Breaking News :

ನರ್ಸಿಂಗ್ ವಿದ್ಯಾರ್ಥಿಗಳ ಪದವಿ ಹಬ್ಬ : “ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” :  ಶ್ರೀಕಾಂತ್ ಫುಲಾರಿ

  ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ಎರಡನೇ ಘಟಿಕೋತ್ಸವ ಸಮಾರಂಭ ಜನವಾಹಿನಿ News ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರಿ ಶುಶ್ರೂಷಾ ಕಾಲೇಜಿನ ಎರಡನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹಾಯಕ ನಿರ್ದೇಶಕರು ನರ್ಸಿಂಗ್ ಶಿಕ್ಷಣ ವಿಭಾಗ, ವೈದ್ಯಕೀಯ ನಿರ್ದೇಶನಾಲಯ ಬೆಂಗಳೂರು ಶ್ರೀ ಶ್ರೀಕಾಂತ್ ಫುಲಾರಿ ರವರು ತಮ್ಮ ಭಾಷಣದಲ್ಲಿ 89 ವಿದ್ಯಾರ್ಥಿಗಳು ಪದವಿ ಸ್ವೀಕರಿಸುತ್ತಿರುವುದು ನನಗೆ ಹೆಮ್ಮೆಯಾಗುತ್ತಿದೆ. ವೈಧ್ಯಕೀಯ […]

ಬಿ.ಎನ್.ಚರಿಷ್ಮಾ ಗೆ 5ನೇ ರ‌್ಯಾಂಕ್

  ಜನವಾಹಿನಿ News ಮಡಿಕೇರಿ :  ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಇಲ್ಲಿ ನಡೆದ ಜುಲೈ-ಡಿಸೆಂಬರ್-2025ನೇ ರೆಗ್ಯೂಲರ್ ಡಿಸಿಎಂ ಅಧಿವೇಶನದ ಅಂತಿಮ ಪರೀಕ್ಷೆಯಲ್ಲಿ ಸದರಿಯವರು “5ನೇ” ರ‌್ಯಾಂಕ್ ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.

ಕನ್ನಡ ಭಾಷೆ ಬೆಳವಣಿಗೆ ಹಾಗೂ ಭಾಷೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವಲ್ಲಿ ದತ್ತಿ ಉಪನ್ಯಾಸ ಗಳ ಪಾತ್ರ ಮಹತ್ವದ್ದು : ಡಾ.ಕೆ.ಜಿ.ವೀಣಾ 

    ಜನವಾಹಿನಿ News ವಿರಾಜಪೇಟೆ : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯ, ಭಾಷೆ , ನಾಡು, ಸಂಸ್ಕೃತಿ , ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ಪ್ರಸ್ತುತ ಕಾಲದಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಕೆ.ಜಿ.ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾವೇರಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ. ಎಂ ಜಿ […]

ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

  ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ‌ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ‌ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ‌ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.‌ಎಂ.ಸಿ. ಸುಧಾಕರ ಭಾಗವಹಿಸುವರು.‌ ಸಂಸದ‌ ಕ್ಯಾ. ಬ್ರಿಜೇಶ್ ಚೌಟ […]

ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ – ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ  – ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ

  ಜನವಾಹಿನಿ News ಮಡಿಕೇರಿ : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. […]

ಮಾ.25 ರಿಂದ ಉದ್ಯೋಗ ಮೇಳ 

  ಜನವಾಹಿನಿ News ಮಡಿಕೇರಿ : ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ರೀಡ್‍ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ […]

ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]

SSLC ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ಧತೆ

      ಜನವಾಹಿನಿ News ಮಡಿಕೇರಿ :  ನಾಳೆಯಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಇವರಲ್ಲಿ ಬಾಲಕರು 3,049, ಹಾಗೆಯೇ ಬಾಲಕಿಯರು 3,134 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ 399 […]

ಉಚಿತ ಸ್ವ-ಉದ್ಯೋಗ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ 

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಕೂಡಿಗೆಯಲ್ಲಿರುವ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ವಿವರ […]

ಸಾಧಿಸಲು ಹಳ್ಳಿ, ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯ : ಪೂಜಾ ಸಜೇಶ್

  ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು : ಗಣ್ಯರ ಅಭಿಮತ ಜನವಾಹಿನಿ News ವಿರಾಜಪೇಟೆ : ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ ಕಾಣುವಂತಾಗಬೇಕು ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಅಭಿಮತ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವಿರಾಜಪೇಟೆ ಸಂಯುಕ್ತ ಆಶ್ರಯದಲ್ಲಿ ಕಲ್ತೋಡು […]