುವಿನ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕಳೆದ ಎರಡು ದಿನಗಳಿಂದಲೂ ಇದೇ ವರ್ತನೆ ತೋರಿಸಿದ್ದ ಹಸುವನ್ನು ಸ್ಥಳೀಯರೇ ಸೇರಿ ಕಟ್ಟಿ ಹಾಕಿದ್ದರು. ಇತ್ತೀಚೆಗೆ ಮಹಿಳೆಯೊಬ್ಬರ ಮೇಲೂ ದಾಳಿ ನಡೆಸಿತ್ತು. ಇನ್ನು ಹಸು […]

ಯೂಸುಫ್ ಅಲಿಯ ಲುಲು ಗ್ರೂಪ್ ನಿಂದ ಭಾರತದ ಅತಿದೊಡ್ಡ “ಶಾಪಿಂಗ್ ಮಾಲ್” ನಿರ್ಮಾಣ; ಎಲ್ಲಿ ಗೊತ್ತಾ?

ಲುಲು ಗ್ರೂಪ್ ಇಂಟರ್‌ನ್ಯಾಶನಲ್ ಗುಜರಾತ್‌ನ ಅಹಮದಾಬಾದ್‌ನಲ್ಲಿ “ಭಾರತದ ಅತಿದೊಡ್ಡ ಶಾಪಿಂಗ್ ಮಾಲ್” ಅನ್ನು ನಿರ್ಮಿಸಲು ಸಿದ್ಧವಾಗಿದೆ. ಲುಲು ಗ್ರೂಪ್, ಭಾರತದ ಪ್ರಮುಖ ನಗರಗಳಲ್ಲಿ ಶಾಪಿಂಗ್ ಮಾಲ್‌ಗಳನ್ನು ಹೊಂದಿದೆ ಮತ್ತು ನಿರ್ವಹಿಸುತ್ತದೆ. ಪ್ರಸ್ತುತ, ಲುಲು ಮಾಲ್‌ಗಳು ಭಾರತದಾದ್ಯಂತ ಆರು ನಗರಗಳಲ್ಲಿ ಬೆಂಗಳೂರು, ಕೊಯಮತ್ತೂರು, ಹೈದರಾಬಾದ್, ಕೊಚ್ಚಿ, ಲಕ್ನೋ ಮತ್ತು ತಿರುವನಂತಪುರಂನಲ್ಲಿ ಮಾಲ್‌ ಹೊಂದಿದೆ. ಕಳೆದ ವರ್ಷ, ಲುಲು ಗ್ರೂಪ್ ಭಾರತದಾದ್ಯಂತ 12 ಹೊಸ ಮಾಲ್‌ಗಳನ್ನು ತೆರೆಯುವ ಯೋಜನೆಯನ್ನು ಘೋಷಿಸಿತು. ಆರು ಮಾಲ್‌ಗಳು ಮತ್ತು ಉತ್ತರ ಪ್ರದೇಶದ ನೋಯ್ಡಾ, ವಾರಣಾಸಿ, […]

ದುಬೈನಲ್ಲಿ 16 ಕೋಟಿ ಲಾಟರಿ ಗೆದ್ದ ಇಬ್ಬರು ಮಲಯಾಳಿಗಳು

ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿರುವ ಕೇರಳ ಮೂಲದ ಇಬ್ಬರಿಗೆ ಬುಧವಾರದಂದು 16 ಕೋಟಿ ರೂ ಬಹುಮಾನ ಬಂದಿದೆ. ಬಹುಮಾನ ಗೆದ್ದ ಮೊದಲ ಗುಂಪಿನಲ್ಲಿ ಮಲಯಾಳಿ ಅಬ್ದುಲ್ ಅಜೀಜ್ ಹೆಸರಿನಲ್ಲಿ ಖರೀದಿಸಿದ ಚೀಟಿಗೆ ಬಹುಮಾನ ಲಭಿಸಿದೆ. 38 ವರ್ಷದ ಅಬ್ದುಲ್ ಅಜೀಜ್ ಅವರು ಆಗಸ್ಟ್ 31 ರಂದು ಖರೀದಿಸಿದ ಟಿಕೆಟ್ ಸಂಖ್ಯೆ 3361 ನೊಂದಿಗೆ ಮಿಲೇನಿಯಂ ಮಿಲಿಯನೇರ್ ಸರಣಿ 472 ರಲ್ಲಿ ವಿಜೇತರಾದರು. ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ಅಜೀಜ್ ಬಹುಮಾನ ವಿಜೇತ […]

ಸುನೀತಾ ವಿಲಿಯಂ, ವಿಲ್ಮೋರ್‌ ಅವರನ್ನು ಬಾಹ್ಯಾಕಾಶದಲ್ಲೇ ಬಿಟ್ಟು ಭೂಮಿಗೆ ವಾಪಾಸ್ಸಾದ ಸ್ಟಾರ್ ಲೈನರ್

ಗಗನಯಾತ್ರಿಗಳಾದ ಸುನೀತಾ ವಿಲಿಯಂ ಹಾಗೂ ಬುಚ್‌ ವಿಲ್ಮೋರ್‌ ಅವಬಾಹ್ಯಾಕಾಶಕ್ಕೆ ಕರೆದೊಯ್ದಿದ್ದ ಬಾಹ್ಯಾಕಾಶ ನೌಕೆ ಸ್ಟಾರ್‌ಲೈನರ್‌ ಅವರಿಬ್ಬರನ್ನೂ ಅಲ್ಲೇ ಬಿಟ್ಟು ಭೂಮಿಗೆ ಮರಳಿದೆ. ಬೋಯಿಂಗ್‌ ಸಂಸ್ಥೆಯ ನೌಕೆ ಸ್ಟಾರ್‌ಲೈನರ್‌ನಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ, ಅದರಲ್ಲಿ ಗಗನಯಾತ್ರಿಗಳನ್ನು ಕರೆಸಿಕೊಳ್ಳುವ ರಿಕ್ಸ್‌ ತೆಗೆದುಕೊಳ್ಳಲು ಇಚ್ಛಿಸದ ನಾಸಾ (NASA),ಅವರಿಲ್ಲದೇ ಸ್ಟಾರ್‌ಲೈನರ್‌ ಅನ್ನು ಮರಳಿ ತರಿಸಿದೆ. ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇದೀಗ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (Internationa Space Station – ISS) ಉಳಿದಿದ್ದಾರೆ. ತಡರಾತ್ರಿ ಐಸ್‌ಎಸ್‌ನಿಂದ ಕಳಚಿಕೊಂಡು ಹೊರಟ ಕ್ಯಾಪ್ಸುಲ್, […]

ಬಂಟ್ವಾಳ: ಭೀಕರ ಕಾರು ಅಪಘಾತ; ನವವಿವಾಹಿತೆ ಸಾವು

ಬಂಟ್ವಾಳ: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ […]

ಶಾಲೆಗೆ ಮಾಂಸಹಾರ ತಂದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಪ್ರಾಂಶುಪಾಲ!

ಶಾಲೆಗೆ ಮಾಂಸಹಾರ ತಂದಿದ್ದಿ ಎಂದು ಆರೋಪಿಸಿ ಪ್ರಾಂಶುಪಾಲನೋರ್ವ ಮುಸ್ಲಿಂ ವಿದ್ಯಾರ್ಥಿಯನ್ನು ಸ್ಕೂಲ್​ನಿಂದ ಅಮಾನತು ಮಾಡಿರುವ ಘಟನೆ ಉತ್ತರಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಅಮ್ರೋಹಾದ ಹಿಲ್ಟನ್​ ಪಬ್ಲಿಕ್​ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿರುವುದನ್ನು ನೋಡಬಹುದಾಗಿದೆ. ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುತ್ತಾನೆಂದು ಬಾಲಕನ ವಿರುದ್ಧ ಪ್ರಾಂಶುಪಾಲರು ಆರೋಪಿಸಿದ್ದಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಯ ತಾಯಿ ತನ್ನ ಮಗನು […]

ಭಾರೀ ಅವಘಢವೊಂದರಿಂದ ಪಾರಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಕದಲ್ಲೇ ಹೈಸ್ಪೀಡ್ ರೈಲು ಹಾದು ಹೋಗಿದ್ದರಿಂದ ಸ್ವಲ್ಪದರಲ್ಲೇ ಅವರು ಅಪಾಯದಿಂದ ಪಾರಾಗಿದ್ದಾರೆ. ಗುರುವಾರ ಉನ್ನತ ಅಧಿಕಾರಿಗಳೊಂದಿಗೆ ಅವರು ಪ್ರವಾಹ ಪೀಡಿತ ಮಧುರಾನಗರದ ಬುಡಮೇರುಗೆ ಭೇಟಿ ನೀಡಿದ್ದರು. ಚಂದ್ರಬಾಬು ನಾಯ್ಡು ಅವರು ರೈಲ್ವೆ ಸೇತುವೆಯ ಮೇಲೆ ನಿಂತು ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೈಸ್ಪೀಡ್ ರೈಲು ಬಂದಿದೆ. ಕೂಡಲೇ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಬದಿಯಲ್ಲಿ ಬಂದು ನಿಂತಿದ್ದರಿಂದ ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಅವರಿಗೆ ಏನೂ ಆಗಲಿಲ್ಲ […]

ಮಂಗಳೂರು: ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ(27) ಮೃತ ದುರ್ದೈವಿ. ಗಣೇಶ ಅವರು ಪಣಂಬೂರಿಗೆ ಕೆಲಸಕ್ಕೆ ಹೋಗುವಾಗ ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಗೆ ವಾಹನವೊಂದು ಢಿಕ್ಕಿ ಹೊಡೆದಿದೆ. ಗಂಭೀರವಾಗಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ […]

ಉದ್ಯೋಗ ಸುದ್ದಿ: ನಮ್ಮ ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ. 5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ […]

2,200 ಕೋಟಿ ರೂ.ಮೊತ್ತದ ಬೃಹತ್‌ ಷೇರು ಮಾರುಕಟ್ಟೆ ವಂಚನೆ ಬಯಲು: 22 ವರ್ಷದ ಯುವಕ ಅರೆಸ್ಟ್

ಅಸ್ಸಾಂನಲ್ಲಿ ಪೊಲೀಸರು 2,200 ಕೋಟಿ ರೂ.ಮೊತ್ತದ ಬೃಹತ್‌ ಷೇರು ಮಾರುಕಟ್ಟೆ ವಂಚನೆಯನ್ನು ಬಯಲಿಗೆಳೆದಿದ್ದು ಇದರ ಮಾಸ್ಟರ್‌ ಮೈಂಡ್‌ 22 ವರ್ಷದ ಸ್ಟಾಕ್‌ ಟ್ರೇಡರ್‌ ಬಿಶಾಲ್‌ ಫುಕಾನ್‌ ಎಂಬಾತನನ್ನು ಬಂಧಿಸಿದ್ದಾರೆ. ದಿಬ್ರುಗಢ ಮೂಲದ ಬಿಶಾಲ್‌ ಫುಕಾನ್ ಕೇವಲ 60 ದಿನಗಳಲ್ಲಿ ಶೇ.30ರಷ್ಟು ಲಾಭ ನೀಡುವುದಾಗಿ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಹೂಡಿಕೆದಾರರಿಗೆ ಆಮಿಷ ಒಡ್ಡಿ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೂಡಿಕೆದಾರರಿಗೆ ವಂಚಿಸುತ್ತಿದ್ದ ಬಿಶಾಲ್‌ ಫುಕಾನ್ ಎಂಬಾತನನ್ನು ಬಂಧಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು […]