ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ

ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]
ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ಸೋಮವಾರಪೇಟೆ186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

ಜನವಾಹಿನಿ NEWS ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ಇಂದು 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಾಲೊಮನ್ ಡೇವಿಡ್ ಮಾತನಾಡಿ ಪ್ರತಿ ವರ್ಷದಂತೆ ಇ ಬಾರಿಯು ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನ […]
ರಾಷ್ಟ್ರ ಮಟ್ಟದ ಎನ್ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್ಸಿಸಿ ಕೆಡೆಟ್ಗಳು ಶಿಸ್ತಿನ ತರಬೇತಿ, […]
ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ : ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಪ್ರಯತ್ನ : ಬಸವರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ರಾಗಿ (ಡಿಡಿಪಿಐ ಆಗಿ) ಬಸವರಾಜು ಸೋಮವಾರ (ಸೆ.1 ರಂದು) ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ಇದೀಗ ಬೇರೆಡೆಗೆ ವರ್ಗಾವಣೆಗೊಂಡಿರುವ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ […]
ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ನ ಪಾತ್ರ ಮಹತ್ತರವಾದದ್ದು : ರೆ.ಫಾ.ಅವಿನಾಶ್

ಜನವಾಹಿನಿ NEWS ಸೋಮವಾರಪೇಟೆ : ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು, ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಜಿಲ್ಲಾ […]
ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಉಪ ಅಧೀಕ್ಷಕರು

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು […]
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ

ಜನವಾಹಿನಿ NEWS : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]
ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಲಿಕೋಪಕರಣ, ಕ್ರೀಡಾ ಸಾಮಗ್ರಿ ವಿತರಣೆ

ಜನವಾಹಿನಿ NEWS ಸಿದ್ದಾಪುರ: ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳ ಮನಸ್ಸಿನಲ್ಲಿ ನಗುವು ಮತ್ತು ಕಲಿಕೆಯ ಬೆಳಕು ತುಂಬುವ ಕಾರ್ಯವನ್ನು ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸ್ವಯಂಸೇವಕರು ಯಶಸ್ವಿಯಾಗಿ ನೆರವೇರಿಸಿದರು. ಆಗಸ್ಟ್ ತಿಂಗಳಲ್ಲಿ ನಡೆದ ಅಭಿಯಾನದಲ್ಲಿ 85 ಸಿಸ್ಕೋ ಸ್ವಯಂಸೇವಕರು ಪಾಲ್ಗೊಂಡು, ಐದು ಸರ್ಕಾರಿ ಶಾಲೆಗಳ 600ಕ್ಕೂ ಹೆಚ್ಚು ಮಕ್ಕಳಿಗೆ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಿದರು. ಆಗಸ್ಟ್ 14ರಂದು ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ […]